ಹಳೆಯಂಗಡಿ ಪಿಸಿಎ ಬ್ಯಾಂಕ್ ಅಧ್ಯಕ್ಷ ಎಸ್.ಎಸ್. ಸತೀಶ್ ಭಟ್

KannadaprabhaNewsNetwork |  
Published : Feb 12, 2025, 12:33 AM IST
ಹಳೆಯಂಗಡಿ ಪಿಸಿಎ ಬ್ಯಾಂಕ್ ಅಧ್ಯಕ್ಷರಾಗಿ ಎಸ್.ಎಸ್. ಸತೀಶ್ ಭಟ್ ಆಯ್ಕೆ  | Kannada Prabha

ಸಾರಾಂಶ

ಹಳೆಯಂಗಡಿ ಪಿಸಿಎ ಬ್ಯಾಂಕ್ ನ 2025 29 ನೇ ಸಾಲಿನ ಅಧ್ಯಕ್ಷರಾಗಿ ಎಸ್.ಎಸ್. ಸತೀಶ್ ಭಟ್ ಹಾಗೂ ಉಪಾಧ್ಯಕ್ಷರಾಗಿ ಮೀರಾ ಬಾಯಿ ಕೆ. ಸತತ ಮೂರನೇ ಬಾರಿಗೆ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಮೂಲ್ಕಿ

ಹಳೆಯಂಗಡಿ ಪಿಸಿಎ ಬ್ಯಾಂಕ್ ನ 2025- 29 ನೇ ಸಾಲಿನ ಅಧ್ಯಕ್ಷರಾಗಿ ಎಸ್.ಎಸ್. ಸತೀಶ್ ಭಟ್ ಹಾಗೂ ಉಪಾಧ್ಯಕ್ಷರಾಗಿ ಮೀರಾ ಬಾಯಿ ಕೆ. ಸತತ ಮೂರನೇ ಬಾರಿಗೆ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಹಳೆಯಂಗಡಿಯ ಪಿಸಿಎ ಬ್ಯಾಂಕ್ ಸಭಾಭವನದಲ್ಲಿ ನಡೆದ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಯಲ್ಲಿ ಚುನಾವಣಾಧಿಕಾರಿಯಾಗಿ ಮಂಗಳೂರು ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ನಾಗೇಂದ್ರ ಬಿ. ಸಹಕರಿಸಿದರು. ಸಂಘದ ನೂತನ ನಿರ್ದೇಶಕರಾಗಿ ವಿನೋದ್ ಕುಮಾರ್ ಬೊಳ್ಳೂರು, ಎಚ್ ವಸಂತ್ ಬೆರ್ನಾಡ್, ಧರ್ಮಾನಂದ ಶೆಟ್ಟಿಗಾರ್, ಅಶೋಕ್ ಬಂಗೇರ, ಸೇಸಪ್ಪ ಟಿ ಸಾಲ್ಯಾನ್, ಸಂಧ್ಯಾ, ಮುಖೇಶ್ ಸುವರ್ಣ, ಶಿವರಾಮ, ರೋಶನಬಿ, ಧನಂಜಯ ಹಾಗೂ ಆರ್ಥಿಕ ಬ್ಯಾಂಕಿನ ಪ್ರತಿನಿಧಿಯಾಗಿ ಕಿರಣ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ಈ ಸಂದರ್ಭ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಿಮಕರ್, ಜೊತೆ ಕಾರ್ಯದರ್ಶಿ ಶ್ರೀಕಾಂತಿ ಚುನಾವಣಾ ಪ್ರಕ್ರಿಯೆಗೆ ಸಹಕರಿಸಿದರು.

ನೂತನ ಅಧ್ಯಕ್ಷ ಸತೀಶ್ ಭಟ್ ಮಾತನಾಡಿ, ಸಂಘವು ಈಗಾಗಲೇ ಒಂದು ಕೋಟಿ ರು. ಲಾಭದಲ್ಲಿದ್ದು ಮುಂದಿನ ಐದು ವರ್ಷಗಳಲ್ಲಿ 2 ಕೋಟಿ ರು. ಲಾಭದ ಜೊತೆಗೆ ಸಂಘದ ಅಭಿವೃದ್ಧಿಗೆ ಪ್ರಾಧಾನ್ಯತೆ ನೀಡಲಾಗುವುದು ಎಂದರು.

ಪಡುಪಣಂಬೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮೋಹನ್ ದಾಸ್, ಬಿಜೆಪಿ ನಾಯಕರಾದ ಹಿಮಕರ್ ಕದಿಕೆ, ಮನೋಜ್ ಕುಮಾರ್ ಕೆಲಸಿ ಬೆಟ್ಟು, ಯೋಗೇಶ್ ಪಾವಂಜೆ,ಸಾವಿತ್ರಿ ಗೋಪಾಲ್, ರೇಣುಕಾ ಸಂಜಯ್, ಹರಿಪ್ರಸಾದ್, ಸುರೇಶ್ ಅಂಬಡೆಗುರಿ, ಅಬ್ದುಲ್ ರಜಾಕ್ ಮತ್ತಿತರರು ಉಪಸ್ಥಿತರಿದ್ದು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು .

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಸ್ಲಿಮರು ಸೂರ್‍ಯನಮಸ್ಕಾರ ಮಾಡ್ಬೇಕು : ಹೊಸಬಾಳೆ ಕರೆ
ರೈಲ್ವೆ ಬಡ್ತಿ ಪರೀಕ್ಷೆ ಕನ್ನಡದಲ್ಲೂ ನಡೆಸಲು ಸೋಮಣ್ಣ ತಾಕೀತು