ಧಾರವಾಡ: ಗುಪ್ತಚರ ವಿಭಾಗದಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಗುಂಜನ್ ಆರ್ಯ ಅವರನ್ನು ವರ್ಗಾವಣೆ ಮಾಡಿ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಆಗಿ ನೇಮಿಸಲಾಗಿದೆ. ಪ್ರಸ್ತುತ ಎಸ್ಪಿ ಡಾ. ಗೋಪಾಲ್ ಬ್ಯಾಕೋಡ್ ಅವರನ್ನು ಬೆಂಗಳೂರಿನಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲಯದ ಜಂಟಿ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ.
ಬೆಂಗಳೂರಿಗೆ ವರ್ಗಾವಣೆ ಆಗಿರುವ ಡಾ. ಗೋಪಾಲ ಬ್ಯಾಕೋಡ್ ಅವರಿಗೆ ಇಂದು ಮಂಗಳವಾರ ಎಸ್.ಪಿ. ಕಚೇರಿಯಲ್ಲಿ ಜಿಲ್ಲೆಯ ಎಲ್ಲ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಬಿಳ್ಕೋಡುಗೆ ನೀಡಿ, ನೂತನ ಎಸ್.ಪಿ. ಗುಂಜನ್ ಆರ್ಯ ಅವರನ್ನು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಬರಮನಿ, ಉಪ ಪೊಲೀಸ್ ವರಿಷ್ಠಾಧಿಕಾರಿ ವಿನೋದ ಮುಕ್ತೆದಾರ, ಸಿಇಎನ್ ಡಿವೈಎಸ್ಪಿ ಶಿವಾನಂದ ಕಟಗಿ ಇದ್ದರು.----
15ಡಿಡಬ್ಲೂಡಿ10ಈ ಮೊದಲಿನ ಎಸ್ಪಿ ಗೋಪಾಲ ಬ್ಯಾಕೋಡ ಅವರಿಂದ ನೂತನ ಎಸ್ಪಿ ಗುಂಜನ್ ಆರ್ಯ ಅಧಿಕಾರ ಸ್ವೀಕರಿಸಿದರು.