ಕನ್ನಡಪ್ರಭ ವಾರ್ತೆ ಪಾಂಡವಪುರ
ಕಾರ್ಯಕ್ರಮವನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಉದ್ಘಾಟಿಸುವರು. ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಗುರುವಂದನೆ ಕುರಿತು ಚಿತ್ರನಿರ್ದೇಶಕ ಎಸ್.ನಾರಾಯಣ್ ಮಾತನಾಡಲಿದ್ದಾರೆ. ಅಪರ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರಸ್ವಾಮಿ ಅವರು ಸ್ವಾಮಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ. ಲಕ್ಷ ದೀಪೋತ್ಸವಕ್ಕೆ ಉಪವಿಭಾಗಾಧಿಕಾರಿ ಕೆ.ಆರ್.ಶ್ರೀನಿವಾಸ್ ಚಾಲನೆ ನೀಡಲಿದ್ದಾರೆ. ತಾಪಂ ಇಒ ಎಂ.ಎಸ್.ವೀಣಾ ಹಾಗೂ ಭಾಗ್ಯವತಿ ಎಸ್.ನಾರಾಯಣ್ ಅವರು ಮಹಿಳೆಯರಿಗೆ ಬಾಗಿನ ಹಾಗೂ ಮಡಿಲಕ್ಕಿ ವಿತರಣೆ ಮಾಡಲಿದ್ದಾರೆ ಎಂದರು.
ಮೈಸೂರು ಮಹಾನಗರ ಪಾಲಿಕೆ ಸದಸ್ಯ ಭಾಗ್ಯಶ್ರೀ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ತ್ಯಾಗರಾಜು, ತಹಸೀಲ್ದಾರ್ ಬಸವರೆಡ್ಡಪ್ಪರೋಣದ, ಪುರಸಭೆ ಮುಖ್ಯಾಧಿಕಾರಿ ಸತೀಶ್ಕುಮಾರ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಯಶವಂತ್ಮಲ್ಲಿಗೆರೆ, ಎಂ.ಎಸ್.ಮಂಜುನಾಥ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದರು.ಧರ್ಮದರ್ಶಿ ಶ್ರೀರವಿತೇಜ ಅವರು ಕಳೆದ ನಾಲ್ಕು ವರ್ಷಗಳಿಂದ ವಿಶೇಷವಾಗಿ ಲಕ್ಷ ದೀಪೋತ್ಸವವನ್ನು ನಡೆಸಿಕೊಂಡು ಬರುತ್ತಿದ್ದು, ನೂರಾರು ಮಹಿಳೆಯರು ಭಾಗವಹಿಸಲಿದ್ದಾರೆ ಇದೇ ವೇಳೆ ಮಹಿಳೆಯರಿಗೆ ಮಡಿಲಕ್ಕಿ ವಿತರಣೆ ಜರುಗಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಎಂ.ಎಸ್.ಮಂಜುನಾಥ್, ಕನಕಯುವ ಬಳಗದ ಉಪಾಧ್ಯಕ್ಷ ಕೆ.ಬೆಟ್ಟಹಳ್ಳಿಸ್ವಾಮಿ, ಶಂಭೂಲಿಂಗಪ್ಪ, ಗೋವಿಂದಪ್ಪ ಸೇರಿದಂತೆ ಹಲವರು ಇದ್ದರು.