ಎಚ್.ಎಂ.ರೇವಣ್ಣ, ಡಾ.ಯತೀಂದ್ರಗೆ ಸಚಿವ ಸ್ಥಾನ ನೀಡಿ

KannadaprabhaNewsNetwork |  
Published : May 31, 2026, 02:00 AM IST
ಪೊಟೋ೩೦ಸಿಪಿಟಿ೨: ಪಟ್ಟಣದ ಕುರುಬರ ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕುರುಬರ ಸಂಘದ ಮುಖಂಡರು ಭಾಗವಹಿಸಿದ್ದರು. | Kannada Prabha

ಸಾರಾಂಶ

ಚನ್ನಪಟ್ಟಣ: ಸಿದ್ದರಾಮಯ್ಯ ಹೈಕಮಾಂಡ್ ಆದೇಶಕ್ಕೆ ತಲೆಬಾಗಿ ಯಾವುದೇ ಗೊಂದಲಕ್ಕೆ ಎಡೆಮಾಡಿಕೊಡದಂತೆ ಸ್ವಯಂ ಪ್ರೇರಿತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ನುಡಿದಂತೆ ನಡೆದು ಹಾಲುಮತಸ್ಥರು ಕೊಟ್ಟ ಮಾತನ್ನು ತಪ್ಪುವುದಿಲ್ಲ ಎಂದು ತೋರಿಸಿಕೊಟ್ಟಿದ್ದಾರೆ ಎಂದು ತಾಲೂಕು ಕುರುಬರ ಸಂಘದ ಮಾಜಿ ಅಧ್ಯಕ್ಷ ಯಲಿಯೂರು ನಾಗಣ್ಣ ಆಗ್ರಹಿಸಿದರು

ಚನ್ನಪಟ್ಟಣ: ಸಿದ್ದರಾಮಯ್ಯ ಹೈಕಮಾಂಡ್ ಆದೇಶಕ್ಕೆ ತಲೆಬಾಗಿ ಯಾವುದೇ ಗೊಂದಲಕ್ಕೆ ಎಡೆಮಾಡಿಕೊಡದಂತೆ ಸ್ವಯಂ ಪ್ರೇರಿತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ನುಡಿದಂತೆ ನಡೆದು ಹಾಲುಮತಸ್ಥರು ಕೊಟ್ಟ ಮಾತನ್ನು ತಪ್ಪುವುದಿಲ್ಲ ಎಂದು ತೋರಿಸಿಕೊಟ್ಟಿದ್ದಾರೆ ಎಂದು ತಾಲೂಕು ಕುರುಬರ ಸಂಘದ ಮಾಜಿ ಅಧ್ಯಕ್ಷ ಯಲಿಯೂರು ನಾಗಣ್ಣ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ಸಂಪುಟದಲ್ಲಿ ಕುರುಬ ಸಮುದಾಯದ ಹಿರಿಯ ನಾಯಕರಾದ ಎಚ್.ಎಂ.ರೇವಣ್ಣ ಮತ್ತು ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕು. ಸಿದ್ದರಾಮಯ್ಯ ಅವರು ಒಂದು ಸಮುದಾಯಕ್ಕೆ ಸೀಮಿತ ಆಗದೆ ಅಹಿಂದ ಸೇರಿದಂತೆ ರಾಜ್ಯದ ಎಲ್ಲಾ ಸಮುದಾಯಕ್ಕೂ ಸಮಾನ ಅಧಿಕಾರ ಸೌಲಭ್ಯ ನೀಡಿದರು. ತಮ್ಮ ಅವಧಿಯಲ್ಲಿ ಹತ್ತಾರು ದಾಖಲೆಗಳ ಜತೆಗೆ ನೂರಾರು ಶಾಶ್ವತ ಜನಪರ ಯೋಜನೆಗಳನ್ನು ನೀಡಿದರು. ಹಿಂದೆ ೫ ವರ್ಷಗಳು ಹಾಗೂ ಇಂದು ೩ ವರ್ಷಗಳ ಕಾಲ ಕಳಂಕ ರಹಿತ ಆಡಳಿತ ಮಾಡಿದ್ದು, ಹೈಕಮಾಂಡ್ ಆದೇಶಕ್ಕೆ ತಲೆ ಭಾಗಿ ರಾಜೀನಾಮೆ ನೀಡಿರುವುದು ಕುರುಬ, ಅಹಿಂದ ಸಮುದಾಯಕ್ಕೆ ತುಂಬಲಾರದ ನೋವಾಗಿದೆ ಎಂದರು.

ತಾಲೂಕು ಕುರುಬ ಸಂಘದ ಗೌರವಾಧ್ಯಕ್ಷ ಕೆ.ಬಿ.ಬೀರಯ್ಯ ಮಾತನಾಡಿ, ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ನೀಡಿದ್ದರೂ ಇಂದು ರಾಜೀನಾಮೆ ನೀಡಿದ್ದಾರೆ ಎಂದರೆ ಅದಕ್ಕೆ ಹೈಕಮಾಂಡ್ ಮೇಲಿನ ಗೌರವ ಕಾರಣ. ಈ ನಿಟ್ಟಿನಲ್ಲಿ ವಿಪಕ್ಷಗಳಿಗೆ ರಾಜಕೀಯ ಆಹಾರವಾಗದಂತೆ ನುಡಿದಂತೆ ನಡೆದು ರಾಜೀನಾಮೆ ನೀಡಿರುವ ಸಿದ್ದರಾಯಮ್ಮ ಅವರನ್ನು ಉನ್ನತ ಸ್ಥಾನ ನೀಡಿ ಉಳಿಸಿಕೊಳ್ಳುವ ಜೊತೆಗೆ ಅವರ ಮಗ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು. ಜೊತೆಗೆ ಸಮುದಾಯದ ಮತ್ತೋರ್ವ ಹಿರಿಯ ನಾಯಕರಾದ ಎಚ್.ಎಂ. ರೇವಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕು. ನಾವೆಲ್ಲಾ ಹಿಂದೆ ಸಾತನೂರು ಕ್ಷೇತ್ರದಲ್ಲಿ ಡಿ.ಕೆ.ಶಿವಕುಮಾರ್‌ ಅವರನ್ನು ರಾಜಕೀಯವಾಗಿ ಬೆಳೆಸಿದ್ದೇವೆ. ಇಂದು ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆಗುತ್ತಿರುವುದು ಸಂತಸವಾಗಿದೆ. ಅವರು ಸಹ ಜನಪರ ಆಡಳಿತ ನೀಡಲಿ ಎಂದು ಶುಭಕೋರಿದರು.

ತಾಲೂಕು ಕುರುಬ ಸಂಘದ ಅಧ್ಯಕ್ಷರಾದ ಎಚ್.ಬಿ. ರಾಮಣ್ಣ ಮಾತನಾಡಿ, ೨೦೦೬ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಂದ ಸಿದ್ದರಾಮಯ್ಯನವರು ರಾಜ್ಯ ಸುತ್ತಿ ಪಕ್ಷ ಸಂಘಟನೆ ಮಾಡಿ ೨೦೧೩ ರಲ್ಲಿ ಹಾಗೂ ೨೦೨೩ ರಲ್ಲಿ ಕಾಂಗ್ರೆಸ್ ಪಕ್ಷ ಸ್ವತಂತ್ರವಾಗಿ ಸರ್ಕಾರ ತರಲು ಶ್ರಮಿಸಿದ್ದಾರೆ. ಈ ನಿಟ್ಟಿನಲ್ಲಿ ಸಿದ್ದರಾಮಯ್ಯಅವರನ್ನು ಮುಂದೆ ಗೌರವಯುತವಾಗಿ ನಡೆಸಿಕೊಂಡು ಉತ್ತಮ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿದರು.

ಸಂಘದ ನಿರ್ದೇಶಕ ಟಾಯ್ಸ್ ವೆಂಕಟೇಶ್, ಗ್ರಾಪಂ ಮಾಜಿ ಅಧ್ಯಕ್ಷ ನವಲೇಶ್, ತಾಲೂಕು ಕುರುಬ ಸಂಘದ ನಿರ್ದೇಶಕರಾದ ಮಾದೇಶ್, ಶಿವಬೀರಯ್ಯ, ಹುಚ್ಚಯ್ಯನದೊಡ್ಡಿ ಶಿವಣ್ಣ, ಉಮೇಶ್, ಶ್ರೀನಿವಾಸ್, ರೇವಣ್ಣ, ಅಮ್ಮಳ್ಳಿದೊಡ್ಡಿ ಶಿವಲಿಂಗಯ್ಯ, ಜಯಲಕ್ಷ್ಮಿ ಇತರರಿದ್ದರು.

ಪೊಟೋ೩೦ಸಿಪಿಟಿ೨:

ಚನ್ನಪಟ್ಟಣದಲ್ಲಿ ಕುರುಬರ ಸಂಘದ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮನೆ ಬಾಗಿಲಿಗೆ ಮಾವಿನ ಹಣ್ಣು ಯೋಜನೆಗೆ ಚಾಲನೆ
ಸಿಎಲ್ಪಿ ನಾಯಕನಾಗಿ ಡಿಕೆ ಒನ್‌ಲೈನ್‌ ನಿರ್ಣಯ