ಶಾಸಕರ ನೇತೃತ್ವದಲ್ಲಿ ಹಲವು ಮುಖಂಡರು ಕೈ ಸೇರ್ಪಡೆಕನ್ನಡಪ್ರಭ ವಾರ್ತೆ ಕೊಪ್ಪಳ
ನಗರದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಳೆದ ಹತ್ತು ವರ್ಷದಲ್ಲಿ ಮೋದಿ ಜಾರಿಗೊಳಿಸಿದ ಜನಪರ ಯೋಜನೆ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪರ ಕಾರ್ಯಕ್ರಮಗಳ ಬಗ್ಗೆ ಬಹಿರಂಗ ಚರ್ಚೆಯಾಗಲಿ. ಸುಳ್ಳು ಹೇಳಿ ಜನರನ್ನು ಮರಳು ಮಾಡುವ ಜಾಯಮಾನ ಕಾಂಗ್ರೆಸ್ನದಲ್ಲ. ಸಮಾಜದಲ್ಲಿ ಆರ್ಥಿಕವಾಗಿ, ಹಿಂದುಳಿದ ಸಮಾಜಗಳನ್ನು ಮೇಲೆತ್ತುವ ಕೆಲಸ ನಾವು ಮಾಡಿದ್ದೇವೆ. ಅಭಿವೃದ್ಧಿಯಲ್ಲಿ ನಾವೆಂದೂ ರಾಜಕಾರಣ ಮಾಡಿದವರಲ್ಲ. ಹಿಂದಿನ ಸಿಎಂ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರಿಗೂ ಸಾವಿರಾರು ಕೋಟಿ ಅನುದಾನ ನೀಡಿದ್ದೇವೆ. ನಿಮ್ಮ ಸರ್ಕಾರದಲ್ಲಿ ಕಾಂಗ್ರೆಸ್ ಶಾಸಕರಿಗೆ ಎಷ್ಟು ಅನುದಾನ ನೀಡಿದ್ದೀರಿ ಲೆಕ್ಕ ಕೊಡಿ ಎಂದರು.ಕಲ್ಯಾಣ ಯೋಜನೆಗಳು ಮತ್ತು ಸರ್ಕಾರದ ಜನಪರ ಕಾರ್ಯಕ್ರಮ ಮೆಚ್ಚಿ ಅನೇಕ ಮುಖಂಡರು ಮತ್ತು ಕಾರ್ಯಕರ್ತರು ಕಾಂಗ್ರೆಸ್ ಸೇರುವ ಮೂಲಕ ನಮ್ಮ ಕೈಯನ್ನು ಮತ್ತಷ್ಟು ಬಲಪಡಿಸುತ್ತಿದ್ದಾರೆ. ಪಕ್ಷ ಸೇರ್ಪಡೆಗೊಂಡ ಪ್ರತಿಯೊಬ್ಬರನ್ನೂ ಕಾಂಗ್ರೆಸ್ ಎಂದಿಗೂ ಕೈಬಿಡಲ್ಲ. ಮುಂದಿನ ದಿನದಲ್ಲಿ ಎಲ್ಲರಿಗೂ ಸೂಕ್ತ ಸ್ಥಾನಮಾನ ನೀಡುವ ಭರವಸೆ ನಮ್ಮದು. ಎಲ್ಲರೂ ಒಗ್ಗೂಡಿ ಅಭ್ಯರ್ಥಿ ಗೆಲ್ಲಿಸಲು ಶ್ರಮಿಸೋಣ ಎಂದರು.
ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ:
ನಗರದ ಕಾಂಗ್ರೆಸ್ ಮುಖಂಡ ವಿರುಪಾಕ್ಷಯ್ಯ ಗದುಗಿನಮಠ ನಿವಾಸದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಗತ್ ಗದುಗಿನಮಠ, ಈರಣ್ಣ ಟಾಂಗ, ಮಂಜುನಾಥ ಗದುಗಿನಮಠ, ಗವಿಸಿದ್ದಯ್ಯ ಗದುಗಿನಮಠ, ಚಂದ್ರಯ್ಯ ಹಿರೇಮಠ, ಮರ್ದನ್ ಸಾಬ್ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಸಮ್ಮುಖದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.