ಕುಕನೂರು:
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜರುಗಿದ ಕುಕನೂರು, ಯಲಬುರ್ಗಾ ತಾಲೂಕಿನ ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯೆಕ್ಷತೆ ವಹಿಸಿ ಮಾತನಾಡಿದ ಅವರು, ಒಂದು ವಿಧಾನಸಭಾ ಕ್ಷೇತ್ರಕ್ಕೆ ವರ್ಷಕ್ಕೆ ಗ್ಯಾರಂಟಿ ಯೋಜನೆಯಲ್ಲಿ ಅಂದಾಜು ₹ 250 ಕೋಟಿ ಹಣ ನೀಡುತ್ತಿದ್ದು ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಿವೆ. ಆದರೆ, ಅರ್ಹ ಅಲ್ಲದವರಿಗೂ ಸಹ ಯೋಜನೆ ಲಾಭ ಸಿಗುತ್ತಿದೆ. ಈ ಬಗ್ಗೆ ರಾಜ್ಯಮಟ್ಟದಲ್ಲಿ ಅಧಿಕಾರಿಗಳ ತಂಡ ರಚಿಸಿ ತನಿಖೆ ಮಾಡಲು ಮುಖ್ಯಮಂತ್ರಿಗೆ ತಿಳಿಸಲಾಗುವುದು ಎಂದರು.
ಮನೆ ಬಾಡಿಗೆ ನೀಡಿದ್ದರೂ ಸಹ ಅವರಿಗೆ ಉಚಿತ ಗೃಹಜ್ಯೋತಿ ಯೋಜನೆ ದೊರೆಯುತ್ತಿದೆ. ಗೃಹಲಕ್ಷ್ಮೀಯಲ್ಲಿ ಟ್ಯಾಕ್ಸ್, ಜಿಎಸ್ಟಿ ಹೊಂದಿದ ಕುಟುಂಬದ ಸದಸ್ಯರಿಗೆ ಹಣ ನೀಡುತ್ತಿರುವುದು ಹಾಗೂ ಅನ್ನಭಾಗ್ಯದಲ್ಲಿ ಯಲಬುರ್ಗಾ ಕ್ಷೇತ್ರದಲ್ಲಿ ಪಡಿತರ ಕಾರ್ಡ್ಗಳ ವ್ಯತ್ಯಾಸ ಗೋಚರಿಸಿದೆ. ಈ ಕುರಿತು ರಾಜ್ಯಾದ್ಯಂತ ತನಿಖೆ ಮಾಡಿಸಲಾಗುವುದು. ಜುಲೈನಿಂದ ಅನರ್ಹರಿಗೆ ಯೋಜನೆ ಲಾಭ ಸಿಗದು ಎಂದು ರಾಯರಡ್ಡಿ ಹೇಳಿದರು.ತಾಪಂ ಇಒ ಸಂತೋಷ ಬಿರಾದಾರ ಪಾಟೀಲ್, ತಹಸೀಲ್ದಾರ್ ಎಚ್. ಪ್ರಾಣೇಶ, ಯಲಬುರ್ಗಾ ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಸುಧೀರ ಕೊರ್ಲಹಳ್ಳಿ, ಕುಕನೂರು ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಸಂಗಮೇಶ ಗುತ್ತಿ, ಜಿಲ್ಲಾ ಗ್ಯಾರಂಟಿ ಯೋಜನೆಯ ಉಪಾಧ್ಯಕ್ಷ ಖಾಸಿಂಸಾಬ್ ತಳಕಲ್, ಸಿಡಿಪಿಒ ಬೆಟದಪ್ಪ ಮಾಳೆಕೊಪ್ಪ, ಆಹಾರ ಇಲಾಖೆಯ ಅಧಿಕಾರಿ ಮಲ್ಲಯ್ಯ, ಜೆಸ್ಕಾಂ ಅಧಿಕಾರಿ ನಾಗರಾಜ ಹಾಗೂ ಗ್ಯಾರಂಟಿ ಯೋಜನೆಯ ಸಮಿತಿಯ ಸದಸ್ಯರು, ಅಧಿಕಾರಿಗಳಿದ್ದರು.ಹಣ ಬದಲು ಆಹಾರ ಧಾನ್ಯ ಕಿಟ್ ವಿತರಣೆ
ಯಲಬುರ್ಗಾ, ಕುಕನುರು ತಾಲೂಕಿಗೆ 1000 ಟನ್ ಡಿಎಪಿ ರಸಗೊಬ್ಬರ ಅವಶ್ಯಕತೆ ಇದ್ದು ಪೂರೈಸುವಂತೆ ರಾಯರಡ್ಡಿ ಅವರು ಕೃಷಿ ಸಚಿವ ಚಲುವರಾಯ ಸ್ವಾಮಿ ಅವರಿಗೆ ಸೋಮವಾರ ಕರೆ ಮಾಡಿ ಕೋರಿದ್ದರು. ಮಂಗಳವಾರ ಸಚಿವರು ಕುಕನೂರು, ಯಲಬುರ್ಗಾ ತಾಲೂಕಿಗೆ 1000 ಟನ್ ಡಿಎಪಿ ಗೊಬ್ಬರ ಮಂಜೂರು ಮಾಡಿ ಪೂರೈಕೆಗೆ ಮುಂದಾಗಿದ್ದಾರೆ. ರೈತರಿಗೆ ಗೊಬ್ಬರ ಅಭಾವ ಆಗದು ಎಂದು ರಾಯರಡ್ಡಿ ತಿಳಿಸಿದ್ದಾರೆ.