ಹಲಗೂರು: ಪೊಲೀಸ್‌ ಭದ್ರತೆಯಲ್ಲಿ ಒತ್ತುವರಿ ರಸ್ತೆ ತೆರವು

KannadaprabhaNewsNetwork |  
Published : Mar 25, 2026, 01:45 AM IST
24ಕೆಎಂಎನ್ ಡಿ15 | Kannada Prabha

ಸಾರಾಂಶ

ಹಲಗೂರು ಸಮೀಪದ ಬಾಣಗಹಳ್ಳಿಯ ಸರ್ವೇ ನಂ.44ರಲ್ಲಿ ಖಾಸಗಿಯವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ ಸರ್ಕಾರಿ ಜಾಗ ಮತ್ತು ರಸ್ತೆಯನ್ನು ಕಂದಾಯ ಇಲಾಖೆ ಅಧಿಕಾರಿಗಳು ಮಂಗಳವಾರ ಪೊಲೀಸ್ ಬಿಗಿ ಭದ್ರತೆಯಲ್ಲಿ ತೆರವು ಗೊಳಿಸಿದರು.

ಕನ್ನಡಪ್ರಭ ವಾರ್ತೆ ಹಲಗೂರು

ಸಮೀಪದ ಬಾಣಗಹಳ್ಳಿಯ ಸರ್ವೇ ನಂ.44ರಲ್ಲಿ ಖಾಸಗಿಯವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ ಸರ್ಕಾರಿ ಜಾಗ ಮತ್ತು ರಸ್ತೆಯನ್ನು ಕಂದಾಯ ಇಲಾಖೆ ಅಧಿಕಾರಿಗಳು ಮಂಗಳವಾರ ಪೊಲೀಸ್ ಬಿಗಿ ಭದ್ರತೆಯಲ್ಲಿ ತೆರವು ಗೊಳಿಸಿದರು.

ಗ್ರಾಮದ ಸಾರ್ವಜನಿಕ ರಸ್ತೆಯನ್ನು ಕೆಲವು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡು ನೆರೆಹೊರೆ ಜಮೀನುಗಳಿಗೆ ಹೋಗಲು, ಕೃಷಿ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗುತ್ತಿದೆ. ರೈತರು, ಸಾರ್ವಜನಿಕರು ಮತ್ತು ವಾಹನಗಳ ಸುಗಮ ಸಂಚಾರಕ್ಕಾಗಿ ಅನುಕೂಲವಾಗಲು ರಸ್ತೆ ಒತ್ತುವರಿ ತೆರವಿಗಾಗಿ ಅಪ್ಪಾಜಯ್ಯನದೊಡ್ಡಿ ಗ್ರಾಮದ ರಾಜೇಶ್ ಮಳವಳ್ಳಿ ತಹಸೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಿದ್ದರು.

ಈ ಸಂಬಂಧ ಉನ್ನತ ಅಧಿಕಾರಿಗಳ ಆದೇಶದ ಮೇರೆಗೆ ಕಸಬಾ 2 ನೇ ವೃತ್ತದ ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ರವಿಕುಮಾರ್, ಶಿವಕುಮಾರ್ ಮತ್ತು ಸಿಬ್ಬಂದಿ ನೇತೃತ್ವದಲ್ಲಿ ತಾಲೂಕು ಸರ್ವೇಯರ್ ಎಂ.ಎಸ್.ಬೀರೇಶ್ ಸ್ಥಳಕ್ಕೆ ಆಗಮಿಸಿ ಸಂಬಂಧಿಸಿದ ರಸ್ತೆ ಜಾಗವನ್ನು ಗುರುತಿಸಿದರು. ಆಗ ಸ್ಥಳದಲ್ಲಿ ಸೇರಿದ್ದ ನೂರಾರು ರೈತರು ನಿರ್ದಿಷ್ಟ ಪಡಿಸಿದ ಒತ್ತುವರಿ ತೆರವು ಮಾಡಲು ಅಡ್ಡಿಪಡಿಸಿದರು.

ಸಮಸ್ಯೆ ಅರಿತು ರಸ್ತೆ ತೆರವು ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಎಸ್.ವಿ.ಲೋಕೇಶ್ ಅವರಲ್ಲಿ ರಸ್ತೆಯನ್ನು ಆರಂಭದಿಂದ ಅಂತ್ಯದ ವರೆಗೂ ತೆರವು ಮಾಡಬೇಕೆಂದು ರೈತರು ಮನವಿ ಮಾಡಿಕೊಂಡರು. ಮನವಿಗೆ ಸ್ಪಂದಿಸಿದ ತಹಸೀಲ್ದಾರ್ ಈ ದಿನವೇ ಸಂಪೂರ್ಣ ರಸ್ತೆ ತೆರವುಗೊಳಿಸುವಂತೆ ಸರ್ವೇಯರ್ ಅವರಿಗೆ ಸೂಚನೆ ನೀಡಿದರು.

ತಹಸೀಲ್ದಾರ್ ಎಸ್.ವಿ.ಲೋಕೇಶ್ ಮಾತನಾಡಿ, ಮೂರು ಗ್ರಾಮಗಳ ಸಂಪರ್ಕ ರಸ್ತೆಯಾಗಿರುವ ಕಾಲು ದಾರಿಯ ತೆರವು ವಿಚಾರದಲ್ಲಿ ಎರಡು ಗುಂಪುಗಳನ್ನು ಮನವೊಲಿಸಿ ಸುಮಾರು 1.7 ಕಿ.ಮೀ ದೂರದ ರಸ್ತೆಯನ್ನು ತೆರವು ಗೊಳಿಸಲು ಸೂಚನೆ ನೀಡಿದ್ದಾರೆ. ಸಂಜೆವರೆಗೂ ತೆರವು ಕಾರ್ಯಾಚರಣೆ ನಡೆಯಲಿದೆ. ಇದರಿಂದ ನೂರಾರು ರೈತರಿಗೆ ಅನುಕೂಲವಾಗಲಿದೆ ಎಂದರು.

ನಂತರ ಹಲಗೂರು ಪೊಲೀಸ್ ಠಾಣೆ ಪಿಎಸ್ಐ ಲೋಕೇಶ ಮತ್ತು ಸಿಬ್ಬಂದಿ ಬಿಗಿ ಭದ್ರತೆಯಲ್ಲಿ ಸದರಿ ಕಾಲು ದಾರಿಯನ್ನು ಜೆ.ಸಿ.ಬಿ ಯಂತ್ರದಿಂದ ತೆರವು ಗೊಳಿಸಿ ರೈತರ ಜಮೀನುಗಳಿಗೆ ಸಂಚರಿಸಲು ಅನುವು ಮಾಡಿಕೊಡಲಾಯಿತು.

ಈ ವೇಳೆ ಕಸಬಾ 3 ನೇ ವೃತ್ತದ ರಾಜಸ್ವ ನಿರೀಕ್ಷಕ ಶಿವಕುಮಾರ್ ಗ್ರಾಮ ಲೆಕ್ಕಿಗ ಶಿವಶಂಕರ್, ಎಎಸ್ಐ ಸಿದ್ದರಾಜು ಶಿವಣ್ಣ, ಗ್ರಾಮ ಸಹಾಯಕ ಆನಂದ, ಅರ್ಜಿದಾರ ರಾಜೇಶ್, ಗ್ರಾಮಸ್ಥರಾದ ಮಾದೇಶ, ರೇವಣ್ಣ, ಶಂಕರೇಗೌಡ, ಕುಮಾರಸ್ವಾಮಿ ಪೊಲೀಸ್ ಸಿಬ್ಬಂದಿ ಸೇರಿದಂತೆ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇವರ ಅಪಹಾಸ್ಯಕ್ಕೆ ಕ್ಷಮೆ ಕೇಳುವೆ: ರಣವೀರ್‌
ಎಲ್ಲ ಗ್ರಾಮ ಪಂಚಾಯಿತಿಗಳನ್ನು ಕ್ಷಯರೋಗ ಮುಕ್ತಗೊಳಿಸಲು ಶ್ರಮಿಸಿ: ಜಿಪಂ ಸಿಇಒ ಮೋನಾ ರೋತ್