ಮಕ್ಕಳು ಈ ಸಂದರ್ಭದಲ್ಲಿ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಪಾದಪೂಜೆಯ ಮುಖಾಂತರ ಸನ್ಮಾನಿಸುತ್ತಿರುವುದು ಹೆಮ್ಮೆಯ ಸಂಗತಿ
ಧಾರವಾಡ: ಇಲ್ಲಿಯ ಜೆಎಸ್ಸೆಸ್ ಮಂಜುನಾಥೇಶ್ವರ ಸೆಂಟ್ರಲ್ ಶಾಲೆಯಲ್ಲಿ ಗುರು ಪೂರ್ಣಿಮೆ ನಿಮಿತ್ತ ಹತ್ತನೆಯ ತರಗತಿಯ ಮಕ್ಕಳು ಶಿಕ್ಷಕ ವೃಂದಕ್ಕೆ ಹಾಗೂ ಶಾಲಾ ಸಿಬ್ಬಂದಿಗಳಿಗೆ ಪಾದಪೂಜೆ ಮಾಡುವ ಮೂಲಕ ಕೃತಜ್ಞತೆ ಸಲ್ಲಿಸಿದರು.
ಪ್ರಾಚಾರ್ಯ ಸಾಧನಾ ಎಸ್.ಮಾತನಾಡಿ, ಭಾರತೀಯ ಪರಂಪರೆ, ಆಚಾರ-ವಿಚಾರ ಮಹತ್ತರವಾದವು. ಮಕ್ಕಳು ಈ ಸಂದರ್ಭದಲ್ಲಿ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಪಾದಪೂಜೆಯ ಮುಖಾಂತರ ಸನ್ಮಾನಿಸುತ್ತಿರುವುದು ಹೆಮ್ಮೆಯ ಸಂಗತಿ. ಮಕ್ಕಳ ಭವಿಷ್ಯ ಉಜ್ವಲವಾಗಲಿ ಹಾಗೂ ಜೀವನದಲ್ಲಿ ಯಶಸ್ಸನ್ನು ಕಾಣಲಿ ಎಂದು ಹಾರೈಸಿದರು. ಸಂಸ್ಕೃತ ವಿಷಯದ ಮುಖ್ಯಸ್ಥ ಡಾ.ಶ್ರೀಶಾಚಾರ್ಯ ನಾಮಾವಳಿ ಪಾದ ಪೂಜೆ ಮಾಡುವ ವಿಧಾನ ತಿಳಿಸಿಕೊಟ್ಟರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.