ಕನ್ನಡಪ್ರಭ ವಾರ್ತೆ ಮೂಲ್ಕಿ
ಮೂಲ್ಕಿ ಸಮೀಪದ ಅಂಗರಗುಡ್ಡೆ ಶ್ರೀರಾಮ ಭಜನಾ ಮಂದಿರದ ವತಿಯಿಂದ ಅಂಗರಗುಡ್ಡೆ ಶ್ರೀರಾಮ ಭಜನಾ ಮಂದಿರದಲ್ಲಿ ಆಧ್ಯಾತ್ಮಿಕ ಸಂಜೀವಿನಿ ಸಂಸ್ಥೆಯ ಸಹಭಾಗಿತ್ವದಲ್ಲಿ ನಡೆದ ಹನುಮಾನ್ ಚಾಲೀಸಾ ಧ್ಯಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಧ್ಯಾತ್ಮಿಕ ಸಂಜೀವಿನಿ ವತಿಯಿಂದ ಹನುಮಾನ್ ಚಾಲೀಸಾದ ಒಳ ನೋಟ. ಮಹತ್ವ, ಪ್ರಾಣ ಶಕ್ತಿಯ ಪರಿಚಯ, ಚಾಲೀಸ ಪಠಣದಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿ ಹೇಗೆ ಸಾಧ್ಯ ಎಂಬುದರ ಪ್ರಾಯೋಗಿಕ ಪರಿಚಯ ನೀಡಲಾಯಿತು.
ಈ ಸಂದರ್ಭ ಮಂದಿರದ ಸಮತಿಯ ಕೋಶಾಧಿಕಾರಿ ಸುಧೀರ್ ಶೆಟ್ಟಿ, ಉಪಾಧ್ಯಕ್ಷ ರೋಶನ್ ಸಾಲ್ಯಾನ್, ಕಾರ್ಯದರ್ಶಿ ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು. ಸುಮಾರು ನೂರಕ್ಕೂ ಹೆಚ್ಚು ಶಿಬಿರಾರ್ಥಿಗಳು ಭಾಗವಹಿಸಿದ್ದರು.