ಕನ್ನಡಪ್ರಭ ವಾರ್ತೆ ದಾವಣಗೆರೆ
ಇಲ್ಲಿನ ವಿನೋಬ ನಗರದಲ್ಲಿ ಜಿಲ್ಲಾ ಆರ್ಯ ಈಡಿಗರ ಸಂಘದಿಂದ ನೂತನವಾಗಿ ನಿರ್ಮಿಸಿರುವ ಬಾಲಕರ ವಿದ್ಯಾರ್ಥಿ ನಿಲಯದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಆರ್ಯ ಈಡಿಗರು ಸಂಸ್ಕೃತಿ ಪಥದಲ್ಲಿ ಸಾಗುವ ಜೊತೆಗೆ ಸಮಾಜದ ಆದರ್ಶ, ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಮಕ್ಕಳನ್ನು ಅಂಕ ಗಳಿಸುವ ಯಂತ್ರಗಳನ್ನಾಗಿ ಮಾಡದೇ, ಸಂಸ್ಕೃತಿ ಕಲಿಸಿ, ಸಮಾಜಕ್ಕೆ ಕೊಡುಗೆ ನೀಡಬೇಕು. ಸಮಾಜದಿಂದ ನಮಗೆ ಏನು ಬಂದಿದೆ ಎನ್ನದೇ, ಸಮಾಜಕ್ಕೆ ನಾವೇನು ಕೊಡುಗೆ ನೀಡಿದ್ದೇವೆಂಬ ಚಿಂತನೆಯನ್ನು ಬಾಂಧವರು ಮಾಡಬೇಕು ಎಂದು ತಿಳಿಸಿದರು. ಸಮಾಜದ ಬಗ್ಗೆ ಸದಾ ಕಾಳಜಿ ಇರಬೇಕು. ಆದರೆ, ಅಂತಹ ಮನೋಭಾವ ಬಹುತೇಕರಲ್ಲಿ ಕಂಡು ಬರದೇ ಇರುವುದು ವಿಷಾದದ ಸಂಗತಿ. ಕಾಣದ ದೇವರ ಪೂಜೆ, ಪುರಸ್ಕಾರ ಮಾಡುವಂತೆ ಹಾಸ್ಟೆಲ್ಗಳಲ್ಲಿ ಜನ್ಮ ದಿನ, ವಿವಾಹ ವಾರ್ಷಿಕೋತ್ಸವ ಸೇರಿ ಇತರೆ ಕಾರ್ಯಕ್ರಮಗಳ ವೇಳೆ ಹಾಸ್ಟೆಲ್ ಮಕ್ಕಳಿಗೆ ಒಂದು ಹೊತ್ತಿನ ಅನ್ನದಾನದ ವ್ಯವಸ್ಥೆ ಮಾಡಿ, ನೇರವಾಗಿ. ದಾವಣಗೆರೆ ಸಂಘದಿಂದ ಅಭ್ಯುದಯ ಕೆಲಸ ಆಗಲಿ. ಸುಸಂಸ್ಕೃತ ಸಮಾಜವಾಗಲಿ ಎಂದು ಕಿವಿಮಾತು ಹೇಳಿದರು.ರಾಜ್ಯದ ವಿವಿಧ ಭಾಗಗಳ ಆರ್ಯ ಈಡಿಗ ವಿದ್ಯಾರ್ಥಿಗಳಿಗೆ ಕಾರ್ಕಳದಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ನಿಲಯದಲ್ಲಿ ಉಚಿತ ಶಿಕ್ಷಣ, ವಸತಿ ವ್ಯವಸ್ಥೆ ಮಾಡಲಾಗಿದೆ. ದಾವಣಗೆರೆ ಸೇರಿ ಸುತ್ತಮುತ್ತಲಿನ ಜಿಲ್ಲೆಗಳ ಆರ್ಯ ಈಡಿಗ ಸಮುದಾಯದ ಬಡ ಪಾಲಕರು ತಮ್ಮ ಮಕ್ಕಳನ್ನು ಕಾರ್ಕಳದ ವಿದ್ಯಾರ್ಥಿ ನಿಲಯಕ್ಕೆ ಕಳಿಸಿ ಕೊಡಿ. ಅಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣ, ವಸತಿ ವ್ಯವಸ್ಥೆ ಮಾಡುವುದು ನಮ್ಮ ಜವಾಬ್ದಾರಿ ಎಂದು ಸ್ವಾಮೀಜಿ ಭರವಸೆ ನೀಡಿದರು.
ಸಂಘದ ರಾಜ್ಯ ಉಪಾಧ್ಯಕ್ಷ ಶಿವಕುಮಾರ ಮಾತನಾಡಿ, ದಾವಣಗೆರೆ ಸಂಘ ಕ್ರಿಯಾಶೀಲತೆಯಿಂದ ಕೆಲಸ ಮಾಡುತ್ತಿದ್ದು, ಹಾಸ್ಟೆಲ್ ಕಟ್ಟಡವೂ ಗುಣಮಟ್ಟದಿಂದ ಕೂಡಿದೆ. ರಾಜ್ಯದ 6ನೇ ದೊಡ್ಡ ಸಮಾಜವಾದ ಆರ್ಯ ಈಡಿಗ ಬಾಂಧವರು ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕೆಂಬ ಮನೋಭಾವದಿಂದ ಕೈಲಾದ ನೆರವು, ಸಹಾಯ ಮಾಡಿದರೆ ಸಮಾಜವು ಎಲ್ಲಾ ರೀತಿಯಲ್ಲೂ ಮುಂದೆ ಬರುತ್ತದೆ. ಈ ನಿಟ್ಟಿನಲ್ಲಿ ಸಮಾಜದ ಅಭ್ಯುದಯವೂ ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಬೃಹತ್ ಆರ್ಯ ಈಡಿಗರ ಹಾಸ್ಟೆಲ್
ಇಲ್ಲಿನ ವಿನೋಬ ನಗರದಲ್ಲಿ ನಿಲಯದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, 75 ವರ್ಷದ ಹಿಂದೆ ಬೆಂಗಳೂರಿನಲ್ಲಿ ವೆಂಕಟಸ್ವಾಮೆಪ್ಪ, ಮುನಿಸ್ವಾಮೆಪ್ಪ ಮತ್ತಿತರರು ವಿದ್ಯಾರ್ಥಿ ನಿಲಯ ಕಟ್ಟಿಸಿ, ಉನ್ನತ ಶಿಕ್ಷಣ ಪಡೆಯಲು ಸಮಾಜಕ್ಕೆ ಅನುವು ಮಾಡಿಕೊಟ್ಟರು ಎಂದರು.
ಆರ್ಯ ಈಡಿಗ ಸಮಾಜದ ಜೊತೆಗೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸದಾ ಇರುತ್ತಾರೆ. ಈ ಸಮಾಜಕ್ಕೆ ಎಲ್ಲಾ ರೀತಿಯ ಸಹಕಾರ ನೀಡುತ್ತಾರೆ. ಆರ್ಯ ಈಡಿಗ ಸಮಾಜಕ್ಕೆ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿಎ ನಿವೇಶನ ನೀಡಲಾಗುವುದು.