ಕನ್ನಡಪ್ರಭ ವಾರ್ತೆ ಮೈಸೂರು
ಜೆಎಸ್ಎಸ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ವಿಶ್ವ ಕೈ ನೈರ್ಮಲ್ಯ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಸೋಂಕು ಅಥವಾ ಕೀಟಾಣುಗಳು ನಮ್ಮದೇಹವನ್ನು ಪ್ರವೇಶಿಸುವುದು ಕೈಗಳ ಮೂಲಕ ಆದ್ದರಿಂದಲೇ ಕೈಗಳ ಸ್ವಚ್ಛತೆಗೆ ಪ್ರಧಾನ ಆದ್ಯತೆ ನೀಡಬೇಕು ಎಂದರು. ವೈದ್ಯರು ರೋಗಿಯನ್ನು ಮುಟ್ಟುವ ಮುನ್ನ ಮತ್ತು ನಂತರ ಕೈಗಳನ್ನು ಸ್ವಚ್ಛಗೊಳಿಸಿಕೊಳ್ಳಬೇಕು, ಇದರಿಂದ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಕಡಿಮೆ ಈ ಅಭ್ಯಾಸವನ್ನು ಎಲ್ಲ ಆರೋಗ್ಯ ಕಾರ್ಯಕರ್ತರು ಕಡ್ಡಾಯವಾಗಿ ರೂಢಿಸಿಕೊಳ್ಳಬೇಕು ಮತ್ತು ಇದರ ಬಗ್ಗೆ ಜಾಗೃತಿ ಮತ್ತು ಅರಿವು ಬಹಳ ಮುಖ್ಯ ಎಂದು ಅಭಿಪ್ರಾಯಪಟ್ಟರು.ಜೆಎಸ್ಎಸ್ ಆಸ್ಪತ್ರೆಯ ಉಪ ನಿರ್ದೇಶಕಿ ಡಾ. ಸುಮನ ಮಾತನಾಡಿ, ರೋಗ ಹರಡುವುದನ್ನು ತಡೆಗಟ್ಟಲು ಮತ್ತು ನಿಯಂತ್ರಿಸಲು ಕೈಗಳನ್ನು ಸ್ವಚ್ಛಗೊಳಿಸಕೊಳ್ಳಬೇಕು, ಆಸ್ಪತ್ರೆಯಲ್ಲಿ ನರ್ಸ್ಗಳ ಪಾತ್ರ ಬಹಳ ಪ್ರಮುಖವಾದದ್ದು, ಅವರು ವಾರ್ಡ್ಗೆ ಪ್ರವೇಶಿಸುವ ವೈದ್ಯರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕೈನೈರ್ಮಲ್ಯ ಬಗ್ಗೆ ಜಾಗೃತಿ ಮೂಡಿಸಬೇಕು ಮತ್ತು ಕಡ್ಡಾಯವಾಗಿ ಕೈ ತೊಳೆಯಲು ಹೇಳಬೇಕು ಎಂದರು, ಹಾಗೂ ಕೈ ನೈರ್ಮಲ್ಯ ಬಗ್ಗೆ ಅವರು, ಸ್ವರಚಿತ ಹಾಡಿನ ಮೂಲಕ ಕೈ ತೊಳೆಯುವ ವಿಧಾನವನ್ನು ತಿಳಿಸಿದರು.
ನಮ್ಮಿಂದ ಇನ್ನೋಬ್ಬರಿಗೆ ತೊಂದರೆ ಆಗಬಾರದು ಹಾಗೂ ಸೋಂಕು ಇರುವ ವ್ಯಕ್ತಿಯನ್ನು ಮುಟ್ಟಿ ಆ ಸೋಂಕು ನಮ್ಮ ಕೈಗಳಿಂದ ಮತ್ತೊಬ್ಬರಿಗೆ ಹರಡಿ ಅವರ ಪ್ರಾಣಕ್ಕೆ ಕುತ್ತಾಗಬಹುದು ಎಂದರು.
ಆಸ್ಪತ್ರೆಯ ಸೋಂಕು ನಿಯಂತ್ರಣ ಸಮಿತಿಯ ಕಾರ್ಯದರ್ಶಿಗಳಾದ ಡಾ. ಕೆ.ಬಿ. ಚೇತಕ್, ನರ್ಸಿಂಗ್ ಸೇವೆಗಳ ಮುಖ್ಯಸ್ಥೆ ಜಾನೆಟ್ ಮಥಿಯಾಸ್ ಇದ್ದರು.