ಕನ್ನಡಪ್ರಭ ವಾರ್ತೆ ಗುಬ್ಬಿ
ಸೋಮವಾರ ಡಾ.ಗುಬ್ಬಿ ವೀರಣ್ಣ ರಂಗ ಮಂದಿರದಲ್ಲಿ ನೆಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಬ್ಬಿ ವೀರಣ್ಣ ನವರ ರಂಗ ಪರಂಪರೆಯನ್ನು ಉಳಿಸಿ ಬೆಳೆಸಯುವ ನಿಟ್ಟಿನಲ್ಲಿ ಸರ್ಕಾರ ಪ್ರಾಂರಂಭಿಸಿದ ಡಾ ಗುಬ್ಬಿ ವೀರಣ್ಣ ಟ್ರಸ್ಟ್ಗೆ ಇಂದು ದಶಮಾನದ ಸಂಭ್ರಮ. ಈ ಸಂದರ್ಭದಲ್ಲಿ ನೆಡೆಯುತ್ತಿರುವ ನಾಟಕೋತ್ಸವಕ್ಕೆ ಕಲಾ ಪ್ರೋತ್ಸಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕೋರಿದರು. ಫೆ. 22 ರಿಂದ 27 ರವರೆಗೆ ಒಟ್ಟು ಆರು ದಿನಗಳ ಕಾಲ ನಡೆಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಲಾಶ್ರೀ ಡಾ. ಲಕ್ಷ್ಮಣ್ ದಾಸ್, ಫೆ. 22 ರ ಸಂಜೆ 6.30 ಕ್ಕೆ ನಾಟಕೋತ್ಸವವನ್ನು ಖ್ಯಾತ ನಾಟಕಕಾರ ಡಾ. ರಾಜಪ್ಪ ದಳವಾಯಿ ಉದ್ಘಾಟಿಸಲಿದ್ದು, ಅಂದು ಈ ವರ್ಷ ಗುಬ್ಬಿ ವೀರಣ್ಣ ಪ್ರಶಸ್ತಿಗೆ ಬಾಜನರಾಗಿರುವ ಗುಬ್ಬಿ ತಾಲೂಕು ಮತ್ತಿಘಟ್ಟ ಗ್ರಾಮದ ಚನ್ನಬಸವಯ್ಯ ನವರಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬ್ಯಾಂಕ್ ಮ್ಯಾನೇಜರ್ ಎಸ್.ವಿ. ಚಕ್ರಪಾಣಿ, ವಕೀಲರ ಸಂಘದ ಅಧ್ಯಕ್ಷ ಬಿ.ಎಸ್. ಚಿದಾನಂದಮೂರ್ತಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ಉದ್ಘಾಟನಾ ನಂತರ ತುಮಕೂರಿನ ರಂಗ ರಂಗ ತಂಡದಿಂದ ರಂಗಗೀತೆಗಳು ಮತ್ತೇ ವೈಭವದತ್ತ ರಂಗ ಗೀತೆಗಳು ಹೆಸರಿನಲ್ಲಿ ಅಂದಿನ ರಂಗ ಗೀತೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸಲಿದ್ದಾರೆ. ಫೆ.23 ರ ಸಂಜೆ 6.30 ಕ್ಕೆ ಸಿರಿಗೇರಿ ಧಾತ್ರಿ ರಂಗಸಂಸ್ಥೆಯಿಂದ ಅಕ್ಕ ನಾಗಲಾಂಬಿಕೆ ನಾಟಕ ಬಸವಣ್ಣನವರ ಹೋರಾಟದ ಹಾದಿ ತಿಳಿಸಲಿದೆ. 24 ರ ಸಂಜೆ ಬೆಂಗಳೂರಿನ ಜಂಗಮ ಕಲೆಕ್ಟಿವ್ಸ್ ತಂಡ ಪಂಚಮ ಪದ ಎಂಬ ದಲಿತ ಹೋರಾಟದ ಹಾಡುಗಳ ಸಂಕಲನ ವ್ಯಕ್ತವಾಗಲಿದೆ ಎಂದರು.
ಟ್ರಸ್ಟಿ ಡಾ. ರಾಜೇಶ್ ಗುಬ್ಬಿ, ಕಾಡಶೆಟ್ಟಿ ಸತೀಶ್ ಮಾತನಾಡಿದರು. ಈ ಸಂದರ್ಭದಲ್ಲಿ ಟ್ರಸ್ಟ್ ಸದಸ್ಯರಾದ ಕುಮಾರ್ ಗುಬ್ಬಿ ವೀರಣ್ಣ ಉಪಸ್ಥಿತರಿದ್ದರು. ನಾಟಕಗಳು ಪ್ರತಿ ದಿನ ಸಂಜೆ 7 ಗಂಟೆಗೆ ಪ್ರಾರಂಭವಾಗಲಿದ್ದು ಟಿಕೆಟ್ ದರ 30ರು. ನಿಗದಿಗೊಳಿಸಲಾಗಿದೆ.