ಹಸಿರು ನಗರವಾಗಿಸಲು ಲಕ್ಷ ಸಸಿ ನೆಡುವ ಗುರು: ಗಂಗಾಧರಸ್ವಾಮಿ

KannadaprabhaNewsNetwork |  
Published : Sep 22, 2024, 01:48 AM IST
ಕ್ಯಾಪ್ಷನಃ21ಕೆಡಿವಿಜಿ44ಃಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಜನ್ಮದಿನದ ಅಂಗವಾಗಿ ದಾವಣಗೆರೆಯ ವಿವಿಧ ಬಡಾವಣೆಗಳಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಜನ್ಮದಿನದ ಅಂಗವಾಗಿ ದಾವಣಗೆರೆಯ ವಿವಿಧ ಬಡಾವಣೆಗಳಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ದಾವಣಗೆರೆ

ದಾವಣಗೆರೆ ಸ್ಮಾರ್ಟ್‌ ಸಿಟಿಯಾಗಿದ್ದು ಇದನ್ನು ಹಸಿರು ನಗರವಾಗಿಸಲು ಪ್ರತಿ ವರ್ಷ ವಿವಿಧ ಜಾತಿಯ ಲಕ್ಷ ಗಿಡಗಳನ್ನು ಬೆಳೆಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಶನಿವಾರ ನಗರದ ಶಿವ ಪಾರ್ವತಿ ಬಡಾವಣೆ, ಜೆ.ಎಚ್.ಪಟೇಲ್ ಬಡಾವಣೆ ಹಾಗೂ ಬನಶಂಕರಿ ಬಡಾವಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಜನ್ಮ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆಯಿಂದ ಏರ್ಪಡಿಸಲಾದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಉತ್ತಮ ಆರೋಗ್ಯಕ್ಕೆ ಶುದ್ಧ ಗಾಳಿ ಸಿಗಬೇಕು, ಹಸಿರು ನಗರವಾಗಿಸಲು ನಗರ ವ್ಯಾಪ್ತಿಯಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡಲು, ಅದರಲ್ಲಿಯು ಹೆಚ್ಚು ಆಕ್ಸಿಜನ್ ಉತ್ಪಾದಿಸುವ ಗಿಡಗಳನ್ನು ಬೆಳೆಸಲಾಗುತ್ತದೆ. ಈ ಗಿಡಗಳನ್ನು ಪೋಷಿಸಲು ಸ್ಥಳೀಯ ನಿವಾಸಿಗಳು ಸಹ ಕೈಜೋಡಿಸಿ ಬೆಳೆಸಬೇಕು, ಇದರಿಂದ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಎಂದು ಹೇಳಿದರು.

ಈಗಾಗಲೇ ಬೇವು, ಅರಳಿ, ಹೊಂಗೆ ಸೇರಿದಂತೆ 5,400 ಗಿಡಗಳನ್ನು ನೆಡಲಾಗಿದೆ. ಮುಂದಿನ ವರ್ಷ ಮುಂಗಾರು ಹಂಗಾಮು ಆರಂಭವಾದ ತಕ್ಷಣ ಗಿಡಗಳನ್ನು ನೆಡಲು ಕ್ರಮವಹಿಸಲಾಗುತ್ತದೆ. ಶಿವಪಾರ್ವತಿ ಬಡಾವಣೆಯಲ್ಲಿ ಬೀದಿ ದೀಪ, ಒಳಚರಂಡಿ ವ್ಯವಸ್ಥೆ ಬಗ್ಗೆ ತಿಳಿಸಿದ್ದು ಪಾಲಿಕೆಯಿಂದ ಕ್ರಮ ವಹಿಸಲಾಗುತ್ತದೆ ಎಂದರು.

ಈ ವಳೇ ಪಾಲಿಕೆ ಆಯುಕ್ತೆ ರೇಣುಕಾ, ರೈತ ಮುಖಂಡ ಬಲ್ಲೂರು ರವಿಕುಮಾರ್, ಬಡಾವಣಿ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಿಜಯಕುಮಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಶಿಧರ್, ಸಾಮಾಜಿಕ ಅರಣ್ಯ ವಿಭಾಗದ ಉಪ ಸಂರಕ್ಷಣಾಧಿಕಾರಿ ನಾಯಕ್ ಹಾಗೂ ವಿವಿಧ ನಿವಾಸಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು