ಕನ್ನಡಪ್ರಭ ವಾರ್ತೆ ಬಂಗಾರಪೇಟೆ
ಎಲ್ಲರಿಗೂ ತಲುಪಿಸಲು ಯತ್ನಬಡವ, ದಲಿತರ ರಕ್ಷಣೆ ಮತ್ತು ಬಡತನ ಹಸಿವು ನಿವಾರಣೆ ಮಾಡುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೆ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಮುಂಬರುವ ದಿನಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಶೇ.ನೂರರಷ್ಟು ಫಲಾನುಭವಿಗಳಿಗೆ ಯೋಜನೆಗಳನ್ನು ತಲುಪಿಸುವ ಕೆಲಸವನ್ನು ಮಾಡುತ್ತೇವೆ ಎಂದರು. ಬೊಕ್ಕಸಕ್ಕೆ ಹೋರೆ ಆಗಿಲ್ಲ
ಈ ಯೋಜನೆಯಿಂದ ಸರ್ಕಾರದ ಬೊಕ್ಕಸಕ್ಕೆ ಯಾವುದೇ ಹೊರೆ ಆಗದಂತೆ ಹಣಕಾಸು ವ್ಯವಸ್ಥೆಯಲ್ಲಿ ಬದಲಾವಣೆ ತರುವ ಮೂಲಕ ರಾಜ್ಯ ಸರಕಾರ ಜನತೆಯ ಬೆನ್ನೆಲುಬಾಗಿ ಕೆಲಸ ಮಾಡುತ್ತಿದೆ. ಈ ಸಮಿತಿಯು ಫಲಾನುಭವಿಗಳಿಗೆ ಯೋಜನೆಯ ಲಾಭವನ್ನು ಸಮರ್ಪಕವಾಗಿ ತಲುಪಿಸುವ ಕಾರ್ಯ ಮಾಡುತ್ತಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿಗಳ ಉಪಾಧ್ಯಕ್ಷರಾದ ಸೈಯದ್ ಇಮದಾದ್ ಉಲ್ಲಾ , ಸದಸ್ಯರಾದ ಸಿ.ಎಂ ಹರೀಶ್ ಕುಮಾರ್, ನಂದ,ಶಂಕರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ರವಿಕುಮಾರ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.