ಕನ್ನಡಪ್ರಭ ವಾರ್ತೆ ಉಡುಪಿ
ಶುಕ್ರವಾರ ನಗರದ ಅಜ್ಜರಕಾಡಿನ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಯಶಸ್ಸು ಸರ್ಕಾರಕ್ಕೆ ಹೆಮ್ಮೆಯನ್ನುಂಟು ಮಾಡಿದೆ. ಈ ಐದು ಯೋಜನೆಗಳಿಂದ ಜನರ ಬದುಕು ಸಾಕಷ್ಟು ಬದಲಾಗಿದೆ ಎಂದರು.ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸಿದ್ದು, ಈ ಜಿಲ್ಲೆಯ ಮೂರು ತಾಲೂಕುಗಳಲ್ಲೂ ಬರದ ಛಾಯೆ ಆವರಿಸಿದ್ದು, ಜಿಲ್ಲೆಯ ಹೆಬ್ರಿ, ಬ್ರಹ್ಮಾವರ ಹಾಗೂ ಕಾರ್ಕಳ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಈಗಾಗಲೇ ಸೇರಿಸಲಾಗಿದೆ. ಬರ ಸಮೀಕ್ಷೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಒಟ್ಟು 13,937 ಹೆಕ್ಟೇರ್ ನಷ್ಟು ಭತ್ತದ ಬೆಳೆ ಹಾನಿ ಅಂದಾಜಿಸಲಾಗಿದ್ದು, ರು.11 ಕೋಟಿ 85 ಲಕ್ಷ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ, ಸರ್ಕಾರದಿಂದ ಮೊದಲನೇ ಕಂತಿನಲ್ಲಿ 19,071 ರೈತರಿಗೆ ರು.2 ಕೋಟಿ 64 ಲಕ್ಷ ಪರಿಹಾರವನ್ನು ಪಾವತಿಸಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಸಮಾರಂಭದಲ್ಲಿ ಶಾಸಕ ಯಶಪಾಲ್ ಸುವರ್ಣ, ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್.ಕೆ, ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಯಾಲ್, ಎಡಿಸಿ ಮಮತಾ ದೇವಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.