ಕನ್ನಡಪ್ರಭ ವಾರ್ತೆ ಮೈಸೂರು
ಗಾಂಧಿನಗರದ ಉರಿಲಿಂಗಿ ಪೆದ್ದಿ ಮಠದಲ್ಲಿ ಜೈ ಭೀಮ್ ಜನಸ್ಪಂದನ ವೇದಿಕೆಯು ಭಾನುವಾರ ಆಯೋಜಿಸಿದ್ದ ಗುರುಪೂರ್ಣಿಮೆಯಲ್ಲಿ ಮಾತನಾಡಿದ ಅವರು, ಗುರುಗಳು ತಮ್ಮ ಪಾಠ ಮತ್ತು ಬುದ್ಧಿವಂತಿಕೆಯಿಂದ ಜಗತ್ತನ್ನು ನಿರಂತರವಾಗಿ ಬೆಳಗಿಸುವ ವ್ಯಕ್ತಿಯಾಗಿದ್ದಾನೆ ಎಂದರು.
ಗುರು ಓರ್ವ ವ್ಯಕ್ತಿಗೆ ಸದಾಚಾರದ ಮಾರ್ಗವನ್ನು ಅನುಸರಿಸಲು ಯಾವಾಗಲೂ ಪ್ರೋತ್ಸಾಹಿಸುತ್ತಾನೆ ಹಾಗೂ ಜೀವನದ ಪ್ರತಿಯೊಂದು ಪಾಠವನ್ನು ನಮಗೆ ಕಲಿಸುತ್ತಾನೆ. ಅವನ ಸೂಚನೆಯಿಲ್ಲದೆ, ನಮ್ಮ ದಾರಿಯಲ್ಲಿ ಬರುವ ಕತ್ತಲೆಯನ್ನು ಹೋಗಲಾಡಿಸುವುದು ಕಷ್ಟ. ಇಲ್ಲಿ ಕತ್ತಲೆಯು ಗೊಂದಲ ಮತ್ತು ಬುದ್ಧಿವಂತಿಕೆಯ ಕೊರತೆಯನ್ನು ಪ್ರತಿನಿಧಿಸುತ್ತದೆ. ಕತ್ತಲಿನಿಂದ ಬೆಳಕಿನೊಡನೆ ಕೊಂಡೊಯ್ಯುವನೇ ಗುರು ಎಂದರು.ಜೈ ಭೀಮ್ ಜನಸ್ಪಂದನ ವೇದಿಕೆ ಅಧ್ಯಕ್ಷ ಚೇತನ್ ಕಾಂತರಾಜ್, ಹಿರಿಯರಾದ ಎಂ. ಸ್ವಾಮಿ, ಪುಟ್ಟಸ್ವಾಮಿ, ಶಿವಣ್ಣ, ಮಾರ್ತಾಂಡಪ್ಪ, ಮರಿಯಪ್ಪ, ಸತೀಶ್ ಕುಮಾರ್, ಜಗದೀಶ್, ಕಾಶಿನಾಥ್, ಸಾಗರ್, ಶಿವಕುಮಾರ್, ಕಿರಣ್ ಮೊದಲಾದವರು ಇದ್ದರು.
ಕನ್ನಡಪ್ರಭ ವಾರ್ತೆ ಮೈಸೂರು
ನಗರದ ರಾಮಾನುಜ ರಸ್ತೆಯಲ್ಲಿ ಶ್ರೀ ಸದ್ಗುರು ಸಾಯಿಬಾಬಾ ದೇವಸ್ಥಾನದಲ್ಲಿ ಗುರುಪೂರ್ಣಿಮೆ ಅಂಗವಾಗಿ ಗುರುಗಳನ್ನು ಸ್ಮರಿಸುತ್ತಾ ಶ್ರೀ ಸಾಯಿ ಸದ್ಗುರು ಸೇವಾಶ್ರಮ ಹಾಗೂ ಅರಿವು ಸಂಸ್ಥೆ ವತಿಯಿಂದ ಶ್ರೀ ಸತ್ಯಸಾಯಿ ವ್ರತ ಮಾಲಾ ಪುಸ್ತಕವನ್ನು ಬಿಡುಗಡೆಗೊಳಿಸಿ, ಭಕ್ತಾದಿಗಳಿಗೆ ವಿತರಿಸಿ ಅವರು ಮಾತನಾಡಿದರು.
ಸಮಾಜ ಸೇವಕ ಕೆ. ರಘುರಾಂ ಮಾತನಾಡಿ, ಭಾರತ ಸಂಸ್ಕೃತಿಯಲ್ಲಿ ಗುರು ಶಿಷ್ಯ ಪರಂಪರೆ ಮಹತ್ವವನ್ನು ಪಡೆದುಕೊಂಡಿದೆ. ಗುರುಗಳಿಗೆ ಗೌರವ, ಪೂಜ್ಯ ಭಾವನೆ ಇತ್ತು. ಜೊತೆಗೆ ಗುರುವನ್ನು ದೇವರ ಸಮಾನ ಎಂದು ಪೂಜಿಸಿದ್ದ ಸಂಸ್ಕೃತಿ ನಮ್ಮದಾಗಿದೆ. ಇಂತಹ ಪರಂಪರೆಯನ್ನು ಉಳಿಸಿ ಬೆಳೆಸುತ್ತಿರುವ ಈ ಯುವಕರ ಕಾರ್ಯ ಮಹತ್ವವಾಗಿದೆ ಎಂದು ಹೇಳಿದರು.
ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆ.ಆರ್. ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್, ಅರಿವು ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ್ ಕಶ್ಯಪ್, ಸತ್ಯನಾರಾಯಣ್, ರಾಜಕುಮಾರ್, ಯದುಕುಮಾರ್, ಎಸ್.ಎನ್. ರಾಜೇಶ್ ಮೊದಲಾದವರು ಇದ್ದರು.