ಮರ ಬೆಳೆಸುವುದು ನಮ್ಮ ಕರ್ತವ್ಯ: ಡಿವೈಎಸ್ಪಿ ಚೈತ್ರಾ

KannadaprabhaNewsNetwork |  
Published : Jul 08, 2024, 12:30 AM IST
ಚಿತ್ರ 2 | Kannada Prabha

ಸಾರಾಂಶ

grow greenery in hyriyur

ಹಿರಿಯೂರು: ಗಿಡ ನೆಡುವುದು ಸರ್ಕಾರ ಮತ್ತು ಸಂಘ ಸಂಸ್ಥೆಗಳ ಕಾರ್ಯ ಎಂದುಕೊಳ್ಳದೆ ಪ್ರತಿಯೊಬ್ಬರು ಜವಾಬ್ದಾರಿ ಹೊರಬೇಕು ಎಂದು ಡಿವೈಎಸ್ ಪಿ ಚೈತ್ರಾ ಅಭಿಪ್ರಾಯಪಟ್ಟರು. ನಗರದ ಟಿಬಿ ವೃತ್ತದಲ್ಲಿರುವ ಪೊಲೀಸ್ ಕ್ವಾರ್ಟರ್ಸ್ ನಲ್ಲಿ ವನಮಹೋತ್ಸವದ ಅಂಗವಾಗಿ ಗಿಡ ನೆಟ್ಟು ಮಾತನಾಡಿದರು.

ಸಾವಿರಾರು ಗಿಡ ಮರಗಳನ್ನು ನೆಟ್ಟು ಬೆಳೆಸಿದ ಸಾಲು ಮರದ ತಿಮ್ಮಕ್ಕ ನಮಗೆಲ್ಲಾ ಮಾದರಿ. ಮಹಿಳೆಯರು ತಮ್ಮ ದೈನಂದಿನ ಬದುಕಿನ ಜೊತೆಗೆ ತಮ್ಮ ತಮ್ಮ ಮನೆಗಳ ಸುತ್ತಮುತ್ತ ಪರಿಸರ ಸುಂದರವಾಗಿರಲು ಗಿಡ ನೆಡಬೇಕು ಎಂದರು.

ಸಿಪಿಐ ರಾಘವೇಂದ್ರ ಕಾಂಡಿಕೆ ಮಾತನಾಡಿ, ಮರಗಳನ್ನು ಬೆಳೆಸುವ ಹವ್ಯಾಸ ಕೇವಲ ವನಮಹೋತ್ಸವ ದಿನಕ್ಕೆ ಮಾತ್ರ ಸೀಮಿತವಾಗಬಾರದು ಎಂದರು.

ಪಿಎಸ್ ಐ ಶಶಿಕಲಾ, ಸಿಬ್ಬಂದಿಯಾದ ಚಿದಾನಂದ, ರಾಮಕೃಷ್ಣ, ನಳಿನ,ರವಿ, ವಿಶಾಲಾಕ್ಷಿ, ರಾಘು,ಸುನೀಲ್, ಶ್ರೀನಿವಾಸ್, ಶಾರದಾ,ಶೋಭಾ, ಮಂಜುನಾಥ್, ಸಂತೋಷ್ ಇದ್ದರು.

----ಚಿತ್ರ 1,2

ನಗರದ ಟಿಬಿ ವೃತ್ತದಲ್ಲಿರುವ ಪೊಲೀಸ್ ಕ್ವಾರ್ಟರ್ಸ್ ನಲ್ಲಿ ವನಮಹೋತ್ಸವದ ಪ್ರಯುಕ್ತ ಡಿವೈಎಸ್ ಪಿ ಚೈತ್ರಾ ಸಸಿ ನೆಟ್ಟರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ