ಮಸ್ಕಿ: ಚುನಾವಣಾ ಘೋಷಣೆಯಲ್ಲಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಜಾರಿಗೆ ತಂದು, ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಿದೆ ಎಂದು ಮಸ್ಕಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮೈಬೂಸಾಬ ಮುದ್ದಾಪೂರ ತಿಳಿಸಿದರು.
ಮಸ್ಕಿ ಕ್ಷೇತ್ರದ ಹಿತಾಸಕ್ತಿ ಮುಂದಿಟ್ಟುಕೊಂಡು ಎರಡು ಬಾರಿಯ ಶಾಸಕರಾಗಿ ಆರ್.ಬಸನಗೌಡ ತುರ್ವಿಹಾಳ ಉತ್ತಮ ಕೆಲಸ ಮಾಡುತ್ತಿದ್ದು, ಅವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು. ಅದೇ ರೀತಿ ಕಾಂಗ್ರೆಸ್ ಪಕ್ಷ ಸಂಘಟನೆ ಮುಂಚೂಣಿಯಲ್ಲಿರುವ ಮಲ್ಲಿಕಾರ್ಜುನ್ ಪಾಟೀಲ್ ಯದ್ದಲದಿನ್ನಿ ಅವರಿಗೆ ನಿಗಮ ಮಂಡಳಿ ಸ್ಥಾನವನ್ನು ನೀಡಬೇಕು ಎಂದು ಆಗ್ರಹಿಸಿದರು.
ಈ ವೇಳೆ ಸಮಿತಿಯ ಸದಸ್ಯ ರಾದ ರವಿಪಾಟೀಲ್,ಚನ್ನಬಸವ, ಶಂಕರಗೌಡ, ಪೌಲರಾಜ ಯದ್ದಲದಿನ್ನಿ, ನಾಗರಾಜ, ರಮೇಶ್ ಕರೆಕುರಿ, ಲಕ್ಷಣ ನಾಯಕ, ಕನಕಪ್ಪ, ಸೋಮನಾಥ ನಾಯಕ, ನಾಗರತ್ನ ಕಟ್ಟಿಮನಿ, ನಿಜಗುಣಿ, ಆಲಂಭಾಷಾ, ಬಸವಂತಪ್ಪ ಸೇರಿದಂತೆ ಇತರರು ಇದ್ದರು.