ಜವಾಬ್ದಾರಿ ಸಮರ್ಥವಾಗಿ ನಿರ್ವಹಿಸಿ

KannadaprabhaNewsNetwork |  
Published : Sep 20, 2024, 01:39 AM IST
(ಪೊಟೋ 19ಬಿಕೆಟಿ3, ಕೀರ್ತಿ ಕುಲಕರ್ಣಿ ಅವರನ್ನು ಕಾರ್ಯಕ್ರದಲ್ಲಿ ಪ್ರಾಚಾರ್ಯ ಶ್ರೀನಿವಾಸ ನರಗುಂದ ಸತ್ಕರಿಸಿದರು.) | Kannada Prabha

ಸಾರಾಂಶ

ಸ್ನಾತಕೋತ್ತರ ಶಿಕ್ಷಣ ಪೂರೈಸಿದ ನಂತರ ಸಮಾಜದಲ್ಲಿ ಜವಾಬ್ದಾರಿ ಹೆಚ್ಚಾಗಲಿದ್ದು, ಅದನ್ನು ಸಮರ್ಥವಾಗಿ ನಿರ್ವಹಿಸಬೇಕು ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಕೀರ್ತಿ ಕುಲಕರ್ಣಿ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಸ್ನಾತಕೋತ್ತರ ಶಿಕ್ಷಣ ಪೂರೈಸಿದ ನಂತರ ಸಮಾಜದಲ್ಲಿ ಜವಾಬ್ದಾರಿ ಹೆಚ್ಚಾಗಲಿದ್ದು, ಅದನ್ನು ಸಮರ್ಥವಾಗಿ ನಿರ್ವಹಿಸಬೇಕು ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಕೀರ್ತಿ ಕುಲಕರ್ಣಿ ಹೇಳಿದರು.

ಇಲ್ಲಿನ ವಿದ್ಯಾ ಪ್ರಸಾರಕ ಮಂಡಳದ ಎಸ್.ಆರ್.ನರಸಾಪೂರ ಕಲಾ ಮತ್ತು ಎಂ.ಬಿ.ಶಿರೂರ ವಾಣಿಜ್ಯ ಮಹಾವಿದ್ಯಾಲಯದ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರ ಸ್ನಾತಕೋತ್ತರ ವಿಭಾಗವು ಎಂಎ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಬೀಳ್ಕೊಡುವ ಸಮಾರಂಭದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕೃತಿ ಹಾಗೂ ಸಂಸ್ಕಾರವನ್ನು ಬೆಳೆಸಿಕೊಂಡಾಗ ಭವಿಷ್ಯತ್ತಿನಲ್ಲಿ ಉತ್ತಮ ಜೀವನ ನಡೆಸಲು ಸಾಧ್ಯ. ರಾಮಾಯಣ ಹಾಗೂ ಮಹಾಭಾರತ ಉತ್ತಮ ಜೀವನ ಸಾಗಿಸಲು ದಾರಿದೀಪ. ಅವು ಹಲವು ಜೀವನ ಮೌಲ್ಯಗಳನ್ನು ತಿಳಿಸಿಕೊಡುತ್ತವೆ ಎಂದರು.

ಅಧ್ಯಕ್ಷತೆ ವಹಿಸಿ ಪ್ರಾಚಾರ್ಯ ಶ್ರೀನಿವಾಸ ನರಗುಂದ ಮಾತನಾಡಿದರು. ಸುಮಾ ಹಾಗೂ ಅನಿತಾ ಪ್ರಾರ್ಥಿಸಿದರು. ಶ್ರುತಿ ನಾಯಕ ಸ್ವಾಗತಿಸಿದರು. ಅನಿತಾ ದಡ್ಡಿ ಪರಿಚಯಿಸಿದರು. ಆಸ್ಮಾ ಕಂದಗಲ್ ಹಾಗೂ ಚಂದ್ರಶೇಖರ ಹಿರ್ಲವರ ಅನಿಸಿಕೆ ಹೇಳಿದರು. ನಾಗರಾಜ ಮಲ್ಲಣ್ಣವರ ವಂದಿಸಿದರು. ಕಾವೇರಿ ಬಡಿಗೇರ ನಿರೂಪಿಸಿದರು. ಸಂಯೋಜಕ ಎಸ್.ವೈ.ಬೊಮ್ಮಣ್ಣವರ, ವಿದ್ಯಾರ್ಥಿ ಪ್ರತಿನಿಧಿ ಮೀನಾಕ್ಷಿ ಮನಗೂಳಿ, ಉಪನ್ಯಾಸಕರಾದ ಎಂ.ಡಿ.ಕೋರವಾರ, ಎಂ.ಕೆ. ಗುಡೂರ, ಕೆ.ಎಸ್. ದಾಸರ, ಎಸ್.ಎಸ್. ಕುಲಕರ್ಣಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!