ಇಳಕಲ್ಲ: ಹುಬ್ಬಳ್ಳಿಯ ಯುವತಿ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ಇಲ್ಲಿನ ಅಂಬಿಗೇರ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಗೆ ಮನವಿ ಸಲ್ಲಿಸಲಾಯಿತು.
ಇಳಕಲ್ಲ: ಹುಬ್ಬಳ್ಳಿಯ ಯುವತಿ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ಇಲ್ಲಿನ ಅಂಬಿಗೇರ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಗೆ ಮನವಿ ಸಲ್ಲಿಸಲಾಯಿತು.
ಸಮಾಜದ ಅಧ್ಯಕ್ಷ ಬಸವರಾಜ ಜುಮಲಾಪೂರ ನೇತೃತ್ವದಲ್ಲಿ ಹಿರಿಯರು ಮತ್ತು ಯುವಕರು ತಹಸೀಲ್ದಾರ್ ಕಚೇರಿಗೆ ತೆರಳಿ ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು. ಕೊಲೆ ಮಾಡಿದ ವ್ಯಕ್ತಿಗೆ ಗಲ್ಲು ಶಿಕ್ಷೆ ನೀಡಬೇಕು, ಮೃತ ಅಂಜಲಿ ಕುಟುಂಬಕ್ಕೆ ₹ 50 ಲಕ್ಷ ಪರಿಹಾರ ಕೊಡಬೇಕು ಹಾಗೂ ಕುಟುಂಬದ ಓರ್ವ ವ್ಯಕ್ತಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಯಮನೂರ ಹಂಚಿನಾಳ ಆಗ್ರಹಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.