ಗ್ಯಾರಂಟಿ ಯೋಜನೆಗಳು ಬಡ ಕುಟುಂಬಗಳಿಗೆ ಸಹಕಾರಿಯಾಗಿವೆ

KannadaprabhaNewsNetwork |  
Published : Jan 29, 2025, 01:32 AM IST
ಪೊಟೋ: 28ಎಸ್ಎಂಜಿಕೆಪಿ11ಸಾಗರ ತಾಲೂಕು ಹಿರೇನಲ್ಲೂರಿನಲ್ಲಿ ಗ್ರಾಮ ಪಂಚಾಯಿತಿ ನೂತನ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು. | Kannada Prabha

ಸಾರಾಂಶ

ಶಿವಮೊಗ್ಗ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಬಡ ಕುಟುಂಬಗಳ ಸಹಕಾರಕ್ಕೆ ನಿಂತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಶಿವಮೊಗ್ಗ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಬಡ ಕುಟುಂಬಗಳ ಸಹಕಾರಕ್ಕೆ ನಿಂತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಸಾಗರ ತಾಲೂಕು ಕಾನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನಲೆ ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶಾಲಾ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕುಟುಂಬದಲ್ಲಿ ಓರ್ವ ದುಡಿಯುವ ವ್ಯಕ್ತಿ ರೀತಿಯಲ್ಲಿ ಬೆಂಬಲಕ್ಕೆ ನಿಂತಿವೆ ಎಂದರು.

ಮಕ್ಕಳಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ನಮ್ಮ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಒದಗಿಸಿದೆ. ಅದರ ಸದುಪಯೋಗವನ್ನು ಉತ್ತಮ ರೀತಿಯಲ್ಲಿ ಪಡೆದುಕೊಳ್ಳಬೇಕು. ಶಿಕ್ಷಕರು ಮಕ್ಕಳ ಹಾಜರಾತಿ ಬಗ್ಗೆ ಗಮನ ಹರಿಸಿ, ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ದಾರಿ ಮಾಡಿಕೊಡಬೇಕು ಎಂದರು.

ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ಚುರುಕು ನೀಡಲಾಗುವುದು. ಸಾರ್ವಜನಿಕರ ಭೇಟಿ ಮಾಡಿ ಕುಂದು ಕೊರತೆ ಅಹವಾಲು ಸ್ವೀಕರಿಸಿ, ಸಮಸ್ಯೆಗಳ ಪರಿಹಾರದ ಕಡೆ ಗಮನ ಹರಿಸಲಾಗುವುದು. ಅಗತ್ಯವಿರುವ ಶಾಲೆಗಳಿಗೆ ಹೆಚ್ಚು ಅನುದಾನ ಒದಗಿಲಾಗುವುದು ಎಂದು ತಿಳಿಸಿದರು.

ಈ ಭಾಗದ ಜನರು ಕಾಗೋಡು ತಿಮ್ಮಪ್ಪ, ಬಂಗಾರಪ್ಪನವರನ್ನು ಅವರು ಭೂ ಹಕ್ಕು ಕಾಯ್ದೆಗಾಗಿ ಮಾಡಿದ ಹೋರಾಟವನ್ನು ಸ್ಮರಿಸುತ್ತಾರೆ. ಅವರು ಮಾಡಿದ ಕೆಲಸಗಳು ಜೀವಂತವಾಗಿವೆ. ಅದೇ ನಿಟ್ಟಿನಲ್ಲಿ ನಾವು ಕೂಡ ಜನರು ನೆನೆಯುವ, ಜೀವಂತವಾಗಿರುವ ಕೆಲಸಗಳನ್ನು ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಅನೇಕ ಗಣ್ಯರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಶರಾವತಿ ಸಂತ್ರಸ್ತರಿಗೆ ನ್ಯಾಯ

ಕೊಡಿಸುವ ಜವಾಬ್ದಾರಿ ನಮ್ಮ ಮೇಲಿದೆ

ಶಿವಮೊಗ್ಗ: ಶರಾವತಿ ಸಂತ್ರಸ್ತರಿಗೆ ಶೀಘ್ರವಾಗಿ ನ್ಯಾಯ ಕೊಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ಸರ್ಕಾರ ಸಂತ್ರಸ್ತರ ಕೈ ಹಿಡಿಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಹಿರೇನಲ್ಲೂರಿನಲ್ಲಿ ಗ್ರಾಮ ಪಂಚಾಯಿತಿ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಶರಾವತಿ ಸಂತ್ರಸ್ತರು ಸೇರಿದಂತೆ ಚಕ್ರಾ, ವರಾಹಿ ಸಂತ್ರಸ್ತರ ಪರವಾಗಿಯೂ ನಮ್ಮ ಸರ್ಕಾರ ಇದೆ. ಸಂತ್ರಸ್ತರ ಪರವಾಗಿ ವಾದಿಸಲು ಉತ್ತಮ ವಕೀಲರನ್ನು ನೇಮಿಸಲಾಗಿದೆ. ಶೀಘ್ರವಾಗಿ ಪ್ರಕರಣ ಇತ್ಯರ್ಥ ಆಗುವ ಭರವಸೆ ಇದೆ. ಕೇಂದ್ರ ಸರ್ಕಾರ ಕೂಡ ಈ ವಿಷಯದಲ್ಲಿ ಉತ್ತಮವಾಗಿ ಸ್ಪಂದಿಸಿದೆ. ಈ ಎಲ್ಲ ಸಂತ್ರಸ್ತರ ಕಾರಣದಿಂದ ನಾವಿಂದು ಬೆಳಕು ಕಾಣುತ್ತಿದ್ದೇವೆ. ಅವರಿಗೆ ನ್ಯಾಯ ಒದಗಿಸುವ ಕೆಲಸ ನಾವು ಮಾಡುತ್ತೇವೆ ಎಂದರು.

ತಾಳಗುಪ್ಪ-ಸಾಗರದಿಂದ ಕುಡಿಯುವ ನೀರಿನ ಕುರಿತು ಡಾ.ಕಾಗೋಡು ತಿಮ್ಮಪ್ಪನವರ ಜೊತೆಗೂಡಿ ಮೊದಲ ಬಾರಿಗೆ ಹೋರಾಟದಲ್ಲಿ ಪಾಲ್ಗೊಂಡಿದ್ದೆ. ಕಾಗೋಡು ತಿಮ್ಮಪ್ಪನವರೇ ಖುದ್ದು ಶರಾವತಿ ಸಂತ್ರಸ್ತರಿಗೆ ಹಕ್ಕುಪತ್ರ ನೀಡಿದ್ದರು. ಅದು ರದ್ದಾಯಿತು. ಅವರಿಗೆ ಹಕ್ಕುಪತ್ರ ಕೊಡುವ ಜವಾಬ್ದಾರಿ ನಮ್ಮ ಮೇಲಿದೆ. ಶೀಘ್ರದಲ್ಲೇ ಅವರಿಗೆ ನ್ಯಾಯ ಒದಗಲಿದೆ. ಸರ್ಕಾರ ಸಂತ್ರಸ್ತರ ಪರವಾಗಿದೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಸಭಾಧ್ಯಕ್ಷರಾದ ಡಾ.ಕಾಗೋಡು ತಿಮ್ಮಪ್ಪ, ಹಿರೇನಲ್ಲೂರು ಗ್ರಾ.ಪಂ ಅಧ್ಯಕ್ಷರಾದ ರೇವತಿ ಸುರೇಶ್, ಗ್ರಾ.ಪಂ ಸದಸ್ಯರು, ಅಧಿಕಾರಿಗಳು, ಉಪಸ್ಥಿರತರಿದ್ದರು.

PREV

Recommended Stories

ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ಹಣೆಯಲ್ಲಿ ಬರೆದಿದ್ದರೆ ಡಿಕೆಶಿ ಸಿಎಂ ಆಗ್ತಾರೆ ಇಲ್ದಿದ್ರೆ ಇಲ್ಲ : ಡಿಕೆಸು