ಕನ್ನಡಪ್ರಭ ವಾರ್ತೆ ಉಡುಪಿ
ಅವರು ನೇಹಾ ಹಿರೇಮಠ್ ಅಮಾನುಷ ಹತ್ಯೆಯನ್ನು ಖಂಡಿಸಿ, ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ವತಿಯಿಂದ ಮಹಿಳಾ ಮೋರ್ಚಾ ನಗರಾಧ್ಯಕ್ಷೆ ಅಶ್ವಿನಿ ಆರ್. ಶೆಟ್ಟಿ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಮೊಂಬತ್ತಿ ಉರಿಸಿ ನಡೆದ ಶ್ರದ್ಧಾಂಜಲಿ ಮತ್ತು ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಕಾಂಗ್ರೆಸ್ ಸರ್ಕಾರದ ಅತಿಯಾದ ಮುಸ್ಲಿಂ ತುಷ್ಟಿಕರಣವೇ ಇಂತಹ ಘಟನೆಗಳು ನಡೆಯಲು ಕಾರಣ. ಸ್ವತಃ ಕಾಂಗ್ರೆಸ್ ಪಕ್ಷದ ಕಾರ್ಪೊರೇಟರ್ ಮಗಳಿಗೆ ನ್ಯಾಯ ಒದಗಿಸಲಾಗದ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು. ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ 10 ಸಾವಿರ ಕೋಟಿ ರು. ಕೊಡುತ್ತೇನೆ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಭಯೋತ್ಪಾದಕರು, ಬಾಂಬ್ ಇಡುವವರನ್ನು ಅಮಾಯಕರು, ಮೈ ಬ್ರದರ್ಸ್ ಎನ್ನುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇವಲ ಮುಸ್ಲಿಮರ ಓಟಿನಿಂದ ಗೆದ್ದು ಬಂದಿದ್ದಾರೆಯೇ ಎಂಬ ಬಗ್ಗೆ ಹಿಂದೂ ಸಮುದಾಯ ಗಂಭೀರವಾಗಿ ಆಲೋಚಿಸಿ ಚುನಾವಣೆಯಲ್ಲಿ ಮತ ಚಲಾಯಿಸುವ ಕಾಲ ಸನ್ನಿಹಿತವಾಗಿದೆ ಎಂದರು.ಈ ಸಂದರ್ಭದಲ್ಲಿ ಉಡುಪಿ ನಗರ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಸರೋಜಾ ಶಣೈ, ಶಾಂತಿ ಮನೋಜ್, ಉಪಾಧ್ಯಕ್ಷರಾದ ಪೂರ್ಣಿಮಾ ಶೆಟ್ಟಿ, ಮಾಯಾ ಕಾಮತ್, ಯಶೋಧ ರಾಜ್, ಪ್ರಭಾ ರಾವ್, ವಿದ್ಯಾ ಶಾಮ್ ಸುಂದರ್, ಪ್ರೀತಿ, ದೀಪಾ ಪೈ ಮತ್ತಿತರರು ಉಪಸ್ಥಿತರಿದ್ದರು.