ಕನ್ನಡಪ್ರಭ ವಾರ್ತೆ ಬೆಂಗಳೂರು
ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಪಕ್ಷದ ಕೇಂದ್ರದ ನಾಯಕರು ಗ್ಯಾರಂಟಿಗಳ ಘೋಷಣೆಗೆ ಅವಕಾಶ ನೀಡಲಿಲ್ಲ. ಈಗ ಎಲ್ಲ ಕಡೆ ಗ್ಯಾರಂಟಿಗಳ ಘೋಷಣೆ ನಡೆಯುತ್ತಿದೆ. 2028ರ ಚುನಾವಣೆಯಲ್ಲಿ ಕಾಂಗ್ರೆಸ್ನ ಗ್ಯಾರಂಟಿಗಳಿಗೆ ಕೌಂಟರ್ ಆಗಿ ಏನು ಮಾಡಬೇಕು ಎಂದು ಯೋಚಿಸುತ್ತಿದ್ದೇವೆ. ಮುಳ್ಳನ್ನು ಮುಳ್ಳಿಂದಲೇ ತೆಗೆಯುತ್ತೇವೆ. ಅವರು ಸಣ್ಣ ಮುಳ್ಳು ಹಾಕಿದರೆ, ನಾವು ದೊಡ್ಡ ಮುಳ್ಳು ಹಾಕುತ್ತೇವೆ. ಏನಾಗಲಿದೆ ಎಂದು ಕಾದು ನೋಡಿ. ಅವರೇ ದಾರಿ ತೋರಿಸಿಕೊಟ್ಟಿದ್ದಾರೆ ಎಂದರು.
ಕಳೆದ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷದವರು ಐದು ಗ್ಯಾರಂಟಿ ಘೋಷಿಸಿದ್ದರು. ನಾವು ಒಂದೂ ಗ್ಯಾರಂಟಿ ಘೋಷಿಸಲಿಲ್ಲ. ಹೀಗಾಗಿ ಕಾಂಗ್ರೆಸ್ ಗ್ಯಾರಂಟಿಗಳ ಮೇಲೆ ಚುನಾವಣೆ ಗೆದ್ದಿದೆ. ನಾವು ಗ್ಯಾರಂಟಿಗಳ ವಿರೋಧಿಗಳಲ್ಲ. ಇನ್ನೂ 25 ಗ್ಯಾರಂಟಿ ಕೊಡಿ ಎಂದು ಸಲಹೆ ನೀಡುತ್ತೇನೆ. ನಾನು ಗ್ಯಾರಂಟಿಗಳನ್ನು ಎಂದೂ ವಿರೋಧಿಸಿಲ್ಲ. ಅವೈಜ್ಞಾನಿಕ ಗ್ಯಾರಂಟಿಗಳ ಬಗ್ಗೆ ನನ್ನ ವಿರೋಧವಿದೆ. ಗ್ಯಾರಂಟಿ ಘೋಷಿಸುವ ಮುನ್ನ ಅದರ ಪರಿಣಾಮಗಳು ಏನು ಎನ್ನುವುದರ ಬಗ್ಗೆ ಹೇಳಬೇಕು ಎಂಬುದು ನಮ್ಮ ವಾದವಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಬೈ ಎಲೆಕ್ಷನಲ್ಲಿ ಆಡಳಿತ ಪಕ್ಷದ ಗೆಲುವು ಸಾಮಾನ್ಯ:
ಉಪಚುನಾವಣೆ ಸೋಲಿನಿಂದ ಹೆದರಿ ಓಡಿ ಹೋಗುವ ಪ್ರಶ್ನೆಯೇ ಇಲ್ಲ. ಗೆಲ್ಲಲು ಕಾಂಗ್ರೆಸ್ ಏನು ಮಾಡಿದೆ ಎಂಬುದು ಜನರಿಗೆ ಗೊತ್ತಿದೆ. ಅದರ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ. ನಾವು ಸೋಲನ್ನು ಸ್ವೀಕರಿಸಿದ್ದೇವೆ. ಪರಾಮರ್ಶೆ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಇನ್ನೂ ಗಟ್ಟಿಯಾಗಿ ಕೆಲಸ ಮಾಡುತ್ತೇವೆ. 2028ಕ್ಕೆ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಶತಃಸಿದ್ಧ ಎಂದು ಹೇಳಿದರು.