ಗ್ಯಾರಂಟಿ ಯೋಜನೆಯಿಂದ ಬಡವರಲ್ಲಿ ಬದುಕು ಚೇತರಿಕೆ: ಅಶೋಕ್ ರೈ

KannadaprabhaNewsNetwork |  
Published : Mar 10, 2026, 03:45 AM IST
ಫೋಟೋ: ೮ಪಿಟಿಅರ್-ಮಹಿಳಾ ದಿನನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಸನ್ಮಾನಿಸಲಾಯಿತು | Kannada Prabha

ಸಾರಾಂಶ

ಮಹಿಳೆಯರ ಆರ್ಥಿಕ ಅಭಿವೃದ್ಧಿಗೆ ಒತ್ತು ನೀಡುವ ಕೆಲಸ ಸರ್ಕಾರದಿಂದ ನಡೆಯುತ್ತಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಯಿಂದ ಬಡವರಲ್ಲಿ ಅಲ್ಪ ಮಟ್ಟದ ಚೇತರಿಕೆಯಾಗಿದೆ. ಶಿಕ್ಷಣ ಮತ್ತು ಅರಿವಿನ ಕೊರತೆಯ ಕಾರಣದಿಂದಾಗಿ ಸರ್ಕಾರದ ಸೌಲಭ್ಯಗಳು ಇನ್ನೂ ತಳ ಮಟ್ಟದ ಜನರಿಗೆ ತಲುಪುವುದಕ್ಕೆ ಸಾಧ್ಯವಾಗಿಲ್ಲ. ಬಡ ಮತ್ತು ಅಶಕ್ತರಾಗಿ ಉಳಿದಿರುವ ಮಹಿಳೆಯರನ್ನು ಆಶಾ ಕಾರ್ಯಕರ್ತೆಯರು, ಅಂಗನವಾಡಿನ ಕಾರ್ಯಕರ್ತೆಯರು ಗುರುತಿಸಿ ಸರಕಾರದ ಸವಲತ್ತು ದೊರಕಿಸಲು ಸಹಕಾರ ನೀಡಬೇಕು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಪುತ್ತೂರು: ಮಹಿಳೆಯರ ಆರ್ಥಿಕ ಅಭಿವೃದ್ಧಿಗೆ ಒತ್ತು ನೀಡುವ ಕೆಲಸ ಸರ್ಕಾರದಿಂದ ನಡೆಯುತ್ತಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಯಿಂದ ಬಡವರಲ್ಲಿ ಅಲ್ಪ ಮಟ್ಟದ ಚೇತರಿಕೆಯಾಗಿದೆ. ಶಿಕ್ಷಣ ಮತ್ತು ಅರಿವಿನ ಕೊರತೆಯ ಕಾರಣದಿಂದಾಗಿ ಸರ್ಕಾರದ ಸೌಲಭ್ಯಗಳು ಇನ್ನೂ ತಳ ಮಟ್ಟದ ಜನರಿಗೆ ತಲುಪುವುದಕ್ಕೆ ಸಾಧ್ಯವಾಗಿಲ್ಲ. ಬಡ ಮತ್ತು ಅಶಕ್ತರಾಗಿ ಉಳಿದಿರುವ ಮಹಿಳೆಯರನ್ನು ಆಶಾ ಕಾರ್ಯಕರ್ತೆಯರು, ಅಂಗನವಾಡಿನ ಕಾರ್ಯಕರ್ತೆಯರು ಗುರುತಿಸಿ ಸರಕಾರದ ಸವಲತ್ತು ದೊರಕಿಸಲು ಸಹಕಾರ ನೀಡಬೇಕು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.ದ.ಕ. ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಪಂ, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ, ಶಿಶು ಅಭಿವೃದ್ಧಿ ಯೋಜನೆ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಸಂಘ ಹಾಗೂ ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಪುತ್ತೂರು ಇವರ ಸಹಯೋಗದೊಂದಿಗೆ ಪುರಭವನದಲ್ಲಿ ಭಾನುವಾರ ನಡೆದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರೈ ಚಾರಿಟೇಬಲ್ ಟ್ರಸ್ಟ್ ಮೂಲಕ ಕಳೆದ ೧೩ ವರ್ಷಗಳಿಂದ ಸಮಾಜದ ನೋಂದವರ, ಅಶಕ್ತರ ಅಳಲು ಆಲಿಸಿದ್ದೇನೆ. ಮನೆ, ಜಾಗ ಇಲ್ಲದ ವಿಧೆವೆಯರ ಪಟ್ಟಿ ಮಾಡಿದ್ದು, ಅವರಿಗೆ ಸ್ವಂತ ಖರ್ಚಿನಲ್ಲಿ ಜಾಗ ನೀಡುತ್ತಿದ್ದೇನೆ. ವಿಟ್ಲ ಮುಡ್ನೂರಿನಲ್ಲಿ ಎಂಟು ಎಕರೆ ಜಾಗ ಖರೀದಿಸಿದ್ದು, ಅದರಲ್ಲಿ ೧೮೭ ವಿಧವೆಯರಿಗೆ ಉಚಿತವಾಗಿ ನಿವೇಶನ ನೀಡಲು ಸಿದ್ಧತೆ ನಡೆದಿದೆ. ನಾನು ರಾಜಕಾರಣಕ್ಕೆ ಬಂದಿದ್ದು ಬಡವರ ಕಣ್ಣೀರು ಒರೆಸಲು ಹೊರತು ದುಡ್ಡು ಮಾಡಲು ಅಲ್ಲ ಎಂದರು.

ಅಧ್ಯಕ್ಷತೆ ವಹಿಸಿದ್ದ ಪುತ್ತೂರು ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಮಾತನಾಡಿ, ಮಹಿಳೆಯರು ಶಿಕ್ಷಣದಲ್ಲಿ ಮಂದಿರುವಂತೆ ರಾಜಕೀಯ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಮುಂದೆ ಬರುವಂತಾಗಬೇಕು. ಇದಕ್ಕಾಗಿ ಸಿಕ್ಕಿರುವ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಪುತ್ತೂರು ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ನ್ಯಾಯವಾದಿ ರಾಜೇಶ್ವರಿ ಎಂ. ಮಹಿಳಾ ದಿನಾಚರಣೆ ಪ್ರಯುಕ್ತ ವಿಶೇಷ ಉಪನ್ಯಾಸ ನೀಡಿದರು. ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರನ್ನು ಸನ್ಮಾನಿಸಲಾಯಿತು. ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ ಜಿಲ್ಲಾ ಅಧ್ಯಕ್ಷೆ ಶಕುಂತಲಾ, ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ ತಾಲೂಕು ಅಧ್ಯಕ್ಷೆ ಕಮಲ, ಸಹಾಯಕ ಸಿಡಿಪಿಓ ಮಂಗಳಾ ಕಾಳೆ ಇದ್ದರು. ತಾಲೂಕು ಸಿಡಿಪಿಓ ಹರೀಶ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಮೇಲ್ವಿಚಾರಕಿ ಸುಜಾತ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಜೆಟಲ್ಲಿ ಹೇಳಿದಂತೆ 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಶೀಘ್ರ: ಮಧು
ಬೆಂಗಳೂರಿನ ಕೊಳಚೆ ನೀರಿಂದ ತರಕಾರಿಯೂ ವಿಷ : ಸಂಸತ್ತಲ್ಲಿ ಗೌಡ