ಎಚ್‌.ಕಲ್ಪನಹಳ್ಳಿಯಲ್ಲಿ ಮೆಗಾ ಡೇರಿ ಕಟ್ಟಡಕ್ಕೆ ಶೀಘ್ರ ಶಂಕು

KannadaprabhaNewsNetwork |  
Published : Sep 13, 2025, 02:04 AM IST
ಹೊನ್ನಾಳಿ ಫೋಟೋ 12ಎಚ್.ಎಲ್.ಐ2. ತಾಗಿಗನ  ಗೊಲ್ಲರಹಳ್ಳಿ ತರಳಬಾಳು ಸಮುದಾಯ ಭವನದಲ್ಲಿ ನಡೆದ ಶಿಮುಲ್ ಹಾಲು ಒಕ್ಕೂಟದ ವಿಭಾಗೀಯ ಮಟ್ಟದ ಸಭೆಯಲ್ಲಿ ಶಿಮುಲ್ ಅಧ್ಯಕ್ಷ ವಿದ್ಯಾಧರ ಮಾತನಾಡಿದರು.ಶಿಮುಲ್ ನ ನಿರ್ದೇಶಕರು, ಅಧಿಕಾರಿ ವರ್ಗದವರು ಹಾಜರಿದ್ದರು.  | Kannada Prabha

ಸಾರಾಂಶ

ದಾವಣಗೆರೆ ತಾಲೂಕು ಎಚ್.ಕಲ್ಪನಹಳ್ಳಿಯಲ್ಲಿ ಈ ಹಿಂದೆ 14 ಎಕರೆ ಜಮೀನು ಮಂಜೂರಾಗಿದ್ದು, ಅಲ್ಲಿ 5 ಲಕ್ಷ ಲೀಟರ್ ಸಾಮರ್ಥ್ಯದ ₹280 ಕೋಟಿ ವೆಚ್ಚದ ಮೆಗಾ ಡೇರಿಯ ನೂತನ ಕಟ್ಟಡಕ್ಕೆ ಶೀಘ್ರದಲ್ಲಿಯೇ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ಅಧ್ಯಕ್ಷ (ಶಿಮುಲ್) ವಿದ್ಯಾಧರ ಹೇಳಿದ್ದಾರೆ.

- ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು-ಕಾರ್ಯದರ್ಶಿಗಳ ಸಭೆಯಲ್ಲಿ ವಿದ್ಯಾಧರ

- - -

ಕನ್ನಡಪ್ರಭ ವಾರ್ತೆ ಹೊನ್ನಾಳಿ

ದಾವಣಗೆರೆ ತಾಲೂಕು ಎಚ್.ಕಲ್ಪನಹಳ್ಳಿಯಲ್ಲಿ ಈ ಹಿಂದೆ 14 ಎಕರೆ ಜಮೀನು ಮಂಜೂರಾಗಿದ್ದು, ಅಲ್ಲಿ 5 ಲಕ್ಷ ಲೀಟರ್ ಸಾಮರ್ಥ್ಯದ ₹280 ಕೋಟಿ ವೆಚ್ಚದ ಮೆಗಾ ಡೇರಿಯ ನೂತನ ಕಟ್ಟಡಕ್ಕೆ ಶೀಘ್ರದಲ್ಲಿಯೇ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ಅಧ್ಯಕ್ಷ (ಶಿಮುಲ್) ವಿದ್ಯಾಧರ ಹೇಳಿದರು.

ಶುಕ್ರವಾರ ತಾಲೂಕಿನ ಗೊಲ್ಲರಹಳ್ಳಿಯಲ್ಲಿ ತರಳಬಾಳು ಸಮುದಾಯ ಭವನದಲ್ಲಿ ಹೊನ್ನಾಳಿ, ನ್ಯಾಮತಿ ಮತ್ತು ಚನ್ನಗಿರಿ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ವಿಭಾಗೀಯ ಮಟ್ಟದ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸ್ತುತ ಅಗತ್ಯಕ್ಕಿಂತ ಹೆಚ್ಚು ಹಾಲು ಉತ್ಪಾದನೆ ಆಗುತ್ತಿದೆ. ಆದರೆ ಮಾರುಕಟ್ಟೆ ಸಮಸ್ಯೆ ಇದೆ. ಇತ್ತೀಚೆಗೆ 50ಕ್ಕೂ ಹೆಚ್ಚು ಪಾರ್ಲರ್‌ಗಳನ್ನು ತೆರೆಯಲಾಗಿದೆ. ಪ್ರತಿವರ್ಷ ₹35 ಕೋಟಿಯಷ್ಟು ಸಬ್ಸಿಡಿ ನೀಡಲಾಗುತ್ತಿದೆ ಎಂದರು.

ಶಿಮುಲ್ ಒಕ್ಕೂಟದ ನಿರ್ದೇಶಕ ಎಚ್.ಕೆ. ಬಸಪ್ಪ ಮಾತನಾಡಿ, ಮೆಗಾ ಡೈರಿ ನಿರ್ಮಾಣಕ್ಕೆ ₹280 ಕೋಟಿ ವೆಚ್ಚದ ಯೋಜನೆ ತಯಾರಿಸಲಾಗಿದೆ. ರಾಷ್ಟ್ರೀಯ ಹೈನು ಅಭಿವೃದ್ಧಿ ಮಂಡಳಿಯು ಟರ್ನ್ ಕೀ ಆಧಾರದ ಮೇಲೆ ಇದನ್ನು ನಿರ್ಮಿಸಲಾಗುವುದು. ಇದರಲ್ಲಿ ₹84 ಕೋಟಿಯಷ್ಟು ಹಣ ನಮ್ಮ ಒಕ್ಕೂಟದಿಂದ ಸ್ವಂತವಾಗಿ ಬಳಸುತ್ತಿದ್ದೇವೆ. ಉಳಿದ ₹196 ಕೋಟಿ ಅನುದಾನ ನಾವು ಎನ್‌ಡಿಡಿಬಿ ವತಿಯಿಂದ ಸಾಲ ಪಡೆಯುತ್ತಿದ್ದೇವೆ ಎಂದರು.

ಸಂಘದ ಕಾರ್ಯದರ್ಶಿ ಮತ್ತು ಆಡಳಿತ ಮಂಡಳಿ ಸದಸ್ಯರು ಉತ್ತಮವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಿಬ್ಬಂದಿಗೆ ಎ.ಎಂ.ಸಿ.ಎಸ್. ಸಾಫ್ಟ್‌ವೇರ್ ಬಗ್ಗೆ ತರಬೇತಿ ನೀಡಲಾಗುವುದು. ಒಕ್ಕೂಟ ಮಾರುಕಟ್ಟೆಯನ್ನು ವಿಸ್ತರಿಸಿ, ಮುಂದಿನ ದಿನಗಳಲ್ಲಿ ಹಾಲಿಗೆ ಯೋಗ್ಯವಾದ ದರ ನೀಡಲಾಗುವುದು. ಚನ್ನಗಿರಿ ತಾಲೂಕಿನಲ್ಲಿ ಯಾರಾದರೂ ಖಾಲಿ ನಿವೇಶನ ನೀಡಿದಲ್ಲಿ ಬಿ.ಎಂ.ಸಿ. ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದರು.

ಶಿಮುಲ್ ನಿರ್ದೇಶಕ ಬಿ.ಜಿ. ಬಸವರಾಜಪ್ಪ ಮಾತನಾಡಿ, ಸಭೆಯಲ್ಲಿ ಚರ್ಚೆಗೊಳಪಟ್ಟ ವಿಷಯಗಳನ್ನು, ಸಲಹೆ ಸೂಚನೆಗಳನ್ನು ಸ್ವೀಕರಿಸಿ ಸರಿಪಡಿಸಿಕೊಳ್ಳಲಾಗುವುದು. ಹೈನೋದ್ಯಮವು ರೈತರಿಗೆ ನಿರಂತರ ಮಾರುಕಟ್ಟೆ ನೀಡುವ ಕ್ಷೇತ್ರವಾಗಿದೆ. ಆದ್ದರಿಂದ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದರು.

ಶಿಮುಲ್ ವ್ಯವಸ್ಥಾಪಕ ನಿರ್ದೇಶಕ ಎಸ್.ಜಿ. ಶೇಖರ್ ಮಾತನಾಡಿ, ಹೊನ್ನಾಳಿ, ಚನ್ನಗಿರಿ ಮತ್ತು ನ್ಯಾಮತಿ ತಾಲೂಕುಗಳಿಂದ ಒಟ್ಟು 35682 ಸದಸ್ಯರಿದ್ದು, ಅವರ ಪೈಕಿ 16915 ಸದಸ್ಯರು ಹಾಲು ಹಾಕುತ್ತಿದ್ದಾರೆ ಎಂದರು.

ಹಾಲಿನ ಶೇಖರಣೆ, ಗುಣಮಟ್ಟದ ಬಗ್ಗೆ ಮಾಹಿತಿ ನೀಡಿದ ಅವರು, ಹಾಲು ಉತ್ಪಾದಕರ ಕಲ್ಯಾಣ ಟ್ರಸ್ಟ್‌ನಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಸಮಾರಂಭದಲ್ಲಿ ಶಿಮುಲ್ ಮಾಜಿ ಅಧ್ಯಕ್ಷ ಜಗದೀಶಪ್ಪ ಬಣಕಾರ್, ಚೇತನ್ ಎಸ್. ನಾಡಿಗೇರ್ ಮಾತನಾಡಿದರು.

ಶಿಮುಲ್ ವಿಸ್ತರಣಾಧಿಕಾರಿ ಚನ್ನಗಿರಿಯ ಕೆ.ಕರಿಯಮ್ಮ ಸ್ವಾಗತಿಸಿದರು. ಉಪ ವ್ಯವಸ್ಥಾಪಕ ಡಾ. ಸಂಜಯ್ ನಿರೂಪಿಸಿದರು. ಗುಂಡಪ್ಪ ಯರಗಟ್ಟಿ ವಂದನೆ ಸಲ್ಲಿಸಿದರು. ಸಮಾರಂಭದಲ್ಲಿ ಹೊನ್ನಾಳಿ, ನ್ಯಾಮತಿ ಹಾಗೂ ಚನ್ನಗಿರಿಯ ಹಾಲು ಒಕ್ಕೂಟದ ಸಾವಿರಾರು ಸದಸ್ಯರು ಭಾಗವಹಿಸಿದ್ದರು.

- - -

-12ಎಚ್.ಎಲ್.ಐ2.ಜೆಪಿಜಿ:

ಸಭೆಯಲ್ಲಿ ಶಿಮುಲ್ ಅಧ್ಯಕ್ಷ ವಿದ್ಯಾಧರ ಮಾತನಾಡಿದರು. ನಿರ್ದೇಶಕರು, ಅಧಿಕಾರಿಗಳು, ಒಕ್ಕೂಟದ ಸದಸ್ಯರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಶಂಕರಪ್ಪ ಕರ್ನಾಟಕ ರತ್ನಕ್ಕೆ ಅರ್ಹ : ಶ್ರೀ
ಮೈಸೂರು ಹೀಲಿಯಂ ಸಿಲಿಂಡರ್‌ ಸ್ಫೋಟ : ಎನ್‌ಐಎ ಭೇಟಿ