ಗುಜ್ಜರಬೆಟ್ಟು: ಕಡಲ್ಕೊರೆತ ತಡೆ ಕಾಮಗಾರಿಗೆ ಯಶ್ಪಾಲ್ ಚಾಲನೆ

KannadaprabhaNewsNetwork |  
Published : Jun 03, 2025, 12:43 AM IST
2ಗುಜ್ಜರಬೆಟ್ಟು | Kannada Prabha

ಸಾರಾಂಶ

ಕೆಮ್ಮಣ್ಣು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಜ್ಜರಬೆಟ್ಟುವಿನ ಲಕ್ಷ್ಮೀ ನಾರಾಯಣ ಭಜನಾ ಮಂದಿರ ಹಾಗೂ ಗುರು ರಾಘವೇಂದ್ರ ಭಜನಾ ಮಂದಿರ ಬಳಿಯ ಕಡಲ್ಕೊರೆತ ಪೀಡಿತ ಭಾಗಗಳಿಗೆ ಶಾಸಕರ ಶಿಫಾರಸ್ಸಿನ ಮೇರೆಗೆ ಮಂಜೂರಾದ ₹ 1 ಕೋಟಿ ವೆಚ್ಚದ ಕಡಲ್ಕೊರೆತ ಪ್ರತಿಬಂಧಕ ಕಾಮಗಾರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಇಲ್ಲಿನ ಕೆಮ್ಮಣ್ಣು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಜ್ಜರಬೆಟ್ಟುವಿನ ಲಕ್ಷ್ಮೀ ನಾರಾಯಣ ಭಜನಾ ಮಂದಿರ ಹಾಗೂ ಗುರು ರಾಘವೇಂದ್ರ ಭಜನಾ ಮಂದಿರ ಬಳಿಯ ಕಡಲ್ಕೊರೆತ ಪೀಡಿತ ಭಾಗಗಳಿಗೆ ಶಾಸಕರ ಶಿಫಾರಸ್ಸಿನ ಮೇರೆಗೆ ಮಂಜೂರಾದ ₹ 1 ಕೋಟಿ ವೆಚ್ಚದ ಕಡಲ್ಕೊರೆತ ಪ್ರತಿಬಂಧಕ ಕಾಮಗಾರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಚಾಲನೆ ನೀಡಿದರು.ನಂತರ ಮಾತನಾಡಿದ ಶಾಸಕರು, ಕಳೆದ ಮಳೆಗಾಲದಲ್ಲಿ ತೀವ್ರ ಕಡಲ್ಕೊರೆತ ಉಂಟಾದ ಗುಜ್ಜರಬೆಟ್ಟು ಭಾಗದ ಪ್ರದೇಶಗಳಿಗೆ, ಮೀನುಗಾರಿಕಾ ಮತ್ತು ಬಂದರು ಇಲಾಖೆಯ ಮೂಲಕ 1 ಕೋಟಿ ರು. ಅನುದಾನ ಒದಗಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ.

ಮುಂದಿನ ದಿನಗಳಲ್ಲಿ ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರ ಒದಗಿಸಲು ವಿಶೇಷ ಮುತುವರ್ಜಿ ವಹಿಸಲಾಗುವುದು ಎಂದರು.ಈ ಸಂದರ್ಭ ಕೆಮ್ಮಣ್ಣು ಪಂಚಾಯಿತಿ ಅಧ್ಯಕ್ಷೆ ಕುಸುಮ ರವೀಂದ್ರ, ಉಪಾಧ್ಯಕ್ಷ ಅರುಣ್, ಲಕ್ಷ್ಮೀನಾರಾಯಣ ಭಜನಾ ಮಂದಿರ ಅಧ್ಯಕ್ಷ ರತ್ನಾಕರ ಸಾಲ್ಯಾನ್, ಗುರು ರಾಘವೇಂದ್ರ ಭಜನಾ ಮಂದಿರ ಅಧ್ಯಕ್ಷ ಸುಂದರ ಗುಜ್ಜರಬೆಟ್ಟು, ಕೆಮ್ಮಣ್ಣು ವ್ಯ.ಸೇ.ಸ. ಸಂಘ ಅಧ್ಯಕ್ಷ ಸತೀಶ್ ಶೆಟ್ಟಿ, ಪಂಚಾಯಿತಿ ಸದಸ್ಯರಾದ ಪ್ರಶಾಂತ್ ಕೆಮ್ಮಣ್ಣು, ಪುರಂದರ ಕುಂದರ್ ಗುಜ್ಜರಬೆಟ್ಟು, ಸಂಧ್ಯಾ ಕೆಮ್ಮಣ್ಣು, ಧೀರೇಂದ್ರ ನಾಯ್ಕ್ ಬೆಂಗ್ರೆ, ಲೋಕೇಶ್ ಸಾಲ್ಯಾನ್ ಬೆಂಗ್ರೆ, ಪ್ರತಿಭಾ ಭಾಸ್ಕರ್ ಬೆಂಗ್ರೆ, ವತ್ಸಲಾ, ಸ್ಥಳೀಯರಾದ ಪ್ರಶಾಂತ್ ಕಾಂಚನ್ ಬೆಂಗ್ರೆ, ಮಾಲತಿ ಶ್ರೀಯಾನ್, ಮುತ್ತಪ್ಪ ಮೇಸ್ತ್ರಿ, ರವೀಂದ್ರ ಶ್ರೀಯಾನ್, ವಿಶುಕುಮಾರ್ ಗುಜ್ಜರಬೆಟ್ಟು, ರವಿ ಸನಿಲ್ ಹೂಡೆ, ದಿನೇಶ್ ಮೇಸ್ತ್ರಿ, ಗಂಗಾಧರ ಪಾಲನ್, ಶೇಖರ ಶ್ರೀಯಾನ್ ಬೆಂಗ್ರೆ, ರಾಘು ಕುಂದರ್, ಲತೇಶ್ ಗುಜ್ಜರಬೆಟ್ಟು, ಪುರುಷೋತ್ತಮ ಗುಜ್ಜರಬೆಟ್ಟು, ರವಿ ಕುಂದರ್ ಗುಜ್ಜರಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರಿಹರ ಪ್ರಮುಖ ರಸ್ತೆಗಳಲ್ಲಿ ಬೀದಿದೀಪ, ಸಿಸಿ ಕ್ಯಾಮೆರಾ ಅಳವಡಿಸಿ
ಪ್ರೀತಿಸುವಂತೆ ಪೊಲೀಸ್‌ ಇನ್‌ಸ್ಪೆಕ್ಟರ್‌ಬೆನ್ನತ್ತಿದ್ದ ಮಹಿಳೆ ಈಗ ಜೈಲು ಪಾಲು