ಕನ್ನಡಪ್ರಭ ವಾರ್ತೆ ಹೊಸಪೇಟೆ
ವಿಜಯನಗರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ವತಿಯಿಂದ ಹಂಪಿ ಉತ್ಸವದ ಪ್ರಯುಕ್ತ ವಿಜಯ ವಿಠಲ ದೇವಾಲಯ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಾಮೂಹಿಕ ಯೋಗಾಸನದಲ್ಲಿ ಮಾತನಾಡಿದರು.
ಹಂಪಿ ಉತ್ಸವದಲ್ಲಿ ಇದೇ ಮೊದಲ ಬಾರಿಗೆ ಯೋಗವನ್ನು ಪರಿಚಯಿಸುವ ಮೂಲಕ ನಡೆಸಿದ ಮೊದಲ ಯೋಗಾಭ್ಯಾಸದಲ್ಲಿ ಪತಂಜಲಿ ಯೋಗ ಪೀಠದ ಯೋಗಗುರು ಭವರ್ ಲಾಲ್ ಆರ್ಯ ಜೊತೆಗೆ ಯೋಗಾಭ್ಯಾಸಕ್ಕೆ ಮಾರ್ಗದರ್ಶನ ನೀಡಿದ ಅವರು ಯೋಗಾಭ್ಯಾಸದ ಜೊತೆ ಯೋಗದ ಮಹತ್ವ, ಯೋಗ ಮಾಡುವ ವಿಧಾನ ಸೇರಿದಂತೆ ಅದರಿಂದ ಆಗುವ ಪ್ರಯೋಜನಗಳ ಕುರಿತು ಮಾಹಿತಿಯೊಂದಿಗೆ ಅಭ್ಯಾಸ ಮಾಡಿಸಿದರು. ಪತಂಜಲಿ ಪರಿವಾರ ದೇಶ ವಿದೇಶಗಳಲ್ಲಿ ಯೋಗವನ್ನು ಉಚಿತವಾಗಿ ತರಬೇತಿಗೊಳಿಸುವ ಮೂಲಕ ಸೇವೆ ಮಾಡುತ್ತಿದೆ ಎಂದರು.ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ ಮಾತನಾಡಿ, ಕಠಿಣವಾದದನ್ನು ಮಾಡುವುದು, ಮನಸ್ಸು ಹಾಗೂ ದೇಹ ನಿಗ್ರಹಿಸಲು ಮಾಡುವ ದಂಡನೆ ಯೋಗವಾಗಿದೆ. ಯೋಗ ನಮ್ಮ ಜೀವನದ ಭಾಗ ಹಾಗೂ ನಿತ್ಯಕ್ರಿಯೆಯಾಗಬೇಕು ಎಂದರು.