ಚೆಂಬು ಗ್ರಾಮದ ಫಲಾನುಭವಿ ಕುಟುಂಬಕ್ಕೆ ನಿಧಿ ಹಸ್ತಾಂತರ

KannadaprabhaNewsNetwork |  
Published : Feb 10, 2025, 01:46 AM IST
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಂಪಾಜೆ ವಲಯ ಚೆಂಬು ಗ್ರಾಮದ ಫಲಾನುಭವಿ ಇಪ್ಪತೈದು ಸಾವಿರ ರೂಪಾಯಿಗಳ ನಿಧಿ ಹಸ್ತಾಂತರ  ಮಾಡಲಾಯಿತು. | Kannada Prabha

ಸಾರಾಂಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಂಪಾಜೆ ವಲಯ ಚೆಂಬು ಗ್ರಾಮದ ಫಲಾನುಭವಿ ಕುಟುಂಬಕ್ಕೆ ನಿಧಿಯನ್ನು ಹಸ್ತಾಂತರ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಂಪಾಜೆ ವಲಯ ಚೆಂಬು ಗ್ರಾಮದ ಫಲಾನುಭವಿ ಕುಟುಂಬಕ್ಕೆ ನಿಧಿಯನ್ನು ಹಸ್ತಾಂತರ ಮಾಡಲಾಯಿತು.

ಮಡಿಕೇರಿ ತಾಲೂಕು ಚೆಂಬು ಗ್ರಾಮದ ಉಂಬಳೆ ಭಾಸ್ಕರ ಮತ್ತು ಜಯಂತಿ ದಂಪತಿಗಳ ಮನೆಯು ಇತ್ತೀಚೆಗೆ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ.) ಟ್ರಸ್ಟ್ ವತಿಯಿಂದ ಪರಿಹಾರ ಧನವಾಗಿ ದೊರಕಿದ 25,000 ರು. ಹಸ್ತಾಂತರವನ್ನು ಯೋಜನಾಧಿಕಾರಿಗಳಾದ ಪುರುಷೋತ್ತಮ ನಿರ್ವಹಿಸಿದರು.

ಈ ಸಂದರ್ಭ ವಲಯ ಮೇಲ್ವಿಚಾರಕರಾದ ಸಂತೋಷ್, ಸೇವಾ ಪ್ರತಿನಿಧಿ ಚಿದಾನಂದ, ಎಂ.ಚೆಂಬು ಒಕ್ಕೂಟದ ನಿಕಟ ಪೂರ್ವ ಕಾರ್ಯದರ್ಶಿ ವಿಜಯಕುಮಾರ್, ಎಂ.ಟಿ.ರಾಮಮೂರ್ತಿ ಅವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!