ಗಂಗಾವತಿ: ಸಮೀಪದ ನವಲಿ ಮತ್ತು ಚಿಕ್ಕಡಂಕನಕಲ್ ಗ್ರಾಮದಲ್ಲಿ ಹನುಮದ್ ವ್ರತ ಅಂಗವಾಗಿ ಕಾರ್ತೀಕೋತ್ಸವ ಶ್ರದ್ಧಾ-ಭಕ್ತಿಯಿಂದ ಜರುಗಿತು. ನವಲಿಯ ಶ್ರೀ ಭೋಗಾಪುರೇಶ ದೇವಸ್ಥಾನದಲ್ಲಿ ಹನುಮದ್ ವ್ರಚಾರಣೆ ನಿಮಿತ್ತ ಭೋಗಾಪುರೇಶ ಸ್ವಾಮಿಗೆ ವಿಶೇಷ ಪಂಚಾಮೃತಾಭಿಷೇಕ, ಹೂವಿನ ಅಲಂಕಾರ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ಚಿಕ್ಕಡಂಕನಕಲ್ ಸಮೀಪದ ಚಿಕ್ಕಡಂಕನಕ್ ಗ್ರಾಮದ ಕೆರೆ ಮಾರುತೇಶ್ವರ ಸ್ವಾಮಿಯ ಕಾರ್ತೀಕೋತ್ಸವ ಶ್ರದ್ಧಾ-ಭಕ್ತಿಯಿಂದ ಜರುಗಿತು. ಬೆಳಗ್ಗೆ ಕೆರೆ ಮಾರೋತ್ಸವರ ಸ್ವಾಮಿಗೆ ವಿಶೇಷ ಪಂಚಾಮೃತಾಭಿಷೇಕ, ಹೂವಿನ ಅಲಂಕಾರ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಭಕ್ತರು ದೀಡ್ ನಮಸ್ಕಾರ ಹಾಕಿ ಭಕ್ತಿ ಸಮರ್ಪಿಸಿದರು. ಬೆಳಗ್ಗೆ ಉತ್ಸವ ಸಂಭ್ರಮದಿಂದ ಜರುಗಿತು.ಸತ್ಯನಾರಾಯಣ ದೇವಸ್ಥಾನ: ಗಂಗಾವತಿ ಸತ್ಯನಾರಾಯಣಪೇಟೆಯ ಸತ್ಯನಾರಾಯಣ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಮತ್ತು ಮುಕ್ಕೋಟಿ ದ್ವಾದಶಿ ದಿನದಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸತ್ಯನಾರಾಯಣಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಉತ್ತರ ದ್ವಾರಬಾಗಿಲಿನಲ್ಲಿ ವೈಕುಂಠ ಬಾಗಿಲು ತೆರೆದು ವಿಶೇಷ ಅಲಂಕಾರ ಮತ್ತು ಹುಂಡಿಯನ್ನು ನಿರ್ಮಿಸಲಾಗಿತ್ತು.