ಹಾವೇರಿ: ನಮ್ಮ ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಸುಮಾರು ಅರ್ಧದಷ್ಟು ಅಂದರೆ ಮೂರು ಕೋಟಿ ಜನರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಾಲುದಾರರಾಗಿದ್ದಾರೆ ಎಂದು ಜಿಲ್ಲಾ ಯೋಜನಾ ನಿರ್ದೇಶಕ ಶಿವರಾಯ ಪ್ರಭು ಹೇಳಿದರು.
ಪ್ರಾದೇಶಿಕ ಕಚೇರಿಯ ಲೆಕ್ಕ ಪರಿಶೋಧಕ ಯೋಜನಾಧಿಕಾರಿ ರಾಘವೇಂದ್ರ ಮಾತನಾಡಿ, ಸ್ವಸಹಾಯ ಸಂಘಗಳಿಂದ ಪಡೆದ ಸಾಲ ಮರುಪಾವತಿ, ಪಾರದರ್ಶಕ ವ್ಯವಹಾರ ಪದ್ಧತಿ ಪ್ರತಿಯೊಬ್ಬರೂ ತಿಳಿದಿರಬೇಕು. ಸಂಘದ ಲಾಭ ಎಲ್ಲ ಸದಸ್ಯರಿಗೂ ದೊರೆಯುವುದು ಎಂದರು.
ಸಾಹಿತಿ ಹನುಮಂತಗೌಡ ಗೊಲ್ಲರ ಮಾತನಾಡಿ, ಮಹಿಳೆಯರ ಆರ್ಥಿಕ ಸಬಲೀಕರಣ ಈ ಯೋಜನೆಯಿಂದ ಸಾಧ್ಯ. ಧರ್ಮಸ್ಥಳ ಸಂಸ್ಥೆ ಒಂದು ವರದಾನವಾಗಿದೆ. ಧರ್ಮಸ್ಥಳ ಡಾ. ವೀರೇಂದ್ರ ಹೆಗ್ಗಡೆ ಅವರ ಸಮಾಜಮುಖಿ ಕಾರ್ಯಕ್ರಮಗಳು ಅನುಕರಣೀಯ ಎಂದರು.ನಗರಸಭಾ ಸದಸ್ಯೆ ಚೆನ್ನಮ್ಮ ಬ್ಯಾಡಗಿ ಮಾತನಾಡಿ, ಸಮಾಜದ ಉನ್ನತಿ-ಅವನತಿ ಮಹಿಳೆಯರನ್ನು ಅವಲಂಬಿಸಿದೆ ಎಂದರು. ಮೂಕಾಂಬಿಕಾ, ಮಲ್ಲಿಗೆ, ಮುರ್ಡೇಶ್ವರ, ಗಣಪತಿ ಹಾಗೂ ರೋಶನಿ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಿಸಲಾಯಿತು. ಒಕ್ಕೂಟದ ಶಾಂತಮ್ಮ, ಪ್ಯಾರಿ ಜಾನ್ ಹಾಗೂ ಯೋಜನಾಧಿಕಾರಿ ನಾರಾಯಣ ಇದ್ದರು.
ಮೇಲ್ವಿಚಾರಕಿ ಜಯಶ್ರೀ ಸ್ವಾಗತಿಸಿದರು. ಮೇಲ್ವಿಚಾರಕಿ ಗೀತಾ ಕಾರ್ಯಕ್ರಮ ನಿರೂಪಿಸಿದರು. ಪುಷ್ಪ ವಂದಿಸಿದರು.