ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಜಿಲ್ಲಾಡಳಿತದ ವತಿಯಿಂದ ನಗರದ ಬಾಲಿಕಾ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಡಾ.ಫ.ಗು.ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.
ಫ.ಗು.ಹಳಕಟ್ಟಿಯವರು ಕೇವಲ ವಚನ ಸಾಹಿತ್ಯವಲ್ಲದೆ ರಾಜಕೀಯ, ಪತ್ರಿಕೋದ್ಯಮದಂತಹ ವಿವಿಧ ಕ್ಷೇತ್ರಗಳಲ್ಲಿ ತಮ್ಮದೆ ಆದ ಛಾಪು ಮೂಡಿಸಿದ್ದಾರೆ. ಮೂಲ ಕಸುಬು ನೇಕಾರಿಕೆಯಾದರೂ ಉತ್ತಮ ಶಿಕ್ಷಣ ಪಡೆದುಕೊಳ್ಳುವುದರ ಮೂಲಕ ವಕೀಲ ವೃತ್ತಿ ಅಲಂಕರಿಸಿದ್ದರು. ಸಾಹಿತ್ಯದ ಮೇಲಿನ ಹೆಚ್ಚಿನ ಒಲವು ಅವರನ್ನು ವಚನಕಾರರನ್ನಾಗಿ ಮಾಡಿತು ಎಂದು ಹೇಳಿದರು.ಸುಮಾರು 250ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆಯುವುದರ ಜೊತೆಗೆ ವಚನ ಸಾಹಿತ್ಯಕ್ಕೆ ಮತ್ತಷ್ಟು ಶಕ್ತಿ ತುಂಬಿದವರು, ತಮ್ಮ ಸಾಹಿತ್ಯ ಮೂಲಕ ಸಮಾಜದ ಒರೆ ಕೊರೆಗಳನ್ನು ತಿದ್ದಿ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಿದ್ದಾರೆ. ದೂರದೃಷ್ಟಿ ವ್ಯಕ್ತಿತ್ವದ ಹಳಕಟ್ಟಿಯವರ ಸಾಹಿತ್ಯ ಮತ್ತು ಪತ್ರಿಕೋದ್ಯಮದ ಜೊತೆಗೆ ಸಂಘಟನೆ ಬ್ಯಾಂಕಿಂಗ್, ಕೃಷಿ, ನೇಕಾರಿಕೆ ಹೀಗೆ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಸಹಕಾರಿ ಸಂಘಗಳನ್ನು ಸ್ಥಾಪಿಸಿ ಸಮಾಜಾಭಿವೃದ್ಧಿ ಕಾರ್ಯಗಳಿಗೆ ದುಡಿದ ಅಪರೂಪದ ವ್ಯಕ್ತಿಯಾಗಿದ್ದಾರೆ ಎಂದರು.
ಹಿರಿಯ ಕನ್ನಡ ಉಪನ್ಯಾಸಕ ಎಚ್.ಎಸ್.ಸತ್ಯನಾರಾಯಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಸಿ.ರಮೇಶ್ ಉಪಸ್ಥಿತರಿದ್ದರು.