ಸಂತೋಷ ದೈವಜ್ಞ
ಈ ಬಾರಿ ಮಾವಿನ ಮರಗಳು ಭಾರಿ ಪ್ರಮಾಣದ ನೆನೆ (ಹೂವು) ಬಿಟ್ಟಿದ್ದು, ಉತ್ತಮ ಫಸಲು ಬರುವ ನಿರೀಕ್ಷೆ ಮೂಡಿಸಿದೆ. ಮಾವು ಬೆಳೆಗಾರರು ಗಿಡಗಳ ಪೋಷಣೆಯಲ್ಲಿ ಸದ್ಯ ನಿರತರಾಗಿದ್ದಾರೆ.
ಕೆಲವು ಬಾರಿ ಅವಧಿಗೂ ಮುನ್ನ, ಅಂದರೆ ನವೆಂಬರ್, ಡಿಸೆಂಬರ್ ತಿಂಗಳಲ್ಲಿಯೇ ಮೈತುಂಬ ಹೂಬಿಟ್ಟು ಹವಾಮಾನ್ಯ ವೈಪರಿತ್ಯ ಅಥವಾ ಕೀಟಬಾಧೆಗೆ ತುತ್ತಾಗಿ ಅರ್ಧದಷ್ಟು ಹೂವು ಉದುರಿ ನಾಶವಾಗುತ್ತಿತ್ತು. ಆದರೆ, ಈ ಬಾರಿ ಇದುವರೆಗೂ ಮೂಡಗಾಳಿ, ಅಂಟು ಇಬ್ಬನಿ ಅಥವಾ ಕೀಟಬಾಧೆ ಕಾಣಿಸಿಕೊಳ್ಳದೇ ಇರುವುದು ಮಾವು ಬೆಳೆಗಾರರಲ್ಲಿ ಸಮಾಧಾನ ಮೂಡಿಸಿದೆ.ತಾಲೂಕಿನಲ್ಲಿ ಸುಮಾರು ೫ ಸಾವಿರ ಎಕರೆ ಪ್ರದೇಶದಲ್ಲಿ ಆಪೂಸ್, ಪೈರಿ, ಇಸಾಡ್, ಸಿಂದೂಲಾ, ಮಾನಕೂರ, ಗಿಳಿಮಾವು, ಮಲ್ಲಿಕಾ, ಮಲಗೋಬಾ ಸೇರಿದಂತೆ ಹಲವಾರು ತಳಿಯ ಮಾವನ್ನು ಬೆಳೆಯಲಾಗಿದೆ. ಮಾವಿನ ಕಣಜ ಎಂದೇ ಪ್ರಸಿದ್ಧವಾಗಿರುವ ತಾಲೂಕಿನ ಪಾಳಾ ಭಾಗದಲ್ಲಿ ಲಕ್ಷಾಂತರ ರುಪಾಯಿ ನೀಡಿ ಗೇಣಿ ಹಿಡಿದ ದಲ್ಲಾಳಿಗಳು ಈಗಾಗಲೇ ತಮ್ಮ ಕಾರ್ಯ ಪ್ರಾರಂಭಿಸಿದ್ದಾರೆ. ತಾಲೂಕಿನ ಬಹುತೇಕ ಮಾವಿನ ತೋಪುಗಳನ್ನು ಗಿಡಗಳ ಸಂಖ್ಯೆ ಹಾಗೂ ಫಸಲು ಬಿಡುವ ಆಧಾರದ ಮೇಲೆ ಬೇರೆ ಬೇರೆ ಕಡೆಯಿಂದ ಬರುವ ಮಾವು ವ್ಯಾಪಾರಸ್ಥ ದಲ್ಲಾಳಿಗಳು ಗುತ್ತಿಗೆ ಪಡೆಯುತ್ತಾರೆ. ದಲ್ಲಾಳಿಗಳು ವರ್ಷ ವರ್ಷಕ್ಕೆ ದರ ಏರಿಸಿ, ಮಾವಿನ ಕೊಪ್ಪಲುಗಳನ್ನು ಗುತ್ತಿಗೆ ಪಡೆಯುತ್ತಾರೆ. ೩-೪ ತಿಂಗಳುಗಳ ಕಾಲ ಸಾವಿರಾರು ರುಪಾಯಿ ವೇತನ ನೀಡಿ ಕಾವಲುಗಾರನ್ನು ನೇಮಿಸಿ, ಔಷಧ ಸಿಂಪರಣೆ ಮಾಡುವುದು ಸೇರಿದಂತೆ ವಿವಿದ ರೀತಿಯ ನಿರ್ವಹಣೆ ಮಾಡುತ್ತಾರೆ. ಅದಕ್ಕಾಗಿ ಲಕ್ಷಾಂತರ ರುಪಾಯಿ ವ್ಯಯಿಸುತ್ತಾರೆ. ಪ್ರಾರಂಭದ ವಾತಾವರಣ ನೋಡಿ ಉತ್ತಮ ಫಸಲಿನ ನಿರೀಕ್ಷೆಯಲ್ಲಿ ಮಾವಿನ ತೋಟಗಳನ್ನು ಲಕ್ಷಾಂತರ ರುಪಾಯಿಗೆ ಗುತ್ತಿಗೆ ಪಡೆದು ಕೈ ಸುಟ್ಟುಕೊಂಡ ಅನುಭವ ಕೂಡ ಮಾವು ವ್ಯಾಪಾರಸ್ಥರಿಗಾಗಿದೆ.
ಇಲ್ಲಿ ಬತ್ತ, ಗೋವಿನಜೋಳ ಹೊರತುಪಡಿಸಿ ಇನ್ನಾವುದೇ ರೀತಿ ವಾಣಿಜ್ಯ ಬೆಳೆ ಬೆಳೆಯಲು ಅವಕಾಶ ಕಡಿಮೆ ಇರುವುದರಿಂದ ಇಲ್ಲಿಯ ಬಹುತೇಕ ರೈತರು ಹೆಚ್ಚಿನ ಪ್ರಮಾಣದಲ್ಲಿ ಮಾವಿನ ತೋಪುಗಳನ್ನು ಮಾಡಿಕೊಂಡಿದ್ದಾರೆ. ಇಲ್ಲಿಂದ ಸಾಕಷ್ಟು ಪ್ರಮಾಣದ ಮಾವಿನ ಬೆಳೆ ವಿವಿಧ ರಾಜ್ಯಗಳಿಗೂ ರವಾನೆಯಾಗುತ್ತದೆ. ಅಷ್ಟರಮಟ್ಟಿಗೆ ಇಲ್ಲಿ ಮಾವು ಬೆಳೆಯಲಾಗುತ್ತದೆ. ಆದರೆ ತೋಟಗಾರಿಕೆ ಇಲಾಖೆಯಿಂದ ಮಾವು ಬೆಳೆಗಾರರಿಗೆ ಸಮರ್ಪಕ ಮಾರ್ಗದರ್ಶನ ನೀಡುತ್ತಿಲ್ಲ, ಸರ್ಕಾರದಿಂದ ಬರುವ ಸಹಾಯಧನ ನೀಡಿ ಕೈತೊಳೆದುಕೊಳ್ಳುತ್ತಾರೆ ಎಂಬುದು ಮಾವು ಬೆಳೆಗಾರರ ಆರೋಪ. ಮಾವಿನ ಫಸಲಿನ ಪಾಲನೆ-ಪೋಷಣೆ ಬಗ್ಗೆ ರೈತರಿಗೆ ಸಮಗ್ರ ಮಾಹಿತಿ ನೀಡಬೇಕು ಎಂದು ಪ್ರಜ್ಞಾವಂತ ನಾಗರಿಕರ ಒತ್ತಾಯವಾಗಿದೆ. ಪೂರಕ ವಾತಾವರಣ
ಕೃಷ್ಣ ಕುಳ್ಳೂರ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು
ಒಳ್ಳೆಯ ಫಸಲು
ಮಹ್ಮದಗೌಸ ಪಾಟೀಲ, ಮಾವು ಬೆಳೆಗಾರರು