ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎಚ್.ಮಲ್ಲಿಕಾರ್ಜುನಯ್ಯ ಹಾಗೂ ಎಚ್.ನಾಗೇಶ್ ಮತ್ತು ರಾಜ್ಯ ಪರಿಷತ್ ಸ್ಥಾನಕ್ಕೆ ಬಿ.ಚಂದ್ರಶೇಖರ್ ಹಾಗೂ ಪುಟ್ಟಸ್ವಾಮಿಗೌಡ ಸ್ಪರ್ಧೆ ಮಾಡಿದ್ದರು.
33 ನಿರ್ದೆಶಕರ ಬಲದಲ್ಲಿ ನಡೆದ ಚುನಾವಣೆಯಲ್ಲಿ ಎಚ್.ಮಲ್ಲಿಕಾರ್ಜುನಯ್ಯ 17 ಮತ ಪಡೆದು ಅಧ್ಯಕ್ಷರಾದರು. 16 ಮತ ಪಡೆದ ಎಚ್.ನಾಗೇಶ್ ಪರಾಭವಗೊಂಡರು. ರಾಜ್ಯ ಪರಿಷತ್ ಸದಸ್ಯರಾಗಿ 17 ಮತ ಪಡೆದ ಬಿ.ಚಂದ್ರಶೇಖರ್ ಆಯ್ಕೆಯಾದರು. 16 ಮತ ಪಡೆದ ಪುಟ್ಟಸ್ವಾಮಿಗೌಡ ಸೋಲು ಕಂಡರು. ಖಜಾಂಚಿಯಾಗಿ ಶಿವಶಂಕರ್ ಅವಿರೋಧ ಆಯ್ಕೆಯಾಗಿದ್ದರು. ಒಂದು ಸ್ಥಾನ ಖಾಲಿ ಉಳಿದಿದೆ. ಚುನಾವಣಾಧಿಕಾರಿಯಾಗಿ ನಿವೃತ್ತ ಪ್ರಾಂಶುಪಾಲ ಜೆ.ಪಿ.ಪುಟ್ಟಸ್ವಾಮಿ ಕಾರ್ಯನಿರ್ವಹಿಸಿದರು.ನೂತನ ಅಧ್ಯಕ್ಷ ಮಲ್ಲಿಕಾರ್ಜುನಯ್ಯ ಮಾತನಾಡಿ, 2ನೇ ಬಾರಿಗೆ ಆಯ್ಕೆ ಮಾಡಿದ ನಿರ್ದೇಶಕರಿಗೆ ಹಾಗೂ ಸರ್ಕಾರಿ ನೌಕರರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಶಾಸಕರ ಸಹಕಾರದೊಂದಿಗೆ ಸಂಘವನ್ನು ಮಾದರಿಯಾಗಿ ಅಭಿವೃದ್ಧಿಪಡಿಸುವುದಾಗಿ ತಿಳಿಸಿದರು. ನೂತನ ಅಧ್ಯಕ್ಷರು ಹಾಗೂ ರಾಜ್ಯ ಪರಿಷತ್ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಮಂಡ್ಯ
ಬುದ್ಧ ಸಂದೇಶ ಸಾರುವ ಹಿನ್ನೆಲೆ ಭಾರತೀಯರ ನಡೆ, ಬುದ್ಧನ ಕಡೆ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲು ಸದರಿ ಪೂರ್ವಭಾವಿ ಸಭೆಯಲ್ಲಿ ನಿರ್ಣಯ ಮಾಡಿ, ಮಂಡ್ಯ ನಗರ ಅಂಬೇಡ್ಕರ್ ಪುತ್ಥಳಿಯಿಂದ ಹನಕೆರೆವರೆಗೆ ಪಾದಯಾತ್ರೆ ನಡೆಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಗೋಷ್ಠಿಯಲ್ಲಿ ವೆಂಕಟಗಿರಿಯಯ್ಯ, ಎಚ್.ಎನ್.ನರಸಿಂಹಮೂರ್ತಿ, ಅಮ್ಜದ್ ಪಾಷ, ಜೆ.ರಾಮಯ್ಯ, ಮೋಹನ್, ದೇವಯ್ಯ ಇತರರಿದ್ದರು.