ವಕ್ಫ್ ಕಾಯ್ದೆ ತಿದ್ದುಪಡಿ ಸಮಿತಿಯಲ್ಲಿ ಕೋಮುವಾದಿ ವ್ಯಕ್ತಿಗಳ ಕೈಬಡಿ

KannadaprabhaNewsNetwork |  
Published : Aug 27, 2024, 01:40 AM IST
(ಸಾಂದರ್ಭಿಕ ಚಿತ್ರ) | Kannada Prabha

ಸಾರಾಂಶ

ವಕ್ಫ್ ಕಾಯ್ದೆ ತಿದ್ದುಪಡಿ ವಿಚಾರದಲ್ಲಿ ರಚನೆಯಾದ ಜಂಟಿ ಸಂಸದೀಯ ಸಮಿತಿಯಲ್ಲಿ ಕೋಮುವಾದಿ ಮನಸ್ಥಿತಿಯ ವ್ಯಕ್ತಿಗಳನ್ನು ತೆಗೆದು ಹಾಕುವಂತೆ ಹಿರಿಯ ವಕೀಲ ಅನೀಸ್ ಪಾಷಾ ಒತ್ತಾಯಿಸಿದ್ದಾರೆ.

ಕನ್ನಡಪ್ರಭ ವಾರ್ತೆ, ದಾವಣಗೆರೆ ವಕ್ಫ್ ಕಾಯ್ದೆ ತಿದ್ದುಪಡಿ ವಿಚಾರದಲ್ಲಿ ರಚನೆಯಾದ ಜಂಟಿ ಸಂಸದೀಯ ಸಮಿತಿಯಲ್ಲಿ ಕೋಮುವಾದಿ ಮನಸ್ಥಿತಿಯ ವ್ಯಕ್ತಿಗಳನ್ನು ತೆಗೆದು ಹಾಕುವಂತೆ ಹಿರಿಯ ವಕೀಲ ಅನೀಸ್ ಪಾಷಾ ಒತ್ತಾಯಿಸಿದ್ದಾರೆ.

ಮುಸ್ಲಿಂ ಸಮುದಾಯದ ಏಳಿಗೆಗಾಗಿ ಆ.8ರಂದು ಎನ್‌ಡಿಎ ಸರ್ಕಾರ ವಕ್ಫ್‌ ಕಾಯ್ದೆಯಲ್ಲಿ ಸುಮಾರು 44 ತಿದ್ದುಪಡಿ ಮಾಡುತ್ತಿದ್ದೇವೆಂಬ ನೆಪವೊಡ್ಡಿ, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಸದನದಲ್ಲಿ ಮಂಡಿಸಿದರು. ಅದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾದಾಗ ತಿದ್ದುಪಡಿ ಕಾಯ್ದೆ ಬಗ್ಗೆ ವಿವರ ಮಾಹಿತಿ ಪಡೆಯಲು ಅದನ್ನು ಜಂಟಿ ಸಂಸದೀಯ ಸಮಿತಿ ರಚಿಸಿ, ಅಧಿವೇಶನದ ಒಳಗಾಗಿ ವರದಿ ಸಲ್ಲಿಸಲು ನಿರ್ದೇಶನ ನೀಡಲಾಯಿತು ಎಂದು ಹೇಳಿದ್ದಾರೆ.

ಜಂಟಿ ಸಂಸದೀಯ ಸಮಿತಿಯಲ್ಲಿ ಕೆಲ ಸಂಸದರು, ರಾಜ್ಯಸಭಾ ಸದಸ್ಯರನ್ನು ನೇಮಿಸಲಾಗಿದೆ. ಈಗ ರಚಿಸಿದ ಜಂಟಿ ಸಂಸದೀಯ ಸಮಿತಿಯ ಕೆಲವರು ಅತ್ಯಂತ ಕೋಮುದ್ವೇಷ ಮತ್ತು ವಿಷ ತುಂಬಿಕೊಂಡಿದ್ದು, ಇಂತಹ ವ್ಯಕ್ತಿಗಳಿಂದ ಅಲ್ಪಸಂಖ್ಯಾತ ಸಮುದಾಯಕ್ಕೆ ನ್ಯಾಯ ಸಿಗಲು ಸಾಧ್ಯವಿಲ್ಲ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮುಸ್ಲಿಂರನ್ನು ಪಂಕ್ಚರ್ ಹಾಕುವವರು, ಎದೆಯಲ್ಲಿ ನಾಲ್ಕಕ್ಷರ ಇಲ್ಲದವರು ಅಂತೆಲ್ಲಾ ಪದೇಪದೇ ಹೀಯಾಳಿಸಿದ್ದಾರೆ. ಅವರು ಅಲ್ಪಸಂಖ್ಯಾತರನ್ನು ಕೀಳಾಗಿ ನೋಡುವ ವ್ಯಕ್ತಿ ಎಂದು ದೂರಿದ್ದಾರೆ.

ಕೊರೋನಾ ಸಂದರ್ಭ ಮುಸ್ಲಿಮರ ವಿರುದ್ಧ ದ್ವೇಷಭರಿತ ಹೇಳಿಕೆ ನೀಡಿದ್ದ ತೇಜಸ್ವಿ ಸೂರ್ಯ ಅವರಂಥವರಿಂದ ನ್ಯಾಯ ಸಮ್ಮತ ವರದಿ ಹೊರಗೆ ಬರಲು ಸಾಧ್ಯವಿಲ್ಲ. ವಾಸ್ತವದಲ್ಲಿ ರಚನೆಯಾದ ಜಂಟಿ ಸಂಸದೀಯ ಸಮಿತಿಗಳಲ್ಲಿ ಪಾರದರ್ಶಕ, ಸಮಾಜವಾದಿ, ಚಿಂತನೆಯುಳ್ಳ, ಪ್ರಾಮಾಣಿಕ, ಕೋಮು ದ್ವೇಷ ಹೊಂದದ ವ್ಯಕ್ತಿಗಳಿದ್ದರೆ ಮಾತ್ರ ಜನರಿಗೆ ಒಳಿತಾಗುವ ನೈಜ ವರದಿ ತಯಾರಾಗಲು ಸಾಧ್ಯ. ಸಮಿತಿಯಲ್ಲಿ ಕೋಮುವಾದಿ ಮನಸ್ಥಿತಿ ವ್ಯಕ್ತಿಗಳನ್ನು ತೆಗೆದು ಹಾಕಬೇಕು. ಪ್ರಾಮಾಣಿಕ, ಸಮಾನ ಮನಸ್ಸಿನ, ಮಾನವೀಯ ಮೌಲ್ಯ ಎತ್ತಿಹಿಡಿಯುವ, ಜಾತ್ಯತೀತ ಮನೋಭಾವದ ವ್ಯಕ್ತಿಗಳನ್ನು ನೇಮಿಸುವಂತೆ ಲೋಕಸಭೆ ಸ್ಪೀಕರ್ ಒ. ಬಿರ್ಲಾ ಅವರಿಗೆ ಅನೀಸ್ ಪಾಷಾ ಒತ್ತಾಯಿಸಿದ್ದಾರೆ.

- - - (ಸಾಂದರ್ಭಿಕ ಚಿತ್ರ)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅರಸೀಕೆರೆ ಗ್ರಾಮೀಣ ಬ್ಯಾಂಕ್ ನಲ್ಲಿ ಹಣಕ್ಕಾಗಿ ಗ್ರಾಹಕರ ಪರದಾಟ
ಸಬಲೀಕರಣವಾದರೆ ಮಾತ್ರ ಮಹಿಳಾ ಪ್ರಧಾನ ಸಮಾಜ ನಿರ್ಮಾಣ ಸಾಧ್ಯ-ಪಿಡಿಒ ವೆಂಕಟೇಶ