ಗುಬ್ಬಿ: ಅತ್ಯುತ್ತಮ ಗಾಮ ಪಂಚಾಯಿತಿಗಳಿಗೆ ಜಿಲ್ಲಾಮಟ್ಟದ ಪ್ರಶಸ್ತಿ

KannadaprabhaNewsNetwork |  
Published : May 22, 2025, 12:54 AM IST
ಗುಬ್ಬಿತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ 2024-25ನೇ ಸಾಲಿನಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿದ 10 ಗ್ರಾಮ ಪಂಚಾಯಿತಿಗಳಿಗೆ ತುಮಕೂರು ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನುತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವರೂ ಆದ ಡಾ.ಜಿ.ಪರಮೇಶ್ವರ್. | Kannada Prabha

ಸಾರಾಂಶ

ತುಮಕೂರು ನಗರದ ಡಾ.ಎಚ್.ಎಂ ಗಂಗಾಧರಯ್ಯ ಸ್ಮಾರಕ ಭವನದಲ್ಲಿ ತುಮಕೂರು ಜಿಪಂ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಒಗಳ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ರವರು ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಕನ್ನಡಪ್ರಭ ವಾರ್ತೆ ಗುಬ್ಬಿ

ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ 2024- 25ನೇ ಸಾಲಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ 10 ಗ್ರಾಮ ಪಂಚಾಯಿತಿಗಳಿಗೆ ತುಮಕೂರು ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ತುಮಕೂರು ನಗರದ ಡಾ.ಎಚ್.ಎಂ ಗಂಗಾಧರಯ್ಯ ಸ್ಮಾರಕ ಭವನದಲ್ಲಿ ತುಮಕೂರು ಜಿಪಂ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಒಗಳ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ರವರು ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಶಿವಪುರ ಗ್ರಾಮ ಪಂಚಾಯಿತಿಗೆ ಸಮಗ್ರ ಶಾಲಾಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕಾಗಿ, ಅಳಿಲುಘಟ್ಟ ಗ್ರಾಪಂಗೆ ಹಸಿರು ಗ್ರಾಮ ಅಭಿಯಾನದಡಿ ಅತಿ ಹೆಚ್ಚು ಗಿಡಗಳನ್ನು ನೆಟ್ಟು ಸಂರಕ್ಷಿಸಿದ್ದಕ್ಕಾಗಿ, ಬ್ಯಾಡಗೆರೆ ಗ್ರಾಪಂಗೆ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿದ ಗಣನೀಯ ಸಾಧನೆಗಾಗಿ, ಸಿ.ಎಸ್.ಪುರ ಗ್ರಾಪಂಗೆ ಸಮಗ್ರ ಶಾಲಾಭಿವೃದ್ಧಿ ಕಾಮಗಾರಿಗಳ ಸಮರ್ಪಕ ಅನುಷ್ಠಾನಕ್ಕಾಗಿ, ಕುನ್ನಾಲ ಗ್ರಾಪಂಗೆ ಎನ್.ಆರ್.ಎಲ್.ಎಂ ಅತ್ಯುತ್ತಮ ಒಕ್ಕೂಟಕ್ಕಾಗಿ, ಅಮ್ಮನಘಟ್ಟ ಗ್ರಾಪಂಗೆ ಅತಿ ಹೆಚ್ಚು ಇ- ಸ್ವತ್ತು ಸೃಜನೆಗಾಗಿ, ಕೊಪ್ಪ ಅತ್ಯುತ್ತಮ ಸ್ವಚ್ಛ ಗ್ರಾಪಂ ಅಭಿಯಾನಕ್ಕಾಗಿ ಹಾಗೂ ಪ್ರಗತಿ ಪರ ರೈತರಿಗಾಗಿ, ಕೊಂಡ್ಲಿ ಗ್ರಾಪಂಗೆ ಉತ್ತಮ ಆಡಳಿತ ನಿರ್ವಹಣೆಗಾಗಿ, ಅತ್ಯುತ್ತಮ ಅನುಷ್ಠಾನ ಇಲಾಖೆ ತೋಟಗಾರಿಕೆ ಇಲಾಖೆಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಶಾಸಕ ಬಿ.ಸುರೇಶಗೌಡ ,ಎಚ್.ಎ.ವೆಂಕಟೇಶ್, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಜಿಪಂ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಗುಬ್ಬಿ ತಾಪಂ ಕಾರ್ಯನಿರ್ವಾಹಕ ಶಿವಪ್ರಕಾಶ್ ಎಸ್., ಸಹಾಯಕ ನಿರ್ದೇಶಕ(ಗ್ರಾ.ಉ) ಜೆ.ಬಿ.ರಂಗನಾಥ್, ತಾಲೂಕು ಯೋಜನಾಧಿಕಾರಿ ಎಂ.ಜೆ.ಜಗನ್ನಾಥಗೌಡ, ಸಹಾಯಕ ಲೆಕ್ಕಾಧಿಕಾರಿ ಸುಧೀಂದ್ರ, ತಾಲೂಕು ಐಇಸಿ ಸಂಯೋಜಕ ರಾಘವೇಂದ್ರರವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ವಕೀಲರಿಗೆ ಮಾಹಿತಿ ನೀಡದಿದ್ರೆ ಕ್ರಮ : ಹೈ!
ಉತ್ತರ ಕರ್ನಾಟಕಕ್ಕೆ ₹15,000 ಕೋಟಿ : ಅಜಯ್‌