ಪುಟ 2ಕ್ಕೆ ಬಾಟಮ್....ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ

KannadaprabhaNewsNetwork |  
Published : Apr 08, 2026, 04:00 AM IST
7ದಹಪ1 | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ತಾಲೂಕಿನ ಯಾಳವಾರ ಗ್ರಾಮದ ಶ್ರೀ ಸೋಮೇಶ್ವರ ವಿದ್ಯಾವರ್ಧಕ ಸಂಘದ ಪ್ರೌಢಶಾಲೆಯ 2006ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಶಾಲೆ ಆವರಣದಲ್ಲಿ ನಡೆಯಿತು. ಶಿಷ್ಯರು ತಮ್ಮ ಜೀವನವನ್ನು ರೂಪಿಸಿದ ಗೌರವ, ಕೃತಜ್ಞತೆ ಮತ್ತು ಪ್ರೀತಿಯನ್ನು ಹೃದಯಪೂರ್ವಕವಾಗಿ ಸಲ್ಲಿಸಿದರು. ಹಿರಿಯ ವಿದ್ಯಾರ್ಥಿಗಳು ಒಗ್ಗೂಡಿ, ತಾವು ಕಲಿತ ಶಾಲೆಗೆ ಮರಳಿ, ತಮ್ಮ ಬಾಲ್ಯದ ಶಿಕ್ಷಕರನ್ನು ಸನ್ಮಾನಿಸಿ, ನೆನಪುಗಳನ್ನು ಹಂಚಿಕೊಂಡರು.

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ

ತಾಲೂಕಿನ ಯಾಳವಾರ ಗ್ರಾಮದ ಶ್ರೀ ಸೋಮೇಶ್ವರ ವಿದ್ಯಾವರ್ಧಕ ಸಂಘದ ಪ್ರೌಢಶಾಲೆಯ 2006ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಶಾಲೆ ಆವರಣದಲ್ಲಿ ನಡೆಯಿತು.

ಶಿಷ್ಯರು ತಮ್ಮ ಜೀವನವನ್ನು ರೂಪಿಸಿದ ಗೌರವ, ಕೃತಜ್ಞತೆ ಮತ್ತು ಪ್ರೀತಿಯನ್ನು ಹೃದಯಪೂರ್ವಕವಾಗಿ ಸಲ್ಲಿಸಿದರು. ಹಿರಿಯ ವಿದ್ಯಾರ್ಥಿಗಳು ಒಗ್ಗೂಡಿ, ತಾವು ಕಲಿತ ಶಾಲೆಗೆ ಮರಳಿ, ತಮ್ಮ ಬಾಲ್ಯದ ಶಿಕ್ಷಕರನ್ನು ಸನ್ಮಾನಿಸಿ, ನೆನಪುಗಳನ್ನು ಹಂಚಿಕೊಂಡರು. ಶಿಕ್ಷಕರಿಗೆ ಶಾಲು ಹೊದಿಸಿ, ಸ್ಮರಣಿಕೆಗಳ ಮೂಲಕ ಗೌರವಿಸಿದರು. ಕಾರ್ಯಕ್ರಮದ ಕುರಿತು ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿ ಶಿಷ್ಯ ವರ್ಗಕ್ಕೆ ಹಿತನುಡಿಗಳನ್ನು ಹೇಳಿದರು. ಶಿಕ್ಷಕರಿಂದ ಹಿರಿಯ ವಿದ್ಯಾರ್ಥಿಗಳು ನೆನಪಿನ ಕಾಣಿಕೆ ಸ್ವೀಕರಿಸಿದರು.

ಪ್ರಾಚಾರ್ಯ ಜಿ.ಎಸ್. ನಾಡಗೌಡ ಮಾತನಾಡಿ, ಇಂದಿನ ಮಕ್ಕಳಿಗೆ ಶಿಕ್ಷಣ ಮಾತ್ರ ನೀಡಿದರೆ ಸಾಲದು; ಸಂಸ್ಕಾರ ಬಹಳ ಮುಖ್ಯ. ಒಳ್ಳೆಯ ಸಂಸ್ಕಾರ ದೊರೆತರೆ ಸಮಾಜದಲ್ಲಿ ಆದರ್ಶ ವ್ಯಕ್ತಿಯಾಗಿ ಜೀವನದಲ್ಲಿ ಯಶಸ್ಸು ಗಳಿಸುತ್ತಾರೆ. ಎಲ್ಲಾ ಹಳೆ ವಿದ್ಯಾರ್ಥಿಗಳಿಗೆ ಮುಂದಿನ ಜೀವನ ಉಜ್ವಲವಾಗಲಿ ಎಂದು ಹಾರೈಸಿದರು.

ಎಸ್‌ಎಸ್‌ವಿವಿಎಸ್ ಸಂಸ್ಥೆಯ ಅಧ್ಯಕ್ಷ ರಾಜುಗೌಡ ಸಂ. ನಾಡಗೌಡ, ನಿವೃತ್ತ ಮುಖ್ಯಗುರುಗಳಾದ ಎಂ.ಡಿ. ಬಳಗಾರ, ಎಂ.ವೈ. ಜಾಯವಾಡಗಿ, ನಿವೃತ್ತ ಶಿಕ್ಷಕ ಎಂ.ಬಿ. ಬಿರಾದಾರ, ಶಿಕ್ಷಕರಾದ ಕೆ.ಐ. ಹೊಸಮನಿ, ಎಸ್.ಎನ್. ಥಬ್ಬಣ್ಣವರ, ಎಸ್.ಎಸ್.ಕಾರಜೋಳ, ಎಂ.ಎಸ್. ಬಾಗೇವಾಡಿ, ಸಿ.ಸಿ.ಬಿರಾದಾರ, ನಿವೃತ್ತ ಗ್ರಂಥಪಾಲಕ ಪಿ.ಎಂ.ಮಠಪತಿ, ನಿವೃತ್ತ ಗುಮಾಸ್ತ ಎನ್.ಎಸ್.ಬಡಗಿ, ಗ್ರಾಮದ ಪ್ರಮುಖರಾದ ಆರ್.ಎಸ್. ಪಾಟೀಲ, ಬಿ.ಆರ್.ಪಾಟೀಲ, ಸೋಮನಗೌಡ ಮೂಲಿಮನಿ ಇದ್ದರು.

ಹಿರಿಯ ವಿದ್ಯಾರ್ಥಿನಿ ರೇಷ್ಮಾ ಮೋಮಿನ್ ಸ್ವಾಗತಿಸಿದರು. ಕುಮಾರಿ ಶ್ರಾವ್ಯಾ ಪಾಟೀಲ ಪ್ರಾರ್ಥಿಸಿದರು. ಹಿರಿಯ ವಿದ್ಯಾರ್ಥಿಗಳು ಸ್ವಾಗತ ಗೀತೆ ಹಾಡಿದರು. ಎಸ್‌ಎಸ್‌ವಿವಿಎಸ್ ಪಪೂ ಕಾಲೇಜಿನ ಅತಿಥಿ ಉಪನ್ಯಾಸಕ ಹುಸೇನಸಾಬ್ ಕರಡಿ ನಿರೂಪಿಸಿ, ವಂದಿಸಿದರು. ಕೊನೆಯಲ್ಲಿ ಅಗಲಿದ ಹಿರಿಯ ವಿದ್ಯಾರ್ಥಿ ಶಿವಶಂಕರ ಥಬ್ಬಣ್ಣವರ ಅವರಿಗೆ ಒಂದು ನಿಮಿಷ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

------------

7ಡಿಎಚಪಿ1: ದೇವರಹಿಪ್ಪರಗಿ ತಾಲೂಕಿನ ಯಾಳವಾರ ಗ್ರಾಮದ ಶ್ರೀ ಸೋಮೇಶ್ವರ ವಿದ್ಯಾವರ್ಧಕ ಸಂಘದ ಪ್ರೌಢಶಾಲೆಯ 2006ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಶಾಲೆ ಆವರಣದಲ್ಲಿ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವ ಪೀಳಿಗೆ ಪೋಷಕಾಂಶಗಳ ಕೊರತೆ
3ನೇ ಪುಟಕ್ಕೆ ಬ್ರೀಪ್‌... ಗ್ರಾಮ ಒನ್ ಫ್ರಾಂಚೈಸಿಗೆ ಆನ್ ಲೈನ್ ಅರ್ಜಿ ಆಹ್ವಾನ