ಹಾಸನ ಡಿಸಿಗೆ ಏಕವಚನದಲ್ಲಿ ಮಾತಾನಾಡಿದ್ದ ಎಚ್.ಡಿ. ರೇವಣ್ಣ
ಹಾಸನ ಜಿಲ್ಲಾಧಿಕಾರಿ ಕೆ. ಲತಾ ಕುಮಾರಿ ಅವರ ಬಗ್ಗೆ ಹೊಳೆನಸೀಪುರ ಶಾಸಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಏಕವಚನದಲ್ಲಿ ಮಾತನಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಡಿಸಿ ಬಗ್ಗೆ ರೇವಣ್ಣ ಅವರು ಏಕವಚನದಲ್ಲಿ ಮಾತನಾಡಿರುವುದು ಮತ್ತು ಧಮುಕಿ ಹಾಕುವ ರೀತಿಯಲ್ಲಿ ಮಾತನಾಡಿರುವುದು ಅಕ್ಯಮ್ಯ ಅಪರಾಧವಾಗಿದ್ದು, ಕೂಡಲೆ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ಕ್ಷಮೆಯಾಚಿಸಬೇಕು ಎಂದು ರಾಜ್ಯ ಹಳ್ಳಿ ಮಕ್ಕಳ ಸಂಘದ ರಾಜ್ಯ ಉಪಾಧ್ಯಕ್ಷ ಆಗ್ರಹ ವೆಂಕಟರೋಣಪ್ಪ ಆಗ್ರಹಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪುಜಾಪ್ರಭುತ್ವದಲ್ಲಿ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸೇರಿದಂತೆ ಪತ್ರಿಕಾ ರಂಗ ಅತ್ಯಂತ ಮಹತ್ವದ ಜವಾಬ್ದಾರಿಗಳನ್ನು ಕರ್ತವ್ಯಗಳನ್ನು ನಿರ್ವಹಿಸುತ್ತವೆ. ಸಂವಿಧಾನಾತ್ಮಕವಾದಂತ ಈ ನಾಲ್ಕು ಸ್ತಂಭಗಳ ಮೇಲೆ ಪ್ರಜಾಪ್ರಭುತ್ವ ಸ್ಥಾಪನೆಯಾಗಿ ಸಂವಿಧಾನದ ಆಶಯಗಳು ಸಾಕಾರಗೊಳ್ಳುತ್ತವೆ. ಸರ್ವಾಧಿಕಾರ ಮತ್ತು ರಾಜ್ಯ ಪ್ರಭುತ್ವ ನಮ್ಮ ದೇಶದಲ್ಲಿ ಇಲ್ಲ ಎಂದರು.ಇತ್ತೀಚೆಗೆ ಶಾಸಕರು ಅಧಿಕಾರಿಗಳನ್ನು ಸಾರ್ವಜನಿಕವಾಗಿ ಹೀಯಾಳಿಸಿ ಮಾತನಾಡುವ ಪ್ರವೃತ್ತಿಯನ್ನು ಪುದರ್ಶಿಸುತ್ತಿದ್ದಾರೆ. ಸರ್ಕಾರದ ಯೋಜನೆಗಳನ್ನು ಜಾರಿಗೆ ತರುವ ಸಭೆಗಳಲ್ಲಿ ಸರ್ಕಾರಿ ನೌಕರರನ್ನು ಅತ್ಯಂತ ಕೀಳು ಮಟ್ಟದಲ್ಲಿ ನೋಡುವ ದೃಶ್ಯಗಳನ್ನು ನಾವು ಸಾಮಾಜಿಕ ಜಾಲತಾಣಗಳಲ್ಲಿ ದಿನನಿತ್ಯ ನೋಡುತ್ತಿದ್ದೇವೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಗೌರವ ತರುವಂತದ್ದು ಅಲ್ಲ. ಕೆಲವು ಕಡೆ ಅಧಿಕಾರಿಗಳನ್ನು ತಮ್ಮ ಹಿತಾಸಕ್ತಿಗೆ ತಕ್ಕಂತೆ ಬಳಸಿಕೊಳ್ಳುತ್ತಾ ಅಧಿಕಾರಿಗಳು ಮತ್ತು ಸರ್ಕಾರಿ ನೌಕರರು ತಾವು ಹೇಳಿದಂತೆ ನಡೆಸಿಕೊಳ್ಳುವ ಶಾಸಕರಿಗೂ ಬರವಿಲ್ಲ.
ಕೂಡಲೇ ಜಿಲ್ಲಾಧಿಕಾರಿ ಲತಾಕುಮಾರಿಯವರನ್ನು ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.