ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2017ರಲ್ಲಿ ಜಾರಿಗೊಳಿಸಿದ ಜಿ.ಎಸ್.ಟಿಯನ್ನು 8 ವರ್ಷಗಳ ಬಳಿಕ ಸರಳೀಕರಣಗೊಳಿಸಿದ್ದಾರೆ. ನಾಲ್ಕು ಶ್ರೇಣಿಯ ತೆರಿಗೆಯನ್ನು ಮೂರು ಶ್ರೇಣಿಗೆ ಇಳಿಸಿ ಸಾಮಾನ್ಯ ಜನರಿಗೆ ಹೊರೆಯಾಗದಂತೆ ಜಿಎಸ್.ಟಿ 2.0 ಸುಧಾರಣೆಗೊಳಿಸಿದ್ದಾರೆ ಎಂದು ತಿಳಿಸಿದರು.
ಸೆ. 3 ರಂದು ನವದೆಹಲಿಯಲ್ಲಿ ನಡೆದ ಜಿ.ಎಸ್.ಟಿ ಕೌನ್ಸಿಲ್ ನ 56ನೇ ಸಭೆಯಲ್ಲಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದ ಈ ಕ್ರಮ ಜನರ ಮೇಲಿನ ಹೊರೆ ಕಡಿಮೆಗೊಳಿಸಿ ಉದ್ಯಮಗಳ ಬೆಳವಣಿಗೆಗೆ ಸಹಕಾರಿಯಾಗಿದೆ. ಸೆ. 22 ರಿಂದ ಇದು ಜಾರಿಯಾಗಲಿದೆ.ಸರ್ಕಾರ ನಡೆಸಲು ಹಣ ಕೊಡುತ್ತಿರುವವರೇ ಪ್ರಜೆಗಳು. ಹೀಗಾಗಿ ಪ್ರಜೆಗಳು ಕೊಡುವ ಅಧಿಕಾರ ಹಾಗೂ ಹಣ ದೇಶದ ಅಭಿವೃದ್ಧಿಗೆ, ಪ್ರಜೆಗಳ ರಕ್ಷಣೆಗೆ ಸಮರ್ಪಪಕವಾಗಿ ಬಳಕೆಯಾಗಬೇಕು. ಇದರಿಂದ ತೆರಿಗೆ ಸರಳೀಕರಣ ಮಾಡಿದ್ದಾರೆ. ಆರ್ಥಿಕ ಪರಾವಲಂಬನೆಯು ಮನುಷ್ಯನ ಗೌರವ ತೆಗೆಯುತ್ತದೆ. ಕಾಂಗ್ರೆಸ್ ಕಳೆದ 70 ವರ್ಷಗಳ ಆಳ್ವಿಕೆ ಪ್ರಜೆಗಳನ್ನು ಪರಾವಲಂಬಿಯನ್ನಾಗಿಸಿದೆ ಎಂದು ಅವರು ಹೇಳಿದರು.
ಜಿ.ಎಸ್.ಟಿ ಸರಳೀಕರಣದಿಂದಾಗಿ ಪ್ರತಿಯೊಬ್ಬ ಪ್ರಜೆಯು ತನ್ನ ದಿನ ನಿತ್ಯದ ಸರಕನ್ನು ಕೊಳ್ಳುವ ಸಮಯದಲ್ಲಿ ಅವನ ಬಳಿ ಹಣ ಉಳಿಯುತ್ತದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಶಿಕ್ಷಣ ಕ್ಷೇತ್ರದಲ್ಲಿನ ಸರಕುಗಳು ತೆರಿಗೆ ಮುಕ್ತವಾಗಿ ಸಿಗುತ್ತದೆ. ಆರೋಗ್ಯ ಕ್ಷೇತ್ರದಲ್ಲಿಯೂ ಕೂಡ ಬಾರಿ ಬದಲಾವಣೆ ತಂದಿದ್ದು, ಈ ಕ್ಷೇತ್ರದಲ್ಲಿಯೂ ಕೂಡ ತೆರಿಗೆ ಮುಕ್ತವಾಗಿ ಔಷಧ ಸಿಗುತ್ತದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ, ಜಿಲ್ಲಾಧ್ಯಕ್ಷ ಕೆ.ಎನ್. ಸುಬ್ಬಣ್ಣ, ಮುಖಂಡರಾದ ಮಂಗಳಾ ಸೋಮಶೇಖರ್, ಗಿರಿಧರ್, ಕೇಬಲ್ ಮಹೇಶ್, ಮಹೇಶ್ರಾಜ್ಅರಸ್ ಮೊದಲಾದವರು ಇದ್ದರು.
ಬಾಕ್ಸ್ ಸುದ್ದಿಮಸೀದಿ, ಚರ್ಚ್ ಕೇವಲ ಮುಸ್ಲಿಮರಿಗೆ, ಕ್ರೈಸ್ತರಿಗೆ ಸೇರಿದ್ದಲ್ಲ ಎನ್ನಲಿ ನೋಡೋಣಕನ್ನಡಪ್ರಭ ವಾರ್ತೆ ಮೈಸೂರು
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮದ ರಕ್ಷಣೆಗಾಗಿ ನಡೆಯುವ ಯಾವುದೇ ಹೋರಾಟದಲ್ಲೂ ನಾವು ಭಾಗಿ ಆಗುತ್ತೇವೆ. ಹಿಂದೂ ಜಾಗರಣಾ ವೇದಿಕೆ ಕರೆ ನೀಡಿರುವ ಕಾರ್ಯಕ್ರಮದಲ್ಲಿ ನಾನು ಪಾಲ್ಗೊಳ್ಳುತ್ತೇನೆ. ಬಿಜೆಪಿ ಕಾರ್ಯಕರ್ತರೂ ಪಾಲ್ಗೊಳ್ಳುತ್ತಾರೆ ಎಂದರು.