ಗ್ಯಾರಂಟಿ ಯೋಜನೆಗಳು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗಿಲ್ಲ: ಶಾಸಕ ಎಚ್.ಡಿ. ತಮ್ಮಯ್ಯ

KannadaprabhaNewsNetwork |  
Published : Feb 11, 2025, 12:45 AM IST
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ಸೋಮವಾರ ನಡೆದ ಜನಸಂಪರ್ಕ ಸಭೆಯನ್ನು ಶಾಸಕ ಎಚ್‌.ಡಿ. ತಮ್ಮಯ್ಯ ಅವರು ಉದ್ಘಾಟಿಸಿದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡುವುದರ ಜತೆಗೆ ಅಭಿವೃದ್ಧಿ ಕಾರ್ಯಗಳಲ್ಲೂ ಮುಂಚೂಣಿಯಲ್ಲಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

- ಚಿಕ್ಕಮಗಳೂರು ಕ್ಷೇತ್ರದ ಶಿವಪುರದಲ್ಲಿ ಜನ ಸಂಪರ್ಕ ಸಭೆ,

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ನೀಡುವುದರ ಜತೆಗೆ ಅಭಿವೃದ್ಧಿ ಕಾರ್ಯಗಳಲ್ಲೂ ಮುಂಚೂಣಿಯಲ್ಲಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಜಿಲ್ಲಾ ಪಂಚಾಯಿತಿ ಹಾಗೂ ಕಡೂರು ತಾಲೂಕು ಪಂಚಾಯಿತಿಯಿಂದ ಬಾಣೂರು ಮತ್ತು ನಾಗೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ಸೋಮವಾರ ಆಯೋಜಿಸಿದ್ದ ಜನ ಸಂಪರ್ಕ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನ ಸಂಪರ್ಕ ಸಭೆಯಲ್ಲಿ ಸ್ಥಳೀಯ ಮಟ್ಟದಲ್ಲಿ ಬಗೆಹರಿಯಬಹುದಾದ ಸಮಸ್ಯೆಗಳಿಗೂ ಪರಿಹಾರ ಕಂಡು ಕೊಳ್ಳಬಹುದಾಗಿದೆ. ಅಧಿಕಾರಿಗಳನ್ನು ಜನರ ಮನೆ ಬಾಗಿಲಿಗೆ ಕರೆತಂದು ಸಮಸ್ಯೆ ಬಗೆಹರಿಸುವುದೇ ಜನ ಸಂಪರ್ಕ ಸಭೆ ಮುಖ್ಯ ಉದ್ದೇಶವಾಗಿದೆ ಎಂದರು.

ಸರ್ಕಾರ ಬಡವರ ಹಾಗೂ ಮಹಿಳಾ ಸಬಲೀಕರಣದ ಉದ್ದೇಶದಿಂದ ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಯುವನಿಧಿಯಂತಹ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಎಲ್ಲಾ ವರ್ಗದ ಬಡವರನ್ನು ಪ್ರೋತ್ಸಾಹಿಸಿ ಅಭಿವೃದ್ಧಿಗೊಳಿಸುವ ಉದ್ದೇಶ ಹೊಂದಿದೆ. ವರ್ಷಕ್ಕೆ ಸುಮಾರು ₹59 ಸಾವಿರ ಕೋಟಿ ಗಳಷ್ಟು ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿಗೆ ಯಾವುದೇ ಅಡೆತಡೆಗಳಾಗಿಲ್ಲ ಎಂದು ಹೇಳಿದರು.

ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗಾಗಿ ₹25 ಕೋಟಿ ವಿಶೇಷ ಅನುದಾನ ನೀಡಲಾಗಿದೆ. ಇದರಲ್ಲಿ ನಾಗೇನಹಳ್ಳಿ ಪಂಚಾಯಿತಿ ವ್ಯಾಪ್ತಿಗೆ ₹71 ಲಕ್ಷ ಗಳ ಕಾಮಗಾರಿಗೆ ಶಂಕು ಸ್ಥಾಪಿಸಲಾಗಿದೆ. ಬಾಳೂರು ಪಂಚಾಯಿತಿ ವ್ಯಾಪ್ತಿಯಲ್ಲಿ ₹95 ಲಕ್ಷ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. ಚಂದ್ರಶೇಖರಪುರ, ಗೊಲ್ಲರಹಟ್ಟಿ ಹಾಗೂ ಕೇತಮಾರನಹಳ್ಳಿ ರಸ್ತೆ ನಿರ್ಮಾಣ ಕಾಮ ಗಾರಿಗೆ ₹4 ಕೋಟಿ ಅನುದಾನ ಮೀಸಲಿಡಲಾಗಿದೆ. ಬಾಣಾವರ ಸಖರಾಯಪಟ್ಟಣದಿಂದ ಶಿವಪುರವರೆಗೆ ರಸ್ತೆ ಅಭಿವೃದ್ಧಿ ಗಾಗಿ ಒಂದು ಕೋಟಿ ಅನುದಾನ ಇರಿಸಿದ್ದು, ಅಂದಾಜು ಪಟ್ಟಿ ತಯಾರಿಸಿ ಶೀಘ್ರವಾಗಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದರು.ಹಿರೇಗೌಜ ಬಳಿ 15 ಎಕರೆ ಪ್ರದೇಶದಲ್ಲಿ ಜವಳಿ ಪಾರ್ಕ್ ನಿರ್ಮಿಸಿ ಸುಮಾರು 5 ಸಾವಿರ ಜನರಿಗೆ ಉದ್ಯೋಗ ನೀಡುವ ಯೋಜನೆ ರೂಪಿಸಲಾಗಿದೆ. ಪ್ರಸ್ತುತ ಈ ಭಾಗದಲ್ಲಿ ವಿದ್ಯುತ್ ಸಂಬಂಧಿಸಿದಂತೆ ಹೆಚ್ಚು ಸಮಸ್ಯೆಗಳಿದ್ದು ಅವುಗಳ ಪರಿಹಾರಕ್ಕೆ ಕ್ರಮವಹಿಸಲಾಗಿದೆ ಎಂದ ಅವರು, ಕ್ಷೇತ್ರವನ್ನು ಅಭಿವೃದ್ಧಿಗೊಳಿಸುವ ನನ್ನ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುತ್ತೇನೆ ಎಂದರು.ಕಡೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ್‌ ಮಾತನಾಡಿ, ಜನಸಂಪರ್ಕ ಸಭೆಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಯೋಜನೆ ಮಾಡುವಂತ ಪರಿಕಲ್ಪನೆ ಉತ್ತಮವಾಗಿದೆ. ಸರ್ಕಾರದ ಆಡಳಿತ ವ್ಯವಸ್ಥೆಯೇ ಜನರ ಬಳಿ ಬಂದು ಅವರ ಸಮಸ್ಯೆ, ಅಹವಾಲುಗಳನ್ನು ಸಕಾರಾತ್ಮಕವಾಗಿ ಆಲಿಸಿ ಸ್ಥಳದಲ್ಲೇ ಸೂಕ್ತ ಪರಿಹಾರ ಒದಗಿಸಿ ಕೊಡುವುದೇ ಮುಖ್ಯ ಉದ್ದೇಶ ಎಂದು ಹೇಳಿದರು.

ಸಭೆಯಲ್ಲಿ ಕಡೂರು ತಾಲೂಕು ತಹಸೀಲ್ದಾರ್ ಮಂಜುನಾಥ್, ಬಾಣೂರು ಗ್ರಾಪಂ ಅಧ್ಯಕ್ಷೆ ಸುನಂದ, ಉಪಾಧ್ಯಕ್ಷ ಮಮತ ಜ್ಞಾನೇಂದ್ರ, ನಾಗೇನಹಳ್ಳಿ ಗ್ರಾಪಂ ಅಧ್ಯಕ್ಷೆ ಚಂದ್ರಮ್ಮ ಮಂಜಪ್ಪ, ಉಪಾಧ್ಯಕ್ಷೆ ಚಂದ್ರಮ್ಮ ಮರಿಯಪ್ಪ, ಸಖರಾಯಪಟ್ಟಣ ಗ್ರಾಪಂ ಅಧ್ಯಕ್ಷೆ ರಾಜಮ್ಮ, ಉಪಾಧ್ಯಕ್ಷೆ ತಾರ, ಹುಲಿಕೆರೆ ಗ್ರಾಪಂ ಅಧ್ಯಕ್ಷೆ ರತ್ನಮ್ಮ, ಸದಸ್ಯರಾದ ವಸಂತ್‌ಕುಮಾರ್, ರವೀಶ್, ಲೀಲಮ್ಮ, ರಾಜಪ್ಪ, ಚಂದ್ರನಾಯ್ಕ್, ಪಿ. ಮಹೇಶ್, ಭಾಗ್ಯ, ನವೀನ್‌ಕುಮಾರ್, ರೇಣುಕಾಮೂರ್ತಿ, ಕಲ್ಮುರಡಪ್ಪ, ಮಂಜುಳಮ್ಮ, ಯಶೋಧಬಾಯಿ, ಉಮಾಕಾಂತ್, ಲೋಕೇಶ್‌ಮೂರ್ತಿ ಉಪಸ್ಥಿತರಿದ್ದರು. 10 ಕೆಸಿಕೆಎಂ 6ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ಸೋಮವಾರ ನಡೆದ ಜನಸಂಪರ್ಕ ಸಭೆಯನ್ನು ಶಾಸಕ ಎಚ್‌.ಡಿ. ತಮ್ಮಯ್ಯ ಉದ್ಘಾಟಿಸಿದರು.

PREV

Recommended Stories

ಶ್ರೀ ಶ್ರೀ ರವಿಶಂಕರ್‌ಗೆ ವರ್ಲ್ಡ್ ಲೀಡರ್ ಫಾರ್ ಪೀಸ್ ಆ್ಯಂಡ್‌ ಸೆಕ್ಯೂರಿಟಿ ಪ್ರಶಸ್ತಿ
ಹಾಡಹಗಲೇ ಮನೆಗೆ ನುಗ್ಗಿ ಚಹಾ ವ್ಯಾಪಾರಿಯ ಕತ್ತು ಕೊಯ್ದು ಹತ್ಯೆ