ಹರಪನಹಳ್ಳಿ: ಪಟ್ಟಣದ ವಾಲ್ಮೀಕಿ ನಗರದಲ್ಲಿ ಸದ್ಗುರು ಶಿವಯೋಗಿ ಹಾಲಸ್ವಾಮಿ ಮುಳ್ಳು ಗದ್ದಿಗೆ ಉತ್ಸವ ಶನಿವಾರ ರಾತ್ರಿ ಅದ್ಧೂರಿ ಜರುಗಿತು.
ಭಕ್ತರ ಸಮ್ಮುಖದಲ್ಲಿ ಮುಳ್ಳಿನ ಗದ್ದಿಗೆಯ ಮೇಲೆ ಹಾರಿ, ಹಾರಿ ಕುಣಿದು ಭಕ್ತರಲ್ಲಿ ಉತ್ಸಾಹ ತುಂಬಿದರು. ನಂತರ ವಾಲ್ಮೀಕಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿ ಪುನಃ ಮಠ ತಲುಪಿದರು.
ಅಪಾರ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ಹಾಲೇಶ ದೋರೆಯೆ, ನಿನಗಾರು ಸರಿಯೇ ಬಹುಪರಾಕ್ ಎಂಬ ಘೋಷವಾಕ್ಯ ಹರ್ಷೋದ್ಗಾರ ಮುಗಿಲುಮುಟ್ಟಿತು. ಉತ್ಸವದಲ್ಲಿ ಸಕಲ ವಾದ್ಯಗಳು, ಕೋಲಾಟ ಕುಣಿತ ಉತ್ಸವಕ್ಕೆ ಮೆರಗು ನೀಡಿದವು.ಈ ಸಂದರ್ಭದಲ್ಲಿ ವಾಲ್ಮೀಕಿ ನಾಯಕ ಸಮಾಜದ ಅದ್ಯಕ್ಷ ಹಾಗೂ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ. ಅಣ್ಣಪ್ಪ, ಪುರಸಭಾ ಮಾಜಿ ಅಧ್ಯಕ್ಷ ಎಚ್.ಕೆ.ಹಾಲೇಶ, ಎಇಇ ವೈ.ವಸಂತಕುಮಾರ್, ಗಿಡ್ಡಳಿ ನಾಗರಾಜ್, ಮಂಡಕ್ಕಿ ಸುರೇಶ್, ವಿ.ರಮೇಶ್, ಪರಸಪ್ಪ, ವೆಂಕಟೇಶ ದ್ಯಾಮಜ್ಜಿ ದಂಡೆಪ್ಪ, ಪಿ.ಪರಶುರಾಮ, ಆರ್.ವಾಗೀಶ್ ಕೆ.ಮಹಾಬಲೇಶ್ವರ, ಮ್ಯಾಕಿ ಸಣ್ಣ ಹಾಲಪ್ಪ, ಕಮ್ಮಾರ ಅಂಜಿನಪ್ಪ, ತಿಮ್ಮಣ್ಣ, ಮ್ಯಾಕಿ ದುರುಗಪ್ಪ, ಸೇರಿದಂತೆ ಅಪಾರ ಭಕ್ತರು ಇದ್ದರು.