ಮಾಗಡಿಯಲ್ಲಿ ಪತ್ರಕರ್ತರ ಭವನಕ್ಕೆ ಭೂಮಿಪೂಜೆ

KannadaprabhaNewsNetwork |  
Published : Dec 26, 2025, 01:00 AM IST
ಸುರೇಶ ಪಾಟೀಲ, ನೂತನ ಅಧ್ಯಕ್ಷ. | Kannada Prabha

ಸಾರಾಂಶ

ಮಾಗಡಿ: ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಪತ್ರಕರ್ತರ ಭವನ ನಿರ್ಮಾಣಕ್ಕೆ ಸರಕಾರ ಬದ್ದವಾಗಿದೆ ಎಂದು ಉಸ್ತವಾರಿ ಸಚಿವ ರಾಮಲಿಂಗರೆಡ್ಡಿ ಹೇಳಿದರು.

ಮಾಗಡಿ: ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಪತ್ರಕರ್ತರ ಭವನ ನಿರ್ಮಾಣಕ್ಕೆ ಸರಕಾರ ಬದ್ದವಾಗಿದೆ ಎಂದು ಉಸ್ತವಾರಿ ಸಚಿವ ರಾಮಲಿಂಗರೆಡ್ಡಿ ಹೇಳಿದರು.

ಪಟ್ಟಣದ ತಿರುಮಲೆ ಮಾಗಡಿ ಮುಖ್ಯರಸ್ತೆಯ ಗುಂಡಯ್ಯನಬಾವಿ ಎದುರು ನೂತನ ಪತ್ರಿಕಾಭವನ ಹಾಗೂ ಕನ್ನಡ ಭವನದ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು, ಸಂವಿಧಾನದ ನಾಲ್ಕನೇ ಅಂಗವಾದ ಪತ್ರಿಕಾರಂಗ ಸ್ವಾಸ್ತ್ಯ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ರಾಜ್ಯದಲ್ಲಿ ಪ್ರತಿ ತಾಲೂಕು, ಜಿಲ್ಲೆಯಲ್ಲಿ ಭವನ ಅವಶ್ಯವಾಗಿದೆ ಎಂದರು.

ಸಮಾಜದ ಅಂಕುಡೊಂಕನ್ನು ತಿದ್ದುವ ಪತ್ರಕರ್ತರಿಗೆ ಸೂಕ್ತ ಭವನ ಅವಶ್ಯಕ. ಶಾಸಕ ಬಾಲಕೃಷ್ಣ ಅವರು, ಅತ್ಯಂತ ಕಾಳಜಿಯಿಂದ ಪತ್ರಕರ್ತರಿಗೆ ಸೂಕ್ತ ನಿವೇಶನ ಕೊಡಿಸುವ ಮೂಲಕ ಉತ್ತಮ ಪತ್ರಿಕಾ ಭವನ ಹಾಗೂ ಕನ್ನಡ ಭವನ ನಿರ್ಮಾಣಕ್ಕೆ ಸಹಕಾರ ನೀಡಿದ್ದಾರೆ. ನಾನೂ ಸಹ ಜಿಲ್ಲಾ ವ್ಯಾಪ್ತಿಯ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವ್ಯವಸ್ಥೆ ಕಲ್ಪಿಸಿದ್ದೇನೆ. ಆರೋಗ್ಯ ವಿಮೆ ಮಾಡಲು ಚಿಂತಿಸಲಾಗಿದೆ ಎಂದರು.

ಶಾಸಕ ಬಾಲಕೃಷ್ಣ ಮಾತನಾಡಿ, ಹಲವು ವರ್ಷಗಳಿಂದಲೂ ಭವನ ನಿರ್ಮಿಸಿಕೊಡುವಂತೆ ಪತ್ರಕರ್ತರು ಬೇಡಿಕೆ ಇಟ್ಟಿದ್ದರು. ಅವರ ಮನವಿಗೆ ಸ್ಪಂದಿಸಿದ್ದೇನೆ. ಅದರಲ್ಲೂ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಟಿ.ಕೆ.ರಾಮು ಸೇರಿದಂತೆ ಹಲವಾರು ಪತ್ರಕರ್ತರು ಪ್ರತಿದಿನ ನನ್ನ ಬೆನ್ನು ಹತ್ತಿದ್ದರಿಂದ ಒಂದು ಒಳ್ಳೆಯ ಸ್ಥಳವನ್ನೇ ಗುರುತಿಸಿ ಕನ್ನಡ ಭವನ ಮತ್ತು ಪತ್ರಕರ್ತರ ಭವನ ನಿರ್ಮಾಣಕ್ಕೆ ಸಂಘಕ್ಕೆ ಮಂಜೂರಾತಿ ಕೊಡಿಸಿದ್ದೇನೆ. ಏಕೆಂದರೆ ಕನ್ನಡಮ್ಮನ ಗುಡಿ ಪಕ್ಕದಲ್ಲಿಯೇ ಪತ್ರಕರ್ತರ ಭವನವೂ ಇದ್ದರೆ ಕನ್ನಡಮ್ಮನ ಸೇವೆಗೆ ನಿರಂತರಾಗಿರುತ್ತದೆ. ಈ ನಿಟ್ಟಿನಲ್ಲಿ ಆದಷ್ಟು ಬೇಗ ಕಟ್ಟಡ ನಿರ್ಮಾಣಕ್ಕೆ ಈಗಾಗಲೇ ಎರಡುವರೆ ಕೋಟಿ ಅನುದಾನ ಮಂಜೂರಾತಿ ತಂದಿದ್ದು, ವರ್ಷದೊಳಗೆ ಕಟ್ಟಡ ನಿರ್ಮಿಸಿಕೊಡುವ ಭರವಸೆ ನೀಡಿದರು.

ಮಾಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಟಿ.ಕೆ.ರಾಮು ಮಾತನಾಡಿ, ಸಂವಿಧಾನದ ನಾಲ್ಕೇ ಅಂಗ ಎನ್ನುವ ಪತ್ರಕರ್ತರ ಸಂಘಕ್ಕೆ ಇಲ್ಲಿನವರೆವಿಗೂ ಸ್ಥಳವಿರಲಿಲ್ಲ, ಹಲವು ವರ್ಷಗಳಿಂದಲೂ ನಮ್ಮ ಬೇಡಿಕೆಯಿತ್ತು. ಇದನ್ನು ಶಾಸಕ ಬಾಲಕೃಷ್ಣ, ತಮ್ಮಾಜಿ ಎಚ್.ಎನ್.ಅಶೋಕ್‌ ಕಾಳಜಿ ವಹಿಸಿ ನಿವೇಶನ ಕೊಡಿಸುವಲ್ಲಿ ಶ್ರಮಿಸಿದ್ದಾರೆ. ಜತೆಗೆ ಪುರಸಭೆ ಆಡಳಿತ ಮಂಡಲಿ, ಮುಖ್ಯಾಧಿಕಾರಿಗಳು, ಸಿಬ್ಬಂದಿಗಳಾದ ರವಿ, ಶಾಸಕರ ಆಪ್ತ ಸಹಾಯಕ ವೆಂಕಟೇಶ್ ಹಾಗೂ ಕೃಷಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಶಿವಶೆಂಕರ್ ಸಹಕಾರ ನೀಡಿದ್ದರು. ಇವರೆಲ್ಲರಿಗೂ ಪತ್ರಕರ್ತರ ಪರವಾಗಿ ಅಭಿನಂದನೆ ಸಲ್ಲಿಸಿದರು.

ಬಿಡಿಸಿಸಿ ಬ್ಯಾಂಕ್ ಜಿಲ್ಲಾಧ್ಯಕ್ಷ ಎಚ್.ಎನ್.ಅಶೋಕ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಟಿ.ಶಿವರಾಜು, ಕಾರ್ಯದರ್ಶಿ ಎಂ.ಎಸ್.ಸಿದ್ದಲಿಂಗೇಶ್ವರ್, ಮಾಗಡಿ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶ್ರೀನಿವಾಸ್, ಉಪಾಧ್ಯಕ್ಷ ಜಿ.ನರಸಿಂಹಮೂರ್ತಿ, ಖಜಾಂಚಿ ತೇಜಮೂರ್ತಿ, ಕಾರ್ಯದರ್ಶಿ ಮಂಜುನಾಥ್, ಕಸ್ತೂರಿ ಕಿರಣ್, ನಿರ್ದೆಶಕರಾದ ಶ್ರೀಧರ್, ತಿಲಕರಾಜು, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ನಾಗೇಶ್, ತಾಲೂಕು ಅಧ್ಯಕ್ಷ ತಿ.ನಾ. ಪದ್ಮನಾಭ್, ಪುರಸಭಾಧ್ಯಕ್ಷ ಶಿವರುದ್ರಮ್ಮ ವಿಜಯಕುಮಾರ್, ರಮ್ಯಾ ನರಸಿಂಹಮೂರ್ತಿ, ಗುರುಸ್ವಾಮಿ, ಶಿವಪ್ರಸಾದ್, ಎಂ.ಆರ್.ಮಂಜುನಾಥ್, ಟಿ.ಆರ್.ರಾಮಕೃಷ್ಣಯ್ಯ, ಶಿವಕುಮಾರ್, ಕಡೆಮನೆ ಕುಮಾರ್, ರೂಪೇಶ್ ಇತರರಿದ್ದರು.

(ಫೋಟೋ ಕ್ಯಾಫ್ಷನ್‌)

ಮಾಗಡಿ ಪಟ್ಟಣದ ನೂತನ ಪರ್ತಕರ್ತರ ಭವನ ಹಾಗೂ ಕನ್ನಡ ಭವನದ ನಿರ್ಮಾಣಕ್ಕೆ ಉಸ್ತವಾರಿ ಸಚಿವ ರಾಮಲಿಂಗರೆಡ್ಡಿ ಗುದ್ದಲಿ ಪೂಜೆ ನೆರವೇರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಟಲ್ ಬಿಹಾರಿ ವಾಜಪೇಯಿ ಮೌಲ್ಯಾಧಾರಿತ ರಾಜಕಾರಣಿ
11 ರಂದು ಅಖಿಲ ನಾಮಧಾರಿ ಗೌಡರ ಭವನದ 25ನೇ ವರ್ಷದ ಬೆಳ್ಳಿಹಬ್ಬದ ಸಂಭ್ರಮ