ಅಜ್ಞಾನವೆಂಬ ಕತ್ತಲನ್ನು ಕಳೆಯುವವರೇ ಗುರುಗಳು: ಡಿ.ವೈ.ಹಾದಿಕಾರ್

KannadaprabhaNewsNetwork |  
Published : Dec 25, 2025, 01:30 AM IST
24ಕೆಎಂಎನ್ ಡಿ22 | Kannada Prabha

ಸಾರಾಂಶ

ವಿಜ್ಞಾನ ತಂತ್ರಜ್ಞಾನ ಮುಂದುವರಿದ ಈ ಕಾಲದಲ್ಲಿ ವಿಶ್ವವೇ ಒಂದು ಗ್ರಾಮವಂತಾಗಿದೆ. ಉದ್ಯೋಗ ಇನ್ನಿತರೆ ಕಾರಣಗಳಿಗಾಗಿ ಹುಟ್ಟಿದ ಊರು ಬಿಟ್ಟು ಬೇರೆಲ್ಲೋ ನೆಲೆಸಿದವರು ತಮ್ಮ ದಿನನಿತ್ಯದ ಒತ್ತಡ ಜೀವನದಲ್ಲಿ ಹುಟ್ಟಿದ ಊರು, ಹೆತ್ತವರು, ಅಕ್ಷರ ಕಲಿಸಿದ ಗುರುಗಳನ್ನು ನೆನೆಸಿಕೊಳ್ಳಲಾಗದ ಸ್ಥಿತಿಗೆ ತಲುಪಿದ್ದಾರೆ.

ಕನ್ನಡಪ್ರಭ ವಾರ್ತೆ ಮದ್ದೂರು

ಗುರುಗಳು ಜ್ಞಾನದ ದೀಪ. ಅಜ್ಞಾನವೆಂಬ ಕತ್ತಲನ್ನು ಕಳೆಯುವವರು. ಅವರ ಸೇವೆ ಸ್ಮರಿಸುವುದು, ಧನ್ಯತೆ ಸಮರ್ಪಣೆ ಮಾಡುವುದು ಸಾರ್ಥಕ ಕಾರ್ಯ ಎನಿಸುತ್ತವೆ ಎಂದು ಹಿರಿಯ ಶಿಕ್ಷಕ ಡಿ.ವೈ.ಹಾದಿಕಾರ್ ಹೇಳಿದರು.

ತಾಲೂಕಿನ ಕೌಡ್ಲೆ ಗ್ರಾಮದ ಸಿಎಂಸಿಸಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢ ಶಾಲಾ ವಿಭಾಗ) ಹಿರಿಯ ವಿದ್ಯಾರ್ಥಿಗಳು ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿ, ವಿಜ್ಞಾನ ತಂತ್ರಜ್ಞಾನ ಮುಂದುವರಿದ ಈ ಕಾಲದಲ್ಲಿ ವಿಶ್ವವೇ ಒಂದು ಗ್ರಾಮವಂತಾಗಿದೆ. ಉದ್ಯೋಗ ಇನ್ನಿತರೆ ಕಾರಣಗಳಿಗಾಗಿ ಹುಟ್ಟಿದ ಊರು ಬಿಟ್ಟು ಬೇರೆಲ್ಲೋ ನೆಲೆಸಿದವರು ತಮ್ಮ ದಿನನಿತ್ಯದ ಒತ್ತಡ ಜೀವನದಲ್ಲಿ ಹುಟ್ಟಿದ ಊರು, ಹೆತ್ತವರು, ಅಕ್ಷರ ಕಲಿಸಿದ ಗುರುಗಳನ್ನು ನೆನೆಸಿಕೊಳ್ಳಲಾಗದ ಸ್ಥಿತಿಗೆ ತಲುಪಿದ್ದಾರೆ ಎಂದರು.

ಇಂತಹ ಪರಿಸ್ಥಿತಿಯಲ್ಲಿ ಹಿರಿಯ ವಿದ್ಯಾರ್ಥಿಗಳೆಲ್ಲರು ಒಟ್ಟುಗೂಡಿ ಗುರುಗಳಿಗೆ ಗೌರವ ವಂದನೆ ಸಲ್ಲಿಸುತ್ತಿರುವುದು ಶ್ಲಾಘನೀಯ. ಶಿಕ್ಷಕರಿಗೆ ಗೌರವ ಸಲ್ಲಿಸುವ ಜತೆಗೆ ತಮ್ಮ ಹಳೆಯ ದಿನಗಳನ್ನು ಮೆಲಕು ಹಾಕುವಂತಹ ಸುಂದರ ಕ್ಷಣಗಳಿಗೆ ಸಾಕ್ಷಿಯಾದ ಇಂತಹ ಕಾರ್ಯಕ್ರಮ ಇದೀಗ ಅಗತ್ಯವಿದೆ ಎಂದರು.

ನಿಕಟಪೂರ್ವ ಮುಖ್ಯಶಿಕ್ಷಕ ಉಮೇಶ್ ಇಟಗಿ ಮಾತನಾಡಿದರು. 2000 ರಿಂದ 2025ರವರೆಗೆ ಶಾಲೆಯಲ್ಲಿ ವ್ಯಾಸಂಗ ಮಾಡಿದ ನೂರಾರು ಹಿರಿಯ ವಿದ್ಯಾರ್ಥಿಗಳು ಶಿಕ್ಷಕರಾದ ಪಿ.ಶಶಿಕಲಾ, ಎಂ.ನಂಜಪ್ಪ, ಎಂ.ಎಸ್.ಸವಿತಾ, ಬಿ.ವಿಜಯ್, ಸುರೇಶ್ ನಾಯ್ಕ, ಸರಿತಾ, ಶೇಖರಯ್ಯ ಕೋಡಿಮಠ್, ಹೀರಲಾಲ್, ಶಿವಪ್ಪ, ಶ್ರೀಧರ್, ಶ್ರೀಕಾಂತ್, ನಾಗೇಶ್ ಸೇರಿ ಇತರ ಶಿಕ್ಷಕರಿಗೆ ಗುರುವಂನೆ ಸಲ್ಲಿಸಿದರು.

ಡಿ.31ರಂದು ಜಿಲ್ಲಾಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಸ್ಪರ್ಧೆ

ಮಂಡ್ಯ: ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2026 ರ ಅಂಗವಾಗಿ ರಾಜ್ಯ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ ಪೂರ್ವಭಾವಿಯಾಗಿ ಕೃಷಿ ಇಲಾಖೆ ವತಿಯಿಂದ ಡಿ.31 ರಂದು ನಗರದ ಗಾಂಧಿಭವನದಲ್ಲಿ ಜಿಲ್ಲಾ ಮಟ್ಟದಲ್ಲಿ ಸಿರಿಧಾನ್ಯ ಪಾಕ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಸ್ಪರ್ಧೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳನ್ನು ಹೊರತುಪಡಿಸಿ ಎಲ್ಲಾ ಸಾರ್ವಜನಿಕರು ಸಿಹಿ (ಸಿರಿಧಾನ್ಯ) ಖಾದ್ಯಗಳು, ಖಾರ (ಸಿರಿಧಾನ್ಯ) ಖಾದ್ಯಗಳು ಹಾಗೂ ಮರೆತು ಹೋದ ಖಾದ್ಯಗಳ ವಿಭಾಗದಡಿ ಸಸ್ಯಹಾರಿ ಖಾದ್ಯಗಳಿಗೆ ಭಾಗವಹಿಸಲು ಅವಕಾಶವಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಭಾವಚಿತ್ರದೊಂದಿಗೆ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಮತ್ತು ಪ್ರದರ್ಶಿಸುವ ಖಾದ್ಯಗಳ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು ಡಿ.30 ರೊಳಗೆ ಇ-ಮೇಲ್ ವಿಳಾಸ ಅಥವಾ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಕೊಠಡಿ ಸಂಖ್ಯೆ 50, 1ನೇ ಮಹಡಿ, ಜಿಲ್ಲಾಧಿಕಾರಿಗಳ ಕಾರ್ಯಾಲಯ ಆವರಣ, ಮಂಡ್ಯ ವಿಳಾಸಕ್ಕೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ: 8277933611, 9535739394, 9980083269 ಮತ್ತು 9483593315 ಗಳನ್ನು ಸಂಪರ್ಕಿಸಲು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದು 2028ರವರೆಗೂ ಸಿಎಂ, ಇಳಿಸಲು ಆಗೋಲ್ಲ: ಜಮೀರ್‌
ಫೆ.೮ರಂದು ಶ್ರೀ ರಾಮಲಿಂಗೇಶ್ವರ ಮಠ ಲೋಕಾರ್ಪಣೆ