ಧಾರವಾಡದಲ್ಲಿ ಹಲಗಿ ಹಬ್ಬಕ್ಕೆ ಚಾಲನೆ

KannadaprabhaNewsNetwork |  
Published : Mar 02, 2026, 02:30 AM IST
1ಡಿಡಬ್ಲೂಡಿ8ಧಾರವಾಡದ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿರುವ ಹಲಗಿ ಹಬ್ಬದ ಅಂಗವಾಗಿ ಹೊಸಯಲ್ಲಾಪುರದ ಶ್ರೀ ವೀರಭದ್ರೇಶ್ವರ ದೇವಸ್ಥಾನದಿಂದ ಭವ್ಯ ಮೆರವಣಿಗೆಯೊಂದಿಗೆ ಚಾಲನೆ ದೊರೆಯಿತು. | Kannada Prabha

ಸಾರಾಂಶ

ಧಾರವಾಡದ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿರುವ ಹಲಗಿ ಹಬ್ಬದ ಅಂಗವಾಗಿ ಹೊಸಯಲ್ಲಾಪುರದ ಶ್ರೀ ವೀರಭದ್ರೇಶ್ವರ ದೇವಸ್ಥಾನದಿಂದ ಭವ್ಯ ಮೆರವಣಿಗೆಯೊಂದಿಗೆ ಚಾಲನೆ ದೊರೆಯಿತು.

ಧಾರವಾಡ: ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿರುವ ಹಲಗಿ ಹಬ್ಬದ ಅಂಗವಾಗಿ ಹೊಸಯಲ್ಲಾಪುರದ ಶ್ರೀ ವೀರಭದ್ರೇಶ್ವರ ದೇವಸ್ಥಾನದಿಂದ ಭವ್ಯ ಮೆರವಣಿಗೆಯೊಂದಿಗೆ ಚಾಲನೆ ದೊರೆಯಿತು.

ದೇವಸ್ಥಾನ ಆವರಣದಲ್ಲಿ ವಿಶೇಷ ಪೂಜೆ, ಮಹಾಮಂಗಳಾರತಿ ನೆರವೇರಿದ ನಂತರ ಹಲಗಿ ನಾದಗಳ ಘೋಷದಲ್ಲಿ ಉತ್ಸವಕ್ಕೆ ಅಧಿಕೃತವಾಗಿ ಚಾಲನೆ ದೊರೆಯಿತು. ಕಳೆದ ಸತತ 14 ವರ್ಷಗಳಿಂದ ಸಂಭ್ರಮದಿಂದ ಆಚರಿಸಿಕೊಂಡು ಬರುತ್ತಿರುವ ಹಲಗಿ ಉತ್ಸವ ಧಾರವಾಡದ ಜನಪದ ಪರಂಪರೆ, ಭಕ್ತಿ ಹಾಗೂ ಸಾಂಸ್ಕೃತಿಕ ವೈಭವವನ್ನು ಪ್ರತಿಬಿಂಬಿಸುತ್ತದೆ. ಹೊಸಯಲ್ಲಾಪುರದ ಹಿರೇಮಠ ಸ್ವಾಮೀಜಿಗಳು ಆಶೀರ್ವಚನ ನೀಡುವ ಮೂಲಕ ಉತ್ಸವಕ್ಕೆ ಶುಭಾರಂಭ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು, ಸಂಸ್ಕೃತಿ ಉಳಿದರೆ ಸಮಾಜ ಉಳಿಯುತ್ತದೆ. ಯುವಜನತೆ ಇಂತಹ ಹಬ್ಬಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಹು–ಧಾ ಮಹಾನಗರ ಪಾಲಿಕೆ ಮೇಯರ್‌ ಜ್ಯೋತಿ ಪಾಟೀಲ ಮಾತನಾಡಿ, ಹಲಗಿ ಹಬ್ಬವು ಧಾರವಾಡದ ಗುರುತು. ಇಂತಹ ಉತ್ಸವಗಳು ಸಹೋದರತ್ವ ಮತ್ತು ಏಕತೆ ಬಲಪಡಿಸುತ್ತವೆ ಎಂದರು.ಮಾಜಿ ಶಾಸಕರಾದ ಅಮೃತ ದೇಸಾಯಿ ಉತ್ಸವ ಸಮಿತಿಯ ಕಾರ್ಯಚಟುವಟಿಕೆಯನ್ನು ಪ್ರಶಂಸಿಸಿ, 14 ವರ್ಷಗಳ ನಿರಂತರ ಆಚರಣೆ ಶ್ಲಾಘನೀಯ ಎಂದರು. ಮಾಜಿ ಮೇಯರ್‌ ಈರೇಶ ಅಂಚಟಗೇರಿ ಹಾಗೂ ಸೀಮಾ ಮಸೂತಿ ಮಾತನಾಡಿದರು.

ಹಲಗಿ ಕಲಾವಿದರು ತಮ್ಮ ಸಂಪ್ರದಾಯಬದ್ಧ ವೇಷಭೂಷಣಗಳಲ್ಲಿ ಮನಮೋಹಕ ಪ್ರದರ್ಶನ ನೀಡಿ ಜನರನ್ನು ರಂಜಿಸಿದರು. ಮೆರವಣಿಗೆಯು ನಗರದ ಪ್ರಮುಖ ರಸ್ತೆಗಳಲ್ಲಿ ಸಾಗುತ್ತ ಸಂಭ್ರಮದ ವಾತಾವರಣ ಸೃಷ್ಟಿಸಿತು. ಮಹಿಳೆಯರು, ಯುವಕರು ಹಾಗೂ ಮಕ್ಕಳೂ ಉತ್ಸಾಹದಿಂದ ಭಾಗವಹಿಸಿ ಹಬ್ಬಕ್ಕೆ ಇನ್ನಷ್ಟು ಕಳೆ ತಂದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಶಂಕರ ಶೆಳಕೆ, ಶಂಭು ಸಾಲಿಮನಿ, ಗಣೇಶ ಮೊದೊಳ, ರಾಖೇಶ್ ನಾಝರೆ, ಶಕ್ತಿ ಹಿರೇಮಠ, ರಾಜೇಶ್ವರಿ ಸಾಲಗಟ್ಟಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಡೋಟ ಬೇಡವೆಂದು ಸಿಎಂ ಬಳಿಗೆ ಸರ್ವ ಪಕ್ಷಗಳ ನಿಯೋಗ
ಕೊಟ್ಟೂರು ಕೆರೆ ತುಂಬಿಸುವ ಯೋಜನೆಗೆ ಸಿಗುತ್ತಾ ಹಸಿರು ನಿಶಾನೆ?