ಕೈಮಗ್ಗ, ನೇಕಾರರು ದೇಶದ ಅಸ್ತಿತ್ವ: ಸಿಇಒ ಗಿಟ್ಟೆ

KannadaprabhaNewsNetwork |  
Published : Aug 08, 2025, 01:01 AM IST
ಕ್ಯಾಪ್ಷನ7ಕೆಡಿವಿಜಿ31 ದಾವಣಗೆರೆಯಲ್ಲಿ 11 ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಕಾರ್ಯಕ್ರಮವನ್ನು ಜಿಪಂ ಸಿಇಒ ಗಿಟ್ಟೆ ಮಾಧವ ವಿಠಲ್ ರಾವ್ ಉದ್ಘಾಟಿಸಿದರು. .......ಕ್ಯಾಪ್ಷನ7ಕೆಡಿವಿಜಿ32 ದಾವಣಗೆರೆಯಲ್ಲಿ  ಜಿಪಂ ಸಿಇಒ ಗಿಟ್ಟೆ ಮಾಧವ ವಿಠಲ್ ರಾವ್ ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಮಂಜೂರಾದ ಸಾಲ ಮಂಜೂರಾತಿ ಪತ್ರ ವಿತರಿಸಿದರು. | Kannada Prabha

ಸಾರಾಂಶ

ನೇಕಾರರು ನೂಲುವ, ಚರಕ ಸುತ್ತುವವರು ಹಾಗೂ ಕೈಮಗ್ಗ ಈ ದೇಶದ ಅಸ್ತಿತ್ವ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿಟ್ಟೆ ಮಾಧವ ವಿಠಲ ರಾವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

- 11ನೇ ರಾಷ್ಟ್ರೀಯ ಕೈಮಗ್ಗ ದಿನ ಕಾರ್ಯಕ್ರಮ । 120 ವರ್ಷಗಳ ಶ್ರೀಮಂತ ಪರಂಪರೆ ಹೊಂದಿರುವ ಕೈಮಗ್ಗ ವಲಯ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ನೇಕಾರರು ನೂಲುವ, ಚರಕ ಸುತ್ತುವವರು ಹಾಗೂ ಕೈಮಗ್ಗ ಈ ದೇಶದ ಅಸ್ತಿತ್ವ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿಟ್ಟೆ ಮಾಧವ ವಿಠಲ ರಾವ್ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ತುಂಗಭದ್ರಾ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ನೇಕಾರರ ಕೇಂದ್ರ ಸಹಯೋಗದಲ್ಲಿ ಆಯೋಜಿಸಲಾಗಿದ್ದ 11ನೇ ರಾಷ್ಟ್ರೀಯ ಕೈಮಗ್ಗ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸ್ವತಂತ್ರ ಪೂರ್ವದಲ್ಲಿ ವಿದೇಶಿ ಉತ್ಪನ್ನಗಳ ಹಾವಳಿ, ದುಪ್ಪಟ್ಟು ದರ ಉಪಟಳ ಹೆಚ್ಚಾಯಿತು. ಇವುಗಳನ್ನು ಬಹಿಷ್ಕರಿಸಿ ಭಾರತೀಯ ಸ್ಥಳೀಯ, ಕೈಮಗ್ಗ ಉತ್ಪನ್ನಗಳನ್ನು ಉತ್ತೇಜಿಸಲು ಗಾಂಧೀಜಿಯವರು 1905 ಆ.7ರಂದು ಸ್ವದೇಶಿ ಚಳವಳಿ ಆರಂಭಿಸಿದರು. ಈ ದಿನದ ನೆನಪಿಗಾಗಿ ಪ್ರತಿವರ್ಷ ಆ.7ರಂದು ಭಾರತದಲ್ಲಿ ರಾಷ್ಟ್ರೀಯ ಕೈಮಗ್ಗ ದಿನ ಆಚರಿಸಲಾಗುತ್ತದೆ ಎಂದರು.

ಕೈಮಗ್ಗ ವಲಯವು 120 ವರ್ಷಗಳ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಹೊಂದಿದೆ. ಈ ದಿನಾಚರಣೆಯ ಮೂಲಕ ಭಾರತೀಯ ಕೈಮಗ್ಗ ಉತ್ಪನ್ನಗಳ ಬಳಕೆಯನ್ನು ಪ್ರೋತ್ಸಾಹಿಸುವುದರೊಂದಿಗೆ, ಕೈಮಗ್ಗದ ಮಹತ್ವ ಮತ್ತು ಅದರ ಆರ್ಥಿಕ ಕೊಡುಗೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ದೇಶದಲ್ಲಿ ಇನ್ನೂ ನೇಕಾರರು ಸಂಖ್ಯೆ ಹೆಚ್ಚಾಗಿ ಅವರ ಕೌಶಲ್ಯತೆಗೆ ಅನುಗುಣವಾಗಿ ಗುಣಮಟ್ಟದ ಸ್ವದೇಶಿ ಉತ್ಪನ್ನಗಳಾದ ಮೈಸೂರು ಸಿಲ್ಕ್, ಬನಾರಸ್, ಧೋತಿ, ಪಂಚೆ, ಲುಂಗಿ, ಬೆಡ್ ಶೀಟ್, ಟವೆಲ್, ಕರವಸ್ತ್ರ, ಲುಂಗಿ ಹಾಗೂ ಹತ್ತಿಬಟ್ಟೆ ಸೇರಿದಂತೆ ಇನ್ನಿತರೆ ಉತ್ಪನ್ನಗಳನ್ನು ಕಲಾತ್ಮಕವಾಗಿ ತಯಾರಿಸಿ ತಮ್ಮ ಸ್ವದೇಶಿ ಉತ್ಪನ್ನಗಳನ್ನು ಸಂರಕ್ಷಿಸಬೇಕು ಎಂದರು.

ರಾಜ್ಯದ ಜನತೆ ಸ್ವದೇಶಿ ಉತ್ಪನ್ನ ತಯಾರಿಕೆ, ಕಲೆ, ಕೌಶಲ್ಯಗಳಿಂದ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡು ರಾಜ್ಯ, ದೇಶದ ಅಸ್ತಿತ್ವ ಉಳಿಸಲಾಗುತ್ತಿದೆ. ಇಂದು ಜಿಲ್ಲೆಯ 4 ನೇಕಾರರಿಗೆ ರಾಷ್ಟ್ರಮಟ್ಟದಲ್ಲಿ ಸನ್ಮಾನಿಸಲಾಗುತ್ತಿದೆ. ಅದಕ್ಕಾಗಿ ಕೈಮಗ್ಗ ವಲಯದ ಸಮಗ್ರ ಅಭಿವೃದ್ಧಿಗೆ ಮತ್ತು ನೇಕಾರರಿಗೆ ಸಂಬಂಧಪಟ್ಟ ಇಲಾಖೆ ಮತ್ತು ಬ್ಯಾಂಕ್‌ಗಳಲ್ಲಿ ಹೆಚ್ಚಿನ ಸಹಾಯಧನ ಒದಗಿಸಿ ಆರ್ಥಿಕ, ಸಾಮಾಜಿಕವಾಗಿ ಸಬಲೀಕರಣಗೊಳಿಸಿ ಭವಿಷ್ಯ ಉಜ್ವಲಗೊಳಿಸಬೇಕಾಗಿದೆ. ನೇಕಾರರು ಸಹ ಇಲಾಖೆಯಲ್ಲಿನ ಯೋಜನೆಗಳ ಸದುಪಯೋಗ ಪಡೆದು ಉದ್ದಿಮೆಗಳನ್ನು ಸ್ಥಾಪಿಸಿ ತಮ್ಮ ಕಲೆ, ಕೌಶಲ್ಯಗಳ ಮೂಲಕ ಸಮಾಜದ ಮುನ್ನೆಲೆಗೆ ಬರಬೇಕು. ಇದರಿಂದ ದೇಶದಲ್ಲಿ ನೇಕಾರರಿಗೆ, ನೂಲುವ ಮತ್ತು ಚರಕ ಕೈಮಗ್ಗ ಸಮುದಾಯದ ಕುಟುಂಬಗಳಿಗೆ ಆರ್ಥಿಕ, ಸಾಮಾಜಿಕ ಭದ್ರತೆ ಜೊತೆಗೆ ಸ್ಥಳೀಯವಾಗಿ ಉದ್ಯೋಗ ಅವಕಾಶಗಳು ದೊರೆಯಲಿವೆ ಎಂದರು.

ದಾವಣಗೆರೆ ಜಿಲ್ಲೆಯಲ್ಲಿ ಉತ್ಪಾದಿಸುವ ಕೈಮಗ್ಗ ಉತ್ಪನ್ನಗಳಾದ ಬೆಡ್ ಶೀಟ್, ಟವೆಲ್, ಕರವಸ್ತ್ರ, ಲುಂಗಿ ಹಾಗೂ ಹತ್ತಿಬಟ್ಟೆ ಉತ್ಪಾದನೆಯ ಕೌಶಲ್ಯ ಮತ್ತು ಕುಸುರಿ ಕಾರ್ಯಕ್ಕೆ ದೇಶ ವಿದೇಶಗಳಲ್ಲಿ ಕೊಂಡಾಡುವಂತಗಾಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಮಾತನಾಡಿ, ಇಲಾಖೆ ವ್ಯಾಪ್ತಿಯಲ್ಲಿನ ಯೋಜನೆಗಳು, ಸಾಲ ಮತ್ತು ಸಹಾಯಧನವನ್ನು ಫಲಾನುಭವಿಗಳಿಗೆ ವಿಳಂಬ ಮಾಡದೇ ತ್ವರಿತವಾಗಿ ಮಂಜೂರು ಮಾಡಬೇಕು. ನೇಕಾರರ ಸಮುದಾಯನ್ನು ಮುನ್ನೆಗೆಲೆ ತರಲು ಹೆಚ್ಚಿನ ಸಹಾಯಾಸ್ತ ನೀಡಿ ಆರ್ಥಿಕವಾಗಿ ಸದೃಢರನ್ನಾಗಿಸಬೇಕು. ಈ ಹಿಂದೆ ಸ್ವದೇಶಿ ಉತ್ಪನ್ನ ಬೇಕೆಂಬಂತೆ ಇಂದು ಊಟೋಪಚಾರದಿಂದ ತೊಡುವ ಬಟ್ಟೆಯವರೆಗೂ ಮೂಲತಃ ಸ್ವದೇಶಿ ಉತ್ಪನ್ನಗಳಿಗೆ ಮಾರುಹೋಗುತ್ತಿದ್ದಾರೆ. ಹಾಗಾಗಿ, ನೇಕಾರರು ತಮ್ಮ ಕೆಲಸವನ್ನು ಶ್ರದ್ಧೆ ಮತ್ತು ಜವಾಬ್ದಾರಿಯುತವಾಗಿ ನಿಭಾಯಿಸದಲ್ಲಿ ಯಶಸ್ಸು ಖಂಡಿತಾ ಸಿಗಲಿದೆ. ವಿಶೇಷವಾಗಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಎಂದು ಮನವಿ ಮಾಡಿದರು.

ಶಿವಕುಮಾರ್ ಎನ್. ಕುಂಬಾರ ಮಾತನಾಡಿ, ರಾಜ್ಯದಲ್ಲಿ ಇತ್ತೀಚಿನ 4ನೇ ಕೈಮಗ್ಗ ಜನಗಣತಿಯ ಪ್ರಕಾರ 27,175 ಕೈಮಗ್ಗ ಮತ್ತು 27,616 ಮಗ್ಗ ಪೂರ್ವ ಕೈಮಗ್ಗ ನೇಯ್ಗೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅದರಂತೆ ಜಿಲ್ಲೆಯಲ್ಲಿ 215 ಕೈಮಗ್ಗ, 110 ಮಗ್ಗ ಪೂರ್ವ ಕೈಮಗ್ಗ ನೇಯ್ಗೆ ಚಟುಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಮಾಹಿತಿ ನೀಡಿದರು.

ಪ್ರಸ್ತುತ ನೂಲುವ, ಕೈಮಗ್ಗ, ಚರಕ ಸುತ್ತುವವರು ಸಿಗುವುದು ಕಷ್ಟ. ಸಿಗುವಂತಹವರಿಗೆ ತರಬೇತಿ ನೀಡಿ ಉದ್ದಿಮೆಗಳ ಸಹಾಯ ಯೋಜನೆಗಳಾದ ನೇಕಾರ ಸಮ್ಮಾನ್ ಯೋಜನೆ, ವಿಶೇಷ ಪ್ಯಾಕೇಜ್ ಯೋಜನೆ, ವಿದ್ಯುತ್ ಮಗ್ಗ ಯೋಜನೆ ಹೀಗೆ ವಿವಿಧ ಯೋಜನೆಗಳಡಿ ಉದ್ದಿಮೆ ಸ್ಥಾಪನೆಗೆ ಶೇ. 90ರಷ್ಟು ಸಬ್ಸಿಡಿ ನೀಡಲಾಗುವುದು. ಉದ್ದಿಮೆಗಳಲ್ಲಿ ತೊಡಗಿಸಿಕೊಳ್ಳುವವರು ಕೂಲಿ ಎಂದು ಪರಿಗಣಿಸದೇ ಉದ್ದಿಮೆಯಾಗಿ ಪ್ರಾರಂಭಿಸಿದಾಗ ಪ್ರತಿಯೊಬ್ಬರೂ ಯಶಸ್ವಿಯಾಗುವುದರ ಜತೆಗೆ ಮುಂದಿನ ಪೀಳಿಗೆಗೆ ಪರಿಚಯಿಸಬೇಕಿದೆ ಎಂದರು.

ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ಮಂಜೂರಾದ ಸಾಲ ಮಂಜೂರಾತಿ ಪತ್ರ ಸಾಂಕೇತಿಕವಾಗಿ ವಿತರಿಸಲಾಯಿತು. ನೇಕಾರ ಸೇವಾ ಕೇಂದ್ರದ ಉಪನಿರ್ದೇಶಕ ಪ್ರಭಾಕರ್, ರಾಷ್ಟ್ರೀಯ ಕೈಗಾರಿಕಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಯುಗೇಂದ್ರ ದ್ವಿತಿ, ಕೇಂದ್ರ ರೇಷ್ಮೆ ಮಂಡಳಿ ಸಹಾಯಕ ಕಾರ್ಯದರ್ಶಿ ಹೇಮಾಶ್ರೀ, ನೇಕಾರ ಸಮಾಜ ಮುಖಂಡ ಶ್ರೀಕಾಂತ್ ಸೇರಿದಂತೆ ನೇಕಾರ ಸಮಾಜದ ಬಂಧುಗಳು, ಫಲಾನುಭವಿಗಳು ಸೇರಿದಂತೆ ಜವಳಿ ಮತ್ತು ಕೈಮಗ್ಗ ಇಲಾಖೆ ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳು ಇದ್ದರು.

- - -

-7ಕೆಡಿವಿಜಿ31.ಜೆಪಿಜಿ: ದಾವಣಗೆರೆಯಲ್ಲಿ 11ನೇ ರಾಷ್ಟ್ರೀಯ ಕೈಮಗ್ಗ ದಿನ ಕಾರ್ಯಕ್ರಮವನ್ನು ಜಿಪಂ ಸಿಇಒ ಗಿಟ್ಟೆ ಮಾಧವ ವಿಠಲ್ ರಾವ್ ಉದ್ಘಾಟಿಸಿದರು. -7ಕೆಡಿವಿಜಿ32.ಜೆಪಿಜಿ: ದಾವಣಗೆರೆಯಲ್ಲಿ ಜಿಪಂ ಸಿಇಒ ಗಿಟ್ಟೆ ಮಾಧವ ವಿಠಲ್ ರಾವ್ ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ಮಂಜೂರಾದ ಸಾಲ ಮಂಜೂರಾತಿ ಪತ್ರ ವಿತರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ