ರಸ್ತೆ ಡಾಂಬರೀಕರಣಕ್ಕೆ ಆಗ್ರಹಿಸಿ ಗುಳಘಟ್ಟ ಗ್ರಾಮಸ್ಥರಿಂದ ಪಾದಯಾತ್ರೆ, ಪ್ರತಿಭಟನೆ

KannadaprabhaNewsNetwork |  
Published : Jun 06, 2025, 11:47 PM ISTUpdated : Jun 06, 2025, 11:48 PM IST
6ಕೆಎಂಎನ್ ಡಿ25 | Kannada Prabha

ಸಾರಾಂಶ

ಗುಳಘಟ್ಟ ಗ್ರಾಮದಲ್ಲಿ ಹಲವು ವರ್ಷಗಳಿಂದ ರಸ್ತೆಗೆ ಗುಂಡಿ ಬಿದ್ದು ಸಾರ್ವಜನಿಕರು ಓಡಾಟಕ್ಕೆ ತೊಂದರೆಯಾಗುತ್ತಿದ್ದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕ್ರಮ ಕೈಗೊಂಡಿಲ್ಲ. ರಸ್ತೆ ದುರಸ್ತಿಗೊಳಿಬೇಕೆಂದು ಆಗ್ರಹಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ರಸ್ತೆ ಡಾಂಬರೀಕರಣಕ್ಕೆ ಆಗ್ರಹಿಸಿ ಸಿಪಿಐಎಂ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಗುಳಘಟ್ಟ ಗ್ರಾಮದಿಂದ ಪಟ್ಟಣದ ತಾಲೂಕು ಕಚೇರಿವರೆಗೆ ಪಾದಯಾತ್ರೆ ನಡೆಸಿ ಪ್ರತಿಭಟನೆ ನಡೆಸಿದರು.

ಪಟ್ಟಣದ ತಾಪಂ ಕಚೇರಿ ಎದುರು ಆಗಮಿಸಿದ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಕೂಡಲೇ ರಸ್ತೆ ಹಾಗೂ ಬೀದಿ ದೀಪಗಳನ್ನು ಸರಿಪಡಿಸಬೇಕೆಂದು ಆಗ್ರಹಿಸಿದರು.

ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ಭರತ್‌ರಾಜ್ ಮಾತನಾಡಿ, ಹಲವು ವರ್ಷಗಳಿಂದ ರಸ್ತೆಗೆ ಗುಂಡಿ ಬಿದ್ದು ಸಾರ್ವಜನಿಕರು ಓಡಾಟಕ್ಕೆ ತೊಂದರೆಯಾಗುತ್ತಿದ್ದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ರಸ್ತೆ ದುರಸ್ತಿಗೊಳಿಬೇಕೆಂದು ಆಗ್ರಹಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ರಸ್ತೆಯನ್ನು ಸರಿಪಡಿಸಿ ಬೀದಿ ದೀಪಗಳನ್ನು ಅಳವಡಿಸಬೇಕೆಂದು ಒತ್ತಾಯಿಸಿದರು.

ತಾಲೂಕು ಪ್ರಧಾನ ಕಾರ್ಯದರ್ಶಿ ಲಿಂಗರಾಜುಮೂರ್ತಿ ಮಾತನಾಡಿ, ರಸ್ತೆ ಸಂಪೂರ್ಣ ಗುಂಡಿ ಬಿದ್ದು ಕೆಸರಿನ ಗದ್ದೆಯಂತಾಗಿದೆ. ಜೊತೆಗೆ ರಸ್ತೆಯುದ್ದಕ್ಕೂ ಬೀದಿ ದೀಪಗಳ ಲ್ಲಿದೆ ಗಾರ್ಮೆಂಟ್ಸ್ ಫ್ಯಾಕ್ಟರಿ ಸೇರಿದಂತೆ ಇತರೆ ಕೆಲಸಕ್ಕೆ ಹೋಗುವ ಮಹಿಳೆಯರು ಕತ್ತಲಲ್ಲಿ ಈ ಕೆಸರ ಗುಂಡಿ ರಸ್ತೆಯಲ್ಲಿ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.

ಅಧಿಕಾರಿಗಳು ತಾಪಂ ಇಒ ಶ್ರೀನಿವಾಸ್ ಹಾಗೂ ಗ್ರಾಮೀಣ ಅಭಿವೃದ್ಧಿ ಇಲಾಖೆ ಎಇಇ ಮಹಾದೇವಸ್ವಾಮಿ ಸ್ಥಳಕ್ಕೆ ಆಗಮಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ವಾಪಸ್ ಪಡೆಯಲಾಯಿತು.

ಪ್ರತಿಭಟನೆಯಲ್ಲಿ ಜನವಾದಿ ಮಹಿಳಾ ಸಂಘಟನೆ ತಾಲೂಕು ಅಧ್ಯಕ್ಷೆ ಸುಶೀಲಾ, ಮುಖಂಡರಾದ ಗುರುಸ್ವಾಮಿ, ಶಿವಮಲ್ಲಯ್ಯ, ಜಯಶೀಲ, ಗ್ರಾಮದ ಯುವ ಮುಖಂಡರಾದ ಪ್ರಕಾಶ್, ಹೇಮಂತ್, ಸತೀಶ್, ರತ್ನಮ್ಮ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ