ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಜಿಪಂ ಡಿ.ದೇವರಾಜ ಅರಸು ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಕೆಲವು ಜನರಿಗೆ ಗೃಹಲಕ್ಷ್ಮಿ ಹಣ ದೊರೆಯುತ್ತಿಲ್ಲ ಎಂಬ ದೂರು ಇದೆ ಎಂದು ಸಭೆಯಲ್ಲಿ ಕೇಳಿದಾಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರತಿಕ್ರಿಯಿಸಿ, ಯಾರು ಆದಾಯ ತೆರಿಗೆ ಪಾವತಿದಾರರು ಇದ್ದಾರೆ, ಅವರಿಗೆ ಗೃಹಲಕ್ಷ್ಮಿ ಹಣ ನೀಡಲು ನಿಯಮದಲ್ಲಿ ಅವಕಾಶವಿಲ್ಲ. ಯಾರಾದರೂ ಅರ್ಹ ಫಲಾನುಭವಿಗಳು ಇದ್ದರೆ ಪರೀಕ್ಷಿಸಿ ಸೇರ್ಪಡೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.ಬಿಪಿಎಲ್ ಕಾರ್ಡ್ ಮಾಡಿಸಲು ಪೋರ್ಟಲ್ ಓಪನ್ ಆದಾಗ ಪತ್ರಿಕಾ ಪ್ರಕಟಣೆ ನೀಡಿ ಸಾರ್ವಜನಿಕರಿಗೆ ಮಾಹಿತಿ ದೊರೆಯುವಂತೆ ಮಾಡಬೇಕು. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಬಿಪಿಎಲ್ ಕಾರ್ಡ್ ಅತ್ಯವಶ್ಯಕವಾಗಿದೆ. ಬಿಪಿಎಲ್ ಕಾರ್ಡ್ ಇಲ್ಲದೆ ಇದ್ದರೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ಹಾಗೂ ಸ್ಕ್ಯಾನಿಂಗ್ ಸೌಲಭ್ಯಗಳು ದೊರೆಯುವುದಿಲ್ಲ. ಆದ್ದರಿಂದ ಅರ್ಹರಿಗೆ ಬಿಪಿಎಲ್ ಕಾರ್ಡ್ ಗಳನ್ನು ನೀಡಲು ಕ್ರಮ ವಹಿಸುವಂತೆ ಆಹಾರ ಇಲಾಖೆಯ ಉಪ ನಿರ್ದೇಶಕರಿಗೆ ಅವರು ಸೂಚಿಸಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ಶಿವಕುಮಾರ್ ಮಾತನಾಡಿ, ಯಾರು ಮರಣ ಹೊಂದಿದ್ದಾರೆ ಅವರಿಗೂ ಹಣ ಹೋಗುತ್ತಿದೆ. ಅವರಿಗೆ ಸ್ಥಗಿತಗೊಳಿಸಬೇಕು ಹಾಗೂ ಮರಣದಿಂದ ಇಲ್ಲಿಯವರೆಗೆ ಅವರಿಗೆ ಪಾವತಿ ಆಗಿರುವ ಹಣವನ್ನು ಹಿಂಪಡೆಯಬೇಕು. ಮುಂದೆ ಯಾರೇ ಫಲಾನುಭವಿ ಮರಣ ಹೊಂದಿದರೆ ಆಟೋಮ್ಯಾಟಿಕ್ ಆಗಿ ಹಣ ಪಾವತಿ ಸ್ಥಗಿತವಾಗುವಂತೆ ತಂತ್ರಜ್ಞಾನ ಅಳವಡಿಸಿಕೊಳ್ಳಿ ಎಂದರು.
ಜಿಲ್ಲೆಯಲ್ಲಿ 968228 ಫಲಾನುಭವಿಗಳು ಗೃಹಜ್ಯೋತಿ ಯೋಜನೆಯಡಿ ನೋಂದಣಿ ಆಗಿದ್ದಾರೆ. 6548 ಫಲಾನುಭವಿಗಳು ನೋಂದಣಿಗೆ ಬಾಕಿ ಇದ್ದಾರೆ. ಶೇ.60 ರಷ್ಟು ಫಲಾನುಭವಿಗಳಿಗೆ ಶೂನ್ಯ ಬಿಲ್ ಬರುತ್ತದೆ. ಶೇ.40 ಫಲಾನುಭವಿಗಳು ಸರಾಸರಿಗಿಂತ ಹೆಚ್ಚಿನ ವಿದ್ಯುತ್ ಬಳಕೆ ಮಾಡುವುದರಿಂದ ಬಿಲ್ ಬರುತ್ತದೆ ಎಂದು ಸೆಸ್ಕ್ ಅಧೀಕ್ಷಕ ಎಂಜಿನಿಯರ್ ಸುನಿಲ್ ವಿವರಿಸಿದರು.
ಗೃಹಲಕ್ಷ್ಮಿ ಹಣವನ್ನು ಯಾವುದೇ ಬ್ಯಾಂಕ್ ನವರು ಸಾಲಕ್ಕೆ ವಜಾ ಮಾಡಿಕೊಳ್ಳದೆ ಮಾನವೀಯತೆ ಆದಾರದ ಮೇಲೆ ಫಲಾನುಭವಿಗಳಿಗೆ ನೀಡಬೇಕು. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮರಣ ಹೊಂದಿದರೆ ಅವರಿಗೆ ಹಣ ಪಾವತಿ ಆಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು.