ದೇಗುಲ ಮಠದಿಂದ ಗುರು ಕೋರಣ್ಯ

KannadaprabhaNewsNetwork |  
Published : Aug 30, 2025, 01:00 AM IST
ಕೆ ಕೆ ಪಿ ಸುದ್ದಿ 02: ಶ್ರೀ ದೇಗುಲಮಠದಿಂದ ನಗರದಲ್ಲಿ ಗುರು ಕೋರಣ್ಯ ಕಾರ್ಯಕ್ರಮ ನಡೆಸಲಾಯಿತು.  | Kannada Prabha

ಸಾರಾಂಶ

ಕನಕಪುರ: ಶ್ರೀ ದೇಗುಲ ಮಠದ ಡಾ. ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ನೇತೃತ್ವದಲ್ಲಿ ಗೌರಿ- ಗಣೇಶ ಹಬ್ಬದ ಪ್ರಯುಕ್ತ ನಗರದಾದ್ಯಂತ ಎರಡು ದಿನ ಗುರು ಕೋರಣ್ಯ ಕಾರ್ಯಕ್ರಮ ನಡೆಯಿತು.

ಕನಕಪುರ: ಶ್ರೀ ದೇಗುಲ ಮಠದ ಡಾ. ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ನೇತೃತ್ವದಲ್ಲಿ ಗೌರಿ- ಗಣೇಶ ಹಬ್ಬದ ಪ್ರಯುಕ್ತ ನಗರದಾದ್ಯಂತ ಎರಡು ದಿನ ಗುರು ಕೋರಣ್ಯ ಕಾರ್ಯಕ್ರಮ ನಡೆಯಿತು.

ಶ್ರೀ ಮಠದ ಕಿರಿಯ ಶ್ರೀ ಚನ್ನಬಸವ ಸ್ವಾಮೀಜಿ ಹಾಗೂ ತೋಟಹಳ್ಳಿ ಮಠದ ಬಸವ ಪ್ರಭು ಸ್ವಾಮೀಜಿ, ಮರಳವಾಡಿ ಮಠದ ಕಿರಿಯ ಶ್ರೀ ಪ್ರಭುಕಿರೀಟ ಸ್ವಾಮೀಜಿ, ಅತ್ತಹಳ್ಳಿ ಮಠದ ಕಿರಿಯ ಶ್ರೀ ನಿರಂಜನ ಸ್ವಾಮೀಜಿ ಮತ್ತು ಬಿಲ್ವಪತ್ರೆ ಮಠದ ಇಮ್ಮಡಿ ಸದಾಶಿವ ಸ್ವಾಮೀಜಿ ನೇತೃತ್ವದಲ್ಲಿ ಭಕ್ತಾದಿಗಳ ಮನೆಮನೆಗೆ ತೆರಳಿ ಗುರು ಕೋರಣ್ಯ ನಡೆಸಿದರು.

ಶ್ರೀ ದೇಗುಲ ಮಠದಿಂದ ಭಾದ್ರಪದ ಮಾಸದ ವಾರ್ಷಿಕ ಗುರುಕೋರಣ್ಯ ಕಾಯಕ ಹಿಂದಿನಿಂದಲೂ ಬೆಳೆದು ಬಂದಿರುವ ಸಂಪ್ರದಾಯ. ಯಾವುದೇ ಮಠ ತನ್ನದೇ ಆದ ಆಸ್ತಿಯನ್ನು ಹೊಂದಿದ್ದರೂ ಅಲ್ಲಿ ನಡೆಯುವ ಅನ್ನದಾಸೋಹ, ವಿದ್ಯಾ ದಾಸೋಹ ಮತ್ತು ಜ್ಞಾನ ದಾಸೋಹಗಳನ್ನ ನಿರ್ವಹಿಸಲು ಗುರುಕೋರಣ್ಯ ಪದ್ಧತಿ ನಡೆದುಕೊಂಡು ಬಂದಿದೆ. ಈ ಪದ್ಧತಿಯನ್ನು ಹಿಂದಿನಿದಲೂ ಶ್ರೀ ದೇಗುಲಮಠದ ಗುರು ಪರಂಪರೆಯನ್ನ ಅನೂಚಾನವಾಗಿ ನಡೆಸಿಕೊಂಡು ಬರುತ್ತಿದೆ. ವಿಶೇಷವಾಗಿ ಈ ಬಾರಿ ಐವರು ಸ್ವಾಮೀಜಿಗಳು ಶ್ರೀ ದೇಗುಲ ಮಠಾಧ್ಯಕ್ಷ ಡಾ. ಮುಮ್ಮಡಿ ನಿರ್ವಾಣ ಸ್ವಾಮಿಗಳವರ ನೇತೃತ್ವದಲ್ಲಿ ಗುರುಕೋರಣ್ಯ ಕಾಯಕವನ್ನು ಕೋಟೆ, ಕೆಂಕೇರಮ್ಮ ರಸ್ತೆ, ಹೌಸಿಂಗ್ ಬೋರ್ಡ್, ಪೈಪ್ ಲೈನ್ ರಸ್ತೆ ಮಹದೇಶ್ವರ ಬಡಾವಣೆ ಎಂ.ಜಿ.ರಸ್ತೆ, ಮುನಿಸಿಪಲ್ ಹೈಸ್ಕೂಲ್ ರಸ್ತೆ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಸಂಚರಿಸಿ ಕೋರಣ್ಯ ಮಾಡಿದರು.

ಪೂಜ್ಯರನ್ನು ಭಕ್ತ ವೃಂದ ಭಕ್ತಿಭಾವದಿಂದ ಸ್ವಾಗತಿಸಿ, ತಮ್ಮ ಶಕ್ತಿಯನುಸಾರ ಕಾಣಿಕೆ ದವಸ ಧಾನ್ಯ, ಎಣ್ಣೆ, ತರಕಾರಿ ಇತ್ಯಾದಿ ದಾಸೋಹ ಪರಿಕರಗಳನ್ನು ಹಾಗೂ ಕಾಣಿಕೆ ಸಮರ್ಪಿಸಿ ಸತ್ಕರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ