ಚವಡಾಪುರ: ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ರಾಜ್ಯದ ಜನರಿಗೆ ನೀಡಿರುವ ಭರವಸೆ ಈಡೆರಿಸಿದ್ದೇವೆ. ಅದರಲ್ಲೂ ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರ ಬದುಕು ಕಟ್ಟುವ ಕೆಲಸ ನಾವು ಮಾಡಿದ್ದೇವೆ ಎಂದು ಶಾಸಕ ಎಂ.ವೈ ಪಾಟೀಲ್ ಹೇಳಿದರು.
ಇನ್ನೂ ನಮ್ಮ ಸರ್ಕಾರದ ಭರವಸೆಯಾಗಿದ್ದ ಪಂಚ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಜಾರಿಗೆ ಬಂದು ಜನರಿಗೆ ತಲುಪಿವೆ. ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಹೀಗಾಗಿ ರಾಜ್ಯದ ಜನ ನಮ್ಮ ಸರ್ಕಾರದ ಮೇಲೆ ಭರವಸೆ, ನಂಬಿಕೆ ಇಟ್ಟಿದ್ದಾರೆ. ವಿರೋಧ ಪಕ್ಷದವರು ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದ ಬೊಕ್ಕಸ ಖಾಲಿಯಾಗಿದೆ ಎಂದು ಟೀಕೆ ಮಾಡುತ್ತಿದ್ದಾರೆ. ಆದರೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಬೊಕ್ಕಸ ಖಾಲಿಯಾಗಿಲ್ಲ, ಬದಲಾಗಿ ಭರ್ತಿಯಾಗುತ್ತಿದೆ. ಯಾವುದೇ ಅಭಿವೃದ್ಧಿ ಕೆಲಸಗಳು ನಿಂತಿಲ್ಲ ಎಂದು ವಿಪಕ್ಷಗಳ ಟೀಕೆಗೆ ಉತ್ತರಿಸಿದರು.
ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಪ್ರಕಾಶ ಜಮಾದಾರ, ತಹಸೀಲ್ದಾರ ಸಂಜೀವಕುಮಾರ ದಾಸರ್, ತಾ.ಪಂ ಇಒ ವೀರಣ್ಣ ಕವಲಗಿ, ತಾಪಂ ಆಡಳಿತಾಧಿಕಾರಿ ಜಗದೇವಪ್ಪ ಮಾತನಾಡಿದರು.ಸಭೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ರಾಜು ಬಬಲಾದ, ಅನಸೂಯ ಸೂಲೇಕರ, ಅಣವೀರಯ್ಯ ಮಠಪತಿ, ಪ್ರವೀಣ ಕಲ್ಲೂರ, ನಿಜಗುಣ ಚಕ್ರವರ್ತಿ, ಪಾಲಿಟೇಕ್ನಿಕ್ ಕಾಲೇಜು ಪ್ರಾಚಾರ್ಯ ಪ್ರಭುದೇವ ಪಾಟೀಲ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಡಾ. ಸಂತೋಷ ಹುಗ್ಗಿ, ವೈದ್ಯಾಧಿಕಾರಿ ಡಾ. ಚೇತನ, ಗ್ರಾ.ಪಂ ಅಭಿವೃದ್ದಿ ಅಧಿಕಾರಿಗಳಾದ ಮಹಾಂತೇಶ ಯಾಡಗಿ, ಅನಸೂಯ ಅಷ್ಟಗಿ, ಪಾರ್ವತಿ ಪೂಜಾರಿ, ಲಕ್ಷ್ಮೀ ಬಜಂತ್ರಿ ಇದ್ದರು.