ಗ್ಯಾರಂಟಿ ಯೋಜನೆಗಳು ಬಡವರ ಕೈ ಹಿಡಿದಿವೆ : ಸಚಿವ ಮಧು ಬಂಗಾರಪ್ಪ

KannadaprabhaNewsNetwork |  
Published : Apr 11, 2025, 12:33 AM IST
ಫೋಟೋ೧೦ಕೆಪಿಸೊರಬ-೦೧ : ಸೊರಬ ತಾಲೂಕಿನ ಚನ್ನಪಟ್ಟಣ ಗ್ರಾಮದಲ್ಲಿ ಎಸ್. ಬಂಗಾರಪ್ಪ ಅಭಿಮಾನಿ ಬಳಗದಿಂದ ಸಚಿವ ಮಧುಬಂಗಾರಪ್ಪ ಅವರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಸೊರಬ: ರಾಜ್ಯ ಸರ್ಕಾರ ನುಡಿದಂತೆ ನಡೆಯುತ್ತಿದ್ದು, ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಬಡವರ ಪರವಾಗಿ ಆಡಳಿತ ನಡೆಸಲಾಗುತ್ತಿದೆ. ಈ ಮೂಲಕ ಗ್ಯಾರಂಟಿ ಯೋಜನೆಗಳು ಬಡವರ ಕೈ ಹಿಡಿದಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಸೊರಬ: ರಾಜ್ಯ ಸರ್ಕಾರ ನುಡಿದಂತೆ ನಡೆಯುತ್ತಿದ್ದು, ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಬಡವರ ಪರವಾಗಿ ಆಡಳಿತ ನಡೆಸಲಾಗುತ್ತಿದೆ. ಈ ಮೂಲಕ ಗ್ಯಾರಂಟಿ ಯೋಜನೆಗಳು ಬಡವರ ಕೈ ಹಿಡಿದಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.ತಾಲೂಕಿನ ಚನ್ನಪಟ್ಟಣ ಗ್ರಾಮದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದ ಯೋಜನೆಯಡಿ ಗ್ರಾಮದ ಶ್ರೀ ಮಾರಿಕಾಂಬ ದೇವಸ್ಥಾನಕ್ಕೆ ೧೫ ಲಕ್ಷ ರು. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳು ಬಡ ಜನತೆಗೆ ತಲುಪಿವೆ. ಈ ಯೋಜನೆಯಿಂದ ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದ ಅವರು, ಸರ್ಕಾರ ಮತ್ತು ತಾವು ಗ್ರಾಮೀಣ ಭಾಗದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು. ಗ್ರಾಮದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ರಸ್ತೆ ನಿರ್ಮಾಣವಾಗುತ್ತಿದೆ. ಗ್ರಾಮೀಣ ಭಾಗಕ್ಕೆ ಅವಶ್ಯಕತೆ ಇರುವ ಮೂಲ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ. ಶಿಕ್ಷಣ ಕ್ಷೇತ್ರದಲ್ಲೂ ಅಮೂಲಾಗ್ರ ಬದಲಾವಣೆ ತರಲಾಗುತ್ತಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪೌಷ್ಟಿಕ ಆಹಾರವನ್ನು ಸಹ ಒದಗಿಸಲಾಗುತ್ತಿದೆ ಎಂದರು. ಗ್ರಾಪಂ ಅಧ್ಯಕ್ಷ ಧನಂಜಯ್ ನಾಯ್ಕ ಅಧ್ಯಕ್ಷತೆ ವಹಿಸಿದ್ದರು.

ತಹಸೀಲ್ದಾರ್ ಮಂಜುಳಾ ಹೆಗಡಾಳ್, ತಾಪಂ ಮಾಜಿ ಅಧ್ಯಕ್ಷ ಎಚ್.ಗಣಪತಿ ಹುಲ್ತಿಕೊಪ್ಪ, ಮಾಜಿ ಸದಸ್ಯರಾದ ಸುನಿಲ್ ಗೌಡ, ಎನ್.ಜಿ.ನಾಗರಾಜ್, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಂ.ಡಿ.ಶೇಖರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣಪ್ಪ ಹಾಲಘಟ್ಟ, ಗ್ರಾಪಂ ಉಪಾಧ್ಯಕ್ಷೆ ಕವಿತಾ, ಸದಸ್ಯರಾದ ಸರೋಜಾ ಷಣ್ಮುಖಪ್ಪ, ನಾಗಮ್ಮ, ಈರಪ್ಪಯ್ಯ, ಸೀತಾರಾಮ, ಕಾಂಗ್ರೆಸ್ ಬೂತ್ ಅಧ್ಯಕ್ಷ ಪಿ.ಜೆ.ಗಣಪತಿ, ಮುಖಂಡರಾದ ಷಣ್ಮುಖಪ್ಪ, ಪ್ರಶಾಂತ್ ನಾಯ್ಕ, ರವಿ ಆಟೋ ಚನ್ನಪಟ್ಟಣ, ಗುರು ಬರದವಳ್ಳಿ, ಮೂರ್ತಿ, ದತ್ತೋಜಿ ಕಮಲಾಪುರ, ರಮೇಶ್ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''