ವಚನಗಳ ಜನರಿಗೆ ತಲುಪಿಸುವಲ್ಲಿ ಹಳಕಟ್ಟಿ ಸ್ಮರಣೀಯ: ಎಂಬಿಪಾ

KannadaprabhaNewsNetwork |  
Published : Apr 18, 2026, 03:45 AM IST
m b patil | Kannada Prabha

ಸಾರಾಂಶ

ಕನ್ನಡ ಮುದ್ರಣಾಲಯಗಳ ಇತಿಹಾಸ ಸಂಶೋಧನಾ ಕೇಂದ್ರ ಹೊರತಂದಿರುವ ‘ವಚನ ಪಿತಾಮಹ ಎಂದೇ ಪ್ರಖ್ಯಾತರಾದ ಡಾ.ಫ.ಗು.ಹಳಕಟ್ಟಿ’ ಅವರ ಕುರಿತ ‘ಮುದ್ರಣ ಗುಮ್ಮಟ’ ಕೃತಿಯನ್ನು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಲೋಕಾರ್ಪಣೆ ಮಾಡಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಕನ್ನಡದ ಅಮೂಲ್ಯ ಸಾಹಿತ್ಯ ಪರಂಪರೆಯಲ್ಲಿ ವಚನಗಳಿಗೆ ಅಗ್ರಸ್ಥಾನವಿದೆ. ತಾಳೆಗರಿ ಹಾಗೂ ಹಸ್ತಪ್ರತಿಗಳಲ್ಲಿ ಉಳಿದಿದ್ದ ವಚನಗಳನ್ನು ಸಂಗ್ರಹಿಸಿ, ಮುದ್ರಿಸಿ, ಅನುದಾದಿಸಿ ಕನ್ನಡಿಗರಿಗೆ ಮಾತ್ರವಲ್ಲದೆ ಅನ್ಯಭಾಷಿಕರಿಗೂ ಸಮರ್ಪಕವಾಗಿ ತಲುಪಿಸುವಲ್ಲಿ ಡಾ.ಫ.ಗು.ಹಳಕಟ್ಟಿ ಅವರ ಸೇವೆ ಸ್ಮರಣೀಯ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ತಿಳಿಸಿದರು. ಕನ್ನಡ ಮುದ್ರಣಾಲಯಗಳ ಇತಿಹಾಸ ಸಂಶೋಧನಾ ಕೇಂದ್ರ ಹೊರತಂದಿರುವ ‘ವಚನ ಪಿತಾಮಹ ಎಂದೇ ಪ್ರಖ್ಯಾತರಾದ ಡಾ.ಫ.ಗು.ಹಳಕಟ್ಟಿ’ ಅವರ ಕುರಿತ ‘ಮುದ್ರಣ ಗುಮ್ಮಟ’ ಕೃತಿಯನ್ನು ಶುಕ್ರವಾರ ನಗರದ ತಮ್ಮ ನಿವಾಸದಲ್ಲಿ ಲೋಕಾರ್ಪಣೆ ಮಾಡಿ ಸಚಿವರು ಮಾತನಾಡಿದರು.

ವಚನಗಳನ್ನು ಕೇವಲ ಸಂಗ್ರಹಿಸುವುದಲ್ಲದೆ, ಅವುಗಳನ್ನು ಅಚ್ಚುಕಟ್ಟಾಗಿ ಮುದ್ರಿಸಿ ಜನಸಾಮಾನ್ಯರಿಗೆ ತಲುಪಿಸಲು ಹಳಕಟ್ಟಿಯವರು ತಮ್ಮ ಮನೆಯನ್ನೇ ಮಾರಾಟ ಮಾಡಿ ಮುದ್ರಣ ಯಂತ್ರವನ್ನು ಖರೀದಿಸಿದ್ದರು. ಈ ಮೂಲಕ ಬಸವನಾಡಿನಲ್ಲಿ ಮುದ್ರಣ ಯಂತ್ರಗಳನ್ನು ಪರಿಚಯಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಹಳಕಟ್ಟಿಯವರ ಅಪೂರ್ವ ತ್ಯಾಗ ಮತ್ತು ಸಾಹಿತ್ಯ ಸೇವೆಯನ್ನು ಈ ಕೃತಿಯಲ್ಲಿ ಸಮಗ್ರವಾಗಿ ದಾಖಲಿಸಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ಕೃತಿಯನ್ನು ಹೊರತಂದ ಸ್ಪ್ಯಾನ್ ಪ್ರಿಂಟರ್ಸ್‌ನ ಎಂ.ಕೃಷ್ಣಮೂರ್ತಿ ಅವರನ್ನು ಸಚಿವರು ಅಭಿನಂದಿಸಿದರು.

ಈ ವೇಳೆ ಅಖಿಲ ಭಾರತ ಮುದ್ರಣಕಾರರ ಒಕ್ಕೂಟದ ಮಾಜಿ ಅಧ್ಯಕ್ಷ ಸಿ.ಆರ್.ಜನಾರ್ಧನ್, ಕರ್ನಾಟಕ ರಾಜ್ಯ ಮುದ್ರಣಕಾರರ ಸಂಘದ ಅಧ್ಯಕ್ಷ ಬಿ.ಆರ್.ಅಶೋಕ್ ಕುಮಾರ್, ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಕಾರ್ಯದರ್ಶಿ ಎಚ್.ಎಂ.ರೇಣುಕಾ ಪ್ರಸನ್ನ, ಕನ್ನಡಪರ ಹೋರಾಟಗಾರ ಪಾಲನೇತ್ರ, ಕರ್ನಾಟಕ ಇತಿಹಾಸ ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಕೆ.ಎಲ್.ರಾಜಶೇಖರ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಸಿಲಿನಿಂದ ಪಾರಾಗಲು ಪೌರಕಾರ್ಮಿಕರಿಗೆ ಕೂಲಿಂಗ್ ಕಿಟ್
ಕುಡಿದು ಟೆಸ್ಟ್‌ ಡ್ರೈವ್‌ ಕಾರು ಚಲಾಯಿಸಿ ವಾಹನಗಳಿಗೆ ಗುದ್ದಿಸಿದ್ದವನಿಗೆ ಗೂಸಾ